<figcaption>""</figcaption>.<p><strong>ನವದೆಹಲಿ: </strong>ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲುಹಾಗೂ ಕೋವಿಡ್–19 ವಿರುದ್ಧ ಹೋರಾಡಲು ಅನುಕೂಲವಾಗುವ ನಿಟ್ಟಿನಲ್ಲಿ ಆಯುಷ್ ಸಚಿವಾಲಯ ಕೆಲವೊಂದು ಮಾರ್ಗಸೂಚಿಗಳನ್ನು ಪಾಲಿಸುವಂತೆ ಸಲಹೆ ನೀಡಿದೆ.</p>.<p>ಮಂಗಳವಾರ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರು ಕೋವಿಡ್–19 ವಿರುದ್ಧದ ಹೋರಾಟವನ್ನು ಮುಂದುವರಿಸುವಂತೆ ಜನತೆಗೆ ಮನವಿ ಮಾಡಿದ್ದರು.</p>.<p>ನಮ್ಮ ದೈನಂದಿನ ಚಟುವಟಿಕೆಗಳೊಂದಿಗೆ ಆರೋಗ್ಯ, ಯೋಗಕ್ಷೇಮ ಸುಧಾರಿಸುವುದರ ಜೊತೆಗೆ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಆಯುಷ್ ಸಚಿವಾಲಯ ಸೂಚಿಸಿರುವ ಮಾರ್ಗಸೂಚಿಗಳು ಇಲ್ಲಿವೆ.</p>.<p>* ಪ್ರತಿನಿತ್ಯ ನಿಯಮಿತವಾಗಿ ಬಿಸಿ ನೀರು ಕುಡಿಯುವುದು</p>.<p>* ಪ್ರತಿದಿನ ಕನಿಷ್ಠ 30 ನಿಮಿಷಗಳ ಕಾಲ ಯೋಗಾಸನ ಮತ್ತು ಪ್ರಾಣಾಯಾಮ ಸೇರಿದಂತೆ ಧ್ಯಾನ ಮಾಡಿ.</p>.<p>* ಅಡುಗೆಯಲ್ಲಿ ಅರಶಿನ, ಜೀರಿಗೆ, ಕೊತ್ತಂಬರಿ ಮತ್ತು ಬೆಳ್ಳುಳ್ಳಿಯನ್ನು ಬಳಸುವುದು.</p>.<p>* ಪ್ರತಿದಿನ ಬೆಳಿಗ್ಗೆ ಒಂದು ಚಮಚ ಚ್ಯವನ್ಪ್ರಾಶ್ ಸೇವಿಸುವುದು.</p>.<p>* ತುಳಸಿ, ಡಾಲ್ಚಿನಿ, ಕರಿಮೆಣಸು, ಒಣಶುಂಠಿ ಹಾಗೂ ಒಣ ದ್ರಾಕ್ಷಿಯನ್ನು ಸೇರಿಸಿ ಕಷಾಯ ತಯಾರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಕುಡಿಯುವುದು (ಅಗತ್ಯವಿದ್ದಲ್ಲಿ ಬೆಲ್ಲ/ ಲಿಂಬೆರಸ ಬೆರಸುವುದು)</p>.<p>* ಬಿಸಿ ಹಾಲಿನೊಂದಿಗೆ ಅರ್ಧ ಚಮಚ ಅರಿಶಿನ ಪುಡಿ ಬೇರೆಸಿ ಸೇವಿಸುವುದು</p>.<p><strong>ಆಯುರ್ವೇದ ಸಲಹೆಗಳು</strong></p>.<p>*ಎಳ್ಳೆಣ್ಣೆ, ಕೊಬ್ಬರಿ ಎಣ್ಣೆ ಅಥವಾ ತುಪ್ಪವನ್ನು ದಿನಕ್ಕೆರಡು ಬಾರಿ ಮೂಗಿನೊಳಗೆ ಸವರಿಕೊಳ್ಳುವುದು.</p>.<p>* ಒಂದು ಚಮಚ ಎಳ್ಳೆಣ್ಣೆ ಅಥವಾ ತೆಂಗಿನ ಎಣ್ಣೆಯನ್ನು 2ರಿಂದ 3 ನಿಮಷ ಬಾಯಲ್ಲಿಟ್ಟುಕೊಂಡು ತಿರುಗಾಡಿಸಿ ಉಗುಳಬೇಕು. ಬಳಿಕ ಬಿಸಿ ನೀರಿನಿಂದ ಮುಕ್ಕಳಿಸಬೇಕು.</p>.<p><strong>ಒಣ ಕೆಮ್ಮು ಹಾಗೂ ಗಂಟಲು ಕೆರೆತ</strong></p>.<p>* ಪುದೀನ ಎಲೆ ಅಥವಾ ಓಮದಕಾಳುಗಳನ್ನು ಕುಡಿಯುವ ನೀರಿನಲ್ಲಿ ಹಾಕಿ ಹಬೆ(ಆವಿ)ಯನ್ನು ದಿನಕ್ಕೆ ಒಂದು ಬಾರಿ ತೆಗೆದುಕೊಳ್ಳವುದು.</p>.<p>* ಲವಂಗದ ಪುಡಿಯನ್ನು ಕಲ್ಲುಸಕ್ಕರೆ ಅಥವಾ ಜೇನು ತುಪ್ಪದೊಂದಿಗೆ ಸೇರಿಸಿ ದಿನಕ್ಕೆ 2–3 ಬಾರಿ ಸೇವಿಸುವುದು</p>.<p>ಈ ವಿಧಾನಗಳನ್ನು ರೋಗದ ಲಕ್ಷಣಗಳು ಕಡಿಮೆ ಇದ್ದಾಗ ಅನುಸರಿಸಿ ಹಾಗೇ ಮುಂದುವರಿದಲ್ಲಿ ವೈದ್ಯರನ್ನು ಸಂಪರ್ಕಿಸಿ</p>.<p><strong>ಇದನ್ನೂ ಓದಿ...<a href="https://www.prajavani.net/stories/stateregional/karnataka-government-bs-yediyurappa-ayush-treatment-for-covid-19-719968.html" target="_blank">ಕೋವಿಡ್-19: ಆಯುರ್ವೇದ ಚಿಕಿತ್ಸೆಗೆ ಸರ್ಕಾರ ಸಮ್ಮತಿ; 10 ರೋಗಿಗಳಿಗೆ ಔಷಧ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ನವದೆಹಲಿ: </strong>ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲುಹಾಗೂ ಕೋವಿಡ್–19 ವಿರುದ್ಧ ಹೋರಾಡಲು ಅನುಕೂಲವಾಗುವ ನಿಟ್ಟಿನಲ್ಲಿ ಆಯುಷ್ ಸಚಿವಾಲಯ ಕೆಲವೊಂದು ಮಾರ್ಗಸೂಚಿಗಳನ್ನು ಪಾಲಿಸುವಂತೆ ಸಲಹೆ ನೀಡಿದೆ.</p>.<p>ಮಂಗಳವಾರ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರು ಕೋವಿಡ್–19 ವಿರುದ್ಧದ ಹೋರಾಟವನ್ನು ಮುಂದುವರಿಸುವಂತೆ ಜನತೆಗೆ ಮನವಿ ಮಾಡಿದ್ದರು.</p>.<p>ನಮ್ಮ ದೈನಂದಿನ ಚಟುವಟಿಕೆಗಳೊಂದಿಗೆ ಆರೋಗ್ಯ, ಯೋಗಕ್ಷೇಮ ಸುಧಾರಿಸುವುದರ ಜೊತೆಗೆ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಆಯುಷ್ ಸಚಿವಾಲಯ ಸೂಚಿಸಿರುವ ಮಾರ್ಗಸೂಚಿಗಳು ಇಲ್ಲಿವೆ.</p>.<p>* ಪ್ರತಿನಿತ್ಯ ನಿಯಮಿತವಾಗಿ ಬಿಸಿ ನೀರು ಕುಡಿಯುವುದು</p>.<p>* ಪ್ರತಿದಿನ ಕನಿಷ್ಠ 30 ನಿಮಿಷಗಳ ಕಾಲ ಯೋಗಾಸನ ಮತ್ತು ಪ್ರಾಣಾಯಾಮ ಸೇರಿದಂತೆ ಧ್ಯಾನ ಮಾಡಿ.</p>.<p>* ಅಡುಗೆಯಲ್ಲಿ ಅರಶಿನ, ಜೀರಿಗೆ, ಕೊತ್ತಂಬರಿ ಮತ್ತು ಬೆಳ್ಳುಳ್ಳಿಯನ್ನು ಬಳಸುವುದು.</p>.<p>* ಪ್ರತಿದಿನ ಬೆಳಿಗ್ಗೆ ಒಂದು ಚಮಚ ಚ್ಯವನ್ಪ್ರಾಶ್ ಸೇವಿಸುವುದು.</p>.<p>* ತುಳಸಿ, ಡಾಲ್ಚಿನಿ, ಕರಿಮೆಣಸು, ಒಣಶುಂಠಿ ಹಾಗೂ ಒಣ ದ್ರಾಕ್ಷಿಯನ್ನು ಸೇರಿಸಿ ಕಷಾಯ ತಯಾರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಕುಡಿಯುವುದು (ಅಗತ್ಯವಿದ್ದಲ್ಲಿ ಬೆಲ್ಲ/ ಲಿಂಬೆರಸ ಬೆರಸುವುದು)</p>.<p>* ಬಿಸಿ ಹಾಲಿನೊಂದಿಗೆ ಅರ್ಧ ಚಮಚ ಅರಿಶಿನ ಪುಡಿ ಬೇರೆಸಿ ಸೇವಿಸುವುದು</p>.<p><strong>ಆಯುರ್ವೇದ ಸಲಹೆಗಳು</strong></p>.<p>*ಎಳ್ಳೆಣ್ಣೆ, ಕೊಬ್ಬರಿ ಎಣ್ಣೆ ಅಥವಾ ತುಪ್ಪವನ್ನು ದಿನಕ್ಕೆರಡು ಬಾರಿ ಮೂಗಿನೊಳಗೆ ಸವರಿಕೊಳ್ಳುವುದು.</p>.<p>* ಒಂದು ಚಮಚ ಎಳ್ಳೆಣ್ಣೆ ಅಥವಾ ತೆಂಗಿನ ಎಣ್ಣೆಯನ್ನು 2ರಿಂದ 3 ನಿಮಷ ಬಾಯಲ್ಲಿಟ್ಟುಕೊಂಡು ತಿರುಗಾಡಿಸಿ ಉಗುಳಬೇಕು. ಬಳಿಕ ಬಿಸಿ ನೀರಿನಿಂದ ಮುಕ್ಕಳಿಸಬೇಕು.</p>.<p><strong>ಒಣ ಕೆಮ್ಮು ಹಾಗೂ ಗಂಟಲು ಕೆರೆತ</strong></p>.<p>* ಪುದೀನ ಎಲೆ ಅಥವಾ ಓಮದಕಾಳುಗಳನ್ನು ಕುಡಿಯುವ ನೀರಿನಲ್ಲಿ ಹಾಕಿ ಹಬೆ(ಆವಿ)ಯನ್ನು ದಿನಕ್ಕೆ ಒಂದು ಬಾರಿ ತೆಗೆದುಕೊಳ್ಳವುದು.</p>.<p>* ಲವಂಗದ ಪುಡಿಯನ್ನು ಕಲ್ಲುಸಕ್ಕರೆ ಅಥವಾ ಜೇನು ತುಪ್ಪದೊಂದಿಗೆ ಸೇರಿಸಿ ದಿನಕ್ಕೆ 2–3 ಬಾರಿ ಸೇವಿಸುವುದು</p>.<p>ಈ ವಿಧಾನಗಳನ್ನು ರೋಗದ ಲಕ್ಷಣಗಳು ಕಡಿಮೆ ಇದ್ದಾಗ ಅನುಸರಿಸಿ ಹಾಗೇ ಮುಂದುವರಿದಲ್ಲಿ ವೈದ್ಯರನ್ನು ಸಂಪರ್ಕಿಸಿ</p>.<p><strong>ಇದನ್ನೂ ಓದಿ...<a href="https://www.prajavani.net/stories/stateregional/karnataka-government-bs-yediyurappa-ayush-treatment-for-covid-19-719968.html" target="_blank">ಕೋವಿಡ್-19: ಆಯುರ್ವೇದ ಚಿಕಿತ್ಸೆಗೆ ಸರ್ಕಾರ ಸಮ್ಮತಿ; 10 ರೋಗಿಗಳಿಗೆ ಔಷಧ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>