ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್: ವಾಸಿಯಾದರೂ ಕಾಡುವ ಕಾಯಿಲೆ

ಕೊರೊನಾ ಒಂದಷ್ಟು ತಿಳಿಯೋಣ
Last Updated 4 ನವೆಂಬರ್ 2020, 17:50 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ನಿಂದ ಚೇತರಿಸಿಕೊಂಡವರಲ್ಲಿ ಕೆಲವರಿಗೆ ಉಸಿರಾಟ, ಸಂಧಿ ನೋವು, ದೃಷ್ಟಿ ದೋಷ, ನೆನಪಿನ ಶಕ್ತಿ ನಾಶ ಸೇರಿದಂತೆ ವಿವಿಧ ಸಮಸ್ಯೆ ಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಹಾಗಾಗಿ ಗುಣಮುಖರಾದರೂ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ವೈದ್ಯರು ಸೂಚಿಸಿದ್ದಾರೆ.

ಮಧುಮೇಹ, ಅಧಿಕ ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆಗಳು ಸೇರಿದಂತೆ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿರುವವರಿಗೆ ಕೋವಿಡ್‌ ಸೋಂಕು ಹೆಚ್ಚಿನ ಅಪಾಯ ಉಂಟುಮಾಡಲಿದೆ ಎನ್ನುವುದು ವೈದ್ಯಕೀಯ ಸಂಶೋ ಧನೆಗಳಿಂದ ದೃಢಪಟ್ಟಿದೆ. ಕಾಯಿಲೆ ಇರುವವರು ಸೋಂಕಿನಿಂದ ಚೇತರಿಸಿಕೊಂಡ ಬಳಿಕವೂ ಅವರ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಗಳು ಬೀರುವ ಸಾಧ್ಯತೆಗಳಿರುತ್ತವೆ. ಕೆಲವರಿಗೆ ಸೋಂಕು ಮರುಕಳಿಸಬಹುದು ಎಂದು ತಜ್ಞರು ಸಂದೇಹ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪೂರಕ ಎಂಬಂತೆ ಚೇತರಿಸಿಕೊಂಡವರಿಗೆ ಪುನರ್ವಸತಿ ಕೇಂದ್ರಗಳನ್ನು ಕೂಡ ರಾಜ್ಯದಲ್ಲಿ ಪ್ರಾರಂಭಿಸಲಾಗುತ್ತಿದೆ.

‘ಕೋವಿಡ್‌ ಶ್ವಾಸಕೋಶದ ಜತೆಗೆ ವಿವಿಧ ಅಂಗಗಳ ಮೇಲೆ ಕೂಡ ದಾಳಿ ನಡೆಸಲಿದೆ. ಚೇತರಿಸಿಕೊಂಡ ಬಳಿಕ ಕೆಲ ದಿನಗಳು ಅವರ ಆರೋಗ್ಯದ ಮೇಲೆ ನಿಗಾ ಇಡಬೇಕಾಗುತ್ತದೆ. ಸಮಸ್ಯೆಗಳು ಕಾಣಿಸಿಕೊಂಡಲ್ಲಿ ಅಂತಹವರು ಸೂಕ್ತ ಆರೈಕೆಗೆ ಒಳಪಡಬೇಕು. ಉಸಿರಾಟದ ಸಮಸ್ಯೆ, ಜ್ವರ, ತಲೆನೋವು, ದೃಷ್ಟಿದೋಷ ಸೇರಿದಂತೆ ವಿವಿಧ ಸಮಸ್ಯೆಗಳು ಕಾಣಿಸಿಕೊಂಡಿವೆ ಎಂದು ಕೆಲ ಗುಣಮುಖರು ಆಸ್ಪತ್ರೆಗೆ ಬರುತ್ತಿದ್ದಾರೆ’ ಎಂದು ಜಯನಗರದ ಮಣಿಪಾಲ್ ಆಸ್ಪತ್ರೆಯ ಶ್ವಾಸಕೋಶ ತಜ್ಞ ಡಾ.ಎಂ.ಕೆ. ರಾಘವೇಂದ್ರ ತಿಳಿಸಿದರು.

ವೃದ್ಧರಿಗೆ ಹೆಚ್ಚಿನ ಅಪಾಯ: ‘ಕೋವಿಡ್ ಪೀಡಿತರು ಗುಣಮುಖರಾದರೂ ಶ್ವಾಸಕೋಶದ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಕೆಲವರ ಶ್ವಾಸಕೋಶ ಗಟ್ಟಿಯಾಗುತ್ತದೆ. ಇನ್ನೂ ಕೆಲವರಿಗೆ ಉಸಿರಾಟದ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಆಸ್ಪತ್ರೆಯಿಂದ ಮನೆಗೆ ತೆರಳುವಾಗಲೇ ಉಸಿರಾಟಕ್ಕೆ ಸಂಬಂಧಿಸಿದ ವ್ಯಾಯಾಮ, ಆಹಾರ ಕ್ರಮಗಳ ಬಗ್ಗೆ ತಿಳಿಸಿಕೊಡಲಾಗುತ್ತದೆ. ಅದನ್ನು ನಿಯಮಿತವಾಗಿ ಪಾಲಿಸಬೇಕು’ ಎಂದರು.

‘ರಕ್ತದಲ್ಲಿನ ಆಮ್ಲಜನಕ ಪ್ರಮಾಣವನ್ನು ಪರೀಕ್ಷೆ ಮಾಡಿಕೊಳ್ಳುತ್ತಿರಬೇಕು. ಏರುಪೇರಾದಲ್ಲಿ ಆಸ್ಪತ್ರೆಗೆ ತೆರಳಿ, ತಪಾಸಣೆಗೆ ಒಳಪಡುವುದು ಉತ್ತಮ. ವೃದ್ಧರು ಹಾಗೂ ಮಧುಮೇಹ ಸೇರಿದಂತೆ ವಿವಿಧ ಕಾಯಿಲೆಗಳುಳ್ಳವರಿಗೆ ಹೆಚ್ಚಿನ ಅಪಾಯ ಇರಲಿದೆ. ಹಾಗಾಗಿ ಲಸಿಕೆ ಅಥವಾ ಔಷಧ ತಯಾರಾಗುವವರೆಗೂ ಹೆಚ್ಚಿನ ಕಾಳಜಿ ವಹಿಸಬೇಕು’ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT