ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೃದಯ ಸಮಸ್ಯೆ: ಮನೆ ಬಾಗಿಲಲ್ಲಿ ತಪಾಸಣೆ

Last Updated 3 ನವೆಂಬರ್ 2020, 18:51 IST
ಅಕ್ಷರ ಗಾತ್ರ

ಬೆಂಗಳೂರು: ಜಯನಗರದ ಮಣಿಪಾಲ್ ಆಸ್ಪತ್ರೆಯು ಹೃದಯ ಆರೋಗ್ಯ ತಪಾಸಣೆ ಅಭಿಯಾನ ಹಮ್ಮಿಕೊಂಡಿದ್ದು, ವೈದ್ಯರು ರೋಗಿಗಳ ಮನೆ ಬಾಗಿಲಿಗೆ ತೆರಳಿ ತಪಾಸಣೆ ನಡೆಸಲಿದ್ದಾರೆ.

ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದ ತೇಜಸ್ವಿ ಸೂರ್ಯ ಅವರು ಈ ಅಭಿಯಾನಕ್ಕೆ ಚಾಲನೆ ನೀಡಿದರು.

ಆಸ್ಪತ್ರೆಯ ಹೃದ್ರೋಗತಜ್ಞ ಡಾ.ಕೆ.ಪಿ. ಶ್ರೀಹರಿ ದಾಸ್, ‘ಕೋವಿಡ್‌ನಿಂದ ಹೃದ್ರೋಗಿಗಳು ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿರುವುದು ಗಮನಕ್ಕೆ ಬಂದಿದೆ. ಸಾಂಕ್ರಾಮಿಕ ರೋಗದ ಕಾರಣ ಜನತೆ ಮನೆಬಿಟ್ಟು ಹೊರಬರಲು ಭಯಪಡುತ್ತಿದ್ದಾರೆ. ಇದರಿಂದಾಗಿ ಕೆಲವರಲ್ಲಿ ಹೃದಯ ಸಮಸ್ಯೆ ಸಂಕೀರ್ಣ ಸ್ವರೂಪ ಪಡೆದುಕೊಳ್ಳುತ್ತಿದೆ. ಹೀಗಾಗಿಯೇ ರೋಗಿಗಳ ಮನೆ ಬಾಗಿಲಿಗೆ ತೆರಳಿ, ತಪಾಸಣೆ ಮಾಡುವ ಅಭಿಯಾನ ಹಮ್ಮಿಕೊಂಡಿದ್ದೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT