ಮೃತರನ್ನು ಪ್ರದೀಪ್ ಶ್ರೀರಾಮ್ (45) ಎಂದು ಗುರುತಿಸಲಾಗಿದೆ. ಶ್ರೀರಾಮ್ ಸೇರಿ ಮೂವರು ಘಟಕದಲ್ಲಿ ಕೆಲಸ ಮಾಡುತ್ತಿದ್ದಾಗ ಬಾಯ್ಲರ್ ಸ್ಪೋಟಗೊಂಡಿದೆ. ಹೊರ ಹೋಗಲು ಮೂವರು ಓಡಲು ಆರಂಭಿಸಿದ್ದು, ಈ ಸಂದರ್ಭದಲ್ಲಿ ಮೊದಲ ಮಹಡಿಯಿಂದ ನೆಲ ಮಹಡಿಗೆ ಬಿದ್ದು ತೀವ್ರವಾಗಿ ಗಾಯಗೊಂಡ ಶ್ರೀರಾಮ್ ಮೃತಪಟ್ಟಿದ್ದಾರೆ ಎಂದು ಕಮಲೇಶ್ವರ ಠಾಣೆ ಪೊಲೀಸರು ತಿಳಿಸಿದ್ದಾರೆ.