<p><strong>ಜೈಪುರ:</strong> ಭಾರತದ ಮಹಿಳೆಯರು ಎದುರಿಸುತ್ತಿರುವ ಅತ್ಯಂತ ಗಂಭೀರ ಆರೋಗ್ಯದ ಸಮಸ್ಯೆಗಳಲ್ಲಿ ಗರ್ಭಕಂಠದ ಕ್ಯಾನ್ಸರ್ ಒಂದಾಗಿದೆ ಎಂದು ವೈದ್ಯಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.</p><p>ಗರ್ಭಕಂಠದ ಕ್ಯಾನ್ಸರ್ ಕ್ಯಾನ್ಸರ್ ತಡೆಗಟ್ಟಲು ಜಾಗೃತಿ, ಹ್ಯೂಮನ್ ಪ್ಯಾಪಿಲೋಮ ವೈರಸ್ (HPV) ಲಸಿಕೆ ಮತ್ತು ಆರಂಭಿಕ ತಪಾಸಣೆಯ ತುರ್ತು ಅಗತ್ಯತೆಗಳ ಕುರಿತು ವೈದ್ಯಕೀಯ ತಜ್ಞರು ಮಾಹಿತಿ ನೀಡಿದ್ದಾರೆ.</p><p>ಜೈಪುರದಲ್ಲಿ ಭಾನುವಾರ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯ ಸ್ತ್ರೀರೋಗ ತಜ್ಞೆ ಡಾ. ವೀಣಾ ಆಚಾರ್ಯ, ಗರ್ಭಕಂಠ ಕ್ಯಾನ್ಸರ್ ಕುರಿತು ಆರಂಭದಲ್ಲೇ ಎಚ್ಚರಿಕೆ ವಹಿಸುವುದು ಉತ್ತಮ. ತಡವಾದರೆ ಇದು ಸಾವಿರಾರು ಜೀವಗಳನ್ನು ಬಲಿ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.</p><p>‘ಭಾರತದಲ್ಲಿ ಪ್ರತಿ 8 ನಿಮಿಷಕ್ಕೆ ಓರ್ವ ಮಹಿಳೆಯಲ್ಲಿ ಗರ್ಭಕಂಠದ ಕ್ಯಾನ್ಸರ್ ಇರುವುದು ಪತ್ತೆಯಾಗುತ್ತಿದೆ. ರೋಗವನ್ನು ತಡವಾಗಿ ಪತ್ತೆ ಹಚ್ಚುತ್ತಿರುವುದರಿಂದ ಅನೇಕರು ಸಾಯುತ್ತಿದ್ದಾರೆ’ ಎಂದು ಅವರು ಹೇಳಿದರು.</p><p>‘ಗರ್ಭಕಂಠ ಕ್ಯಾನ್ಸರ್ ಪ್ರಾಥಮಿಕವಾಗಿ ಹ್ಯೂಮನ್ ಪ್ಯಾಪಿಲೋಮ ವೈರಸ್ (HPV) ನಿಂದ ಉಂಟಾಗುತ್ತದೆ. ಸದ್ಯ, ಈ ರೋಗಕ್ಕೆ ಪರಿಣಾಮಕಾರಿ ಹೆಚ್ಪಿವಿ ಲಸಿಕೆ ಲಭ್ಯವಿರುವುದು ನಮ್ಮ ಅದೃಷ್ಟ. 9 ರಿಂದ 14 ವರ್ಷ ವಯೋಮಾನದ ಮಕ್ಕಳಿಗೆ ಈ ಲಸಿಕೆ ನೀಡುವುದರಿಂದ ಭವಿಷ್ಯದಲ್ಲಿ ಶೇ 90ರಷ್ಟು ಗರ್ಭಗಂಠದ ಕ್ಯಾನ್ಸರ್ ಪ್ರಕರಣಗಳನ್ನು ತಡೆಯಬಹುದು’ ಎಂದು ಅವರು ಹೇಳಿದರು.</p><p>ವಿಶ್ವ ಆರೋಗ್ಯ ಸಂಸ್ಥೆ (WHO) ನವೆಂಬರ್ 17ನ್ನು ವಿಶ್ವ ಗರ್ಭಕಂಠದ ಕ್ಯಾನ್ಸರ್ ನಿರ್ಮೂಲನ ದಿನವೆಂದು ಗುರುತಿಸಿದೆ.</p>.ಪುರುಷರಲ್ಲಿ ಸ್ತನ ಕ್ಯಾನ್ಸರ್.. ಮುನ್ನೆಚ್ಚರಿಕೆ ಇರಲಿ.. ಇದೆ ಸೂಕ್ತ ಚಿಕಿತ್ಸೆ.ಗರ್ಭಕಂಠ ಕ್ಯಾನ್ಸರ್: ಎಚ್ಪಿವಿ ಲಸಿಕೆ ವಿತರಣೆಗೆ ಆದೇಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ:</strong> ಭಾರತದ ಮಹಿಳೆಯರು ಎದುರಿಸುತ್ತಿರುವ ಅತ್ಯಂತ ಗಂಭೀರ ಆರೋಗ್ಯದ ಸಮಸ್ಯೆಗಳಲ್ಲಿ ಗರ್ಭಕಂಠದ ಕ್ಯಾನ್ಸರ್ ಒಂದಾಗಿದೆ ಎಂದು ವೈದ್ಯಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.</p><p>ಗರ್ಭಕಂಠದ ಕ್ಯಾನ್ಸರ್ ಕ್ಯಾನ್ಸರ್ ತಡೆಗಟ್ಟಲು ಜಾಗೃತಿ, ಹ್ಯೂಮನ್ ಪ್ಯಾಪಿಲೋಮ ವೈರಸ್ (HPV) ಲಸಿಕೆ ಮತ್ತು ಆರಂಭಿಕ ತಪಾಸಣೆಯ ತುರ್ತು ಅಗತ್ಯತೆಗಳ ಕುರಿತು ವೈದ್ಯಕೀಯ ತಜ್ಞರು ಮಾಹಿತಿ ನೀಡಿದ್ದಾರೆ.</p><p>ಜೈಪುರದಲ್ಲಿ ಭಾನುವಾರ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯ ಸ್ತ್ರೀರೋಗ ತಜ್ಞೆ ಡಾ. ವೀಣಾ ಆಚಾರ್ಯ, ಗರ್ಭಕಂಠ ಕ್ಯಾನ್ಸರ್ ಕುರಿತು ಆರಂಭದಲ್ಲೇ ಎಚ್ಚರಿಕೆ ವಹಿಸುವುದು ಉತ್ತಮ. ತಡವಾದರೆ ಇದು ಸಾವಿರಾರು ಜೀವಗಳನ್ನು ಬಲಿ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.</p><p>‘ಭಾರತದಲ್ಲಿ ಪ್ರತಿ 8 ನಿಮಿಷಕ್ಕೆ ಓರ್ವ ಮಹಿಳೆಯಲ್ಲಿ ಗರ್ಭಕಂಠದ ಕ್ಯಾನ್ಸರ್ ಇರುವುದು ಪತ್ತೆಯಾಗುತ್ತಿದೆ. ರೋಗವನ್ನು ತಡವಾಗಿ ಪತ್ತೆ ಹಚ್ಚುತ್ತಿರುವುದರಿಂದ ಅನೇಕರು ಸಾಯುತ್ತಿದ್ದಾರೆ’ ಎಂದು ಅವರು ಹೇಳಿದರು.</p><p>‘ಗರ್ಭಕಂಠ ಕ್ಯಾನ್ಸರ್ ಪ್ರಾಥಮಿಕವಾಗಿ ಹ್ಯೂಮನ್ ಪ್ಯಾಪಿಲೋಮ ವೈರಸ್ (HPV) ನಿಂದ ಉಂಟಾಗುತ್ತದೆ. ಸದ್ಯ, ಈ ರೋಗಕ್ಕೆ ಪರಿಣಾಮಕಾರಿ ಹೆಚ್ಪಿವಿ ಲಸಿಕೆ ಲಭ್ಯವಿರುವುದು ನಮ್ಮ ಅದೃಷ್ಟ. 9 ರಿಂದ 14 ವರ್ಷ ವಯೋಮಾನದ ಮಕ್ಕಳಿಗೆ ಈ ಲಸಿಕೆ ನೀಡುವುದರಿಂದ ಭವಿಷ್ಯದಲ್ಲಿ ಶೇ 90ರಷ್ಟು ಗರ್ಭಗಂಠದ ಕ್ಯಾನ್ಸರ್ ಪ್ರಕರಣಗಳನ್ನು ತಡೆಯಬಹುದು’ ಎಂದು ಅವರು ಹೇಳಿದರು.</p><p>ವಿಶ್ವ ಆರೋಗ್ಯ ಸಂಸ್ಥೆ (WHO) ನವೆಂಬರ್ 17ನ್ನು ವಿಶ್ವ ಗರ್ಭಕಂಠದ ಕ್ಯಾನ್ಸರ್ ನಿರ್ಮೂಲನ ದಿನವೆಂದು ಗುರುತಿಸಿದೆ.</p>.ಪುರುಷರಲ್ಲಿ ಸ್ತನ ಕ್ಯಾನ್ಸರ್.. ಮುನ್ನೆಚ್ಚರಿಕೆ ಇರಲಿ.. ಇದೆ ಸೂಕ್ತ ಚಿಕಿತ್ಸೆ.ಗರ್ಭಕಂಠ ಕ್ಯಾನ್ಸರ್: ಎಚ್ಪಿವಿ ಲಸಿಕೆ ವಿತರಣೆಗೆ ಆದೇಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>