ಆಸ್ಪತ್ರೆಯ ಹೃದ್ರೋಗತಜ್ಞ ಡಾ.ಕೆ.ಪಿ. ಶ್ರೀಹರಿ ದಾಸ್, ‘ಕೋವಿಡ್ನಿಂದ ಹೃದ್ರೋಗಿಗಳು ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿರುವುದು ಗಮನಕ್ಕೆ ಬಂದಿದೆ. ಸಾಂಕ್ರಾಮಿಕ ರೋಗದ ಕಾರಣ ಜನತೆ ಮನೆಬಿಟ್ಟು ಹೊರಬರಲು ಭಯಪಡುತ್ತಿದ್ದಾರೆ. ಇದರಿಂದಾಗಿ ಕೆಲವರಲ್ಲಿ ಹೃದಯ ಸಮಸ್ಯೆ ಸಂಕೀರ್ಣ ಸ್ವರೂಪ ಪಡೆದುಕೊಳ್ಳುತ್ತಿದೆ. ಹೀಗಾಗಿಯೇ ರೋಗಿಗಳ ಮನೆ ಬಾಗಿಲಿಗೆ ತೆರಳಿ, ತಪಾಸಣೆ ಮಾಡುವ ಅಭಿಯಾನ ಹಮ್ಮಿಕೊಂಡಿದ್ದೇವೆ’ ಎಂದರು.