<p><strong>ಬೆಂಗಳೂರು:</strong> ಪ್ರಸ್ತುತ ರಾಜ್ಯದಲ್ಲಿ ಬೇಸಿಗೆ ಕಾಲ ಆರಂಭವಾಗಿದೆ. ಈ ಅವಧಿಯಲ್ಲಿ ಅತಿಯಾದ ಉಷ್ಣಾಂಶದಿಂದ ನಾನಾ ರೀತಿಯ ಅನಾರೋಗ್ಯ ಪರಿಸ್ಥಿತಿಗಳು ಸಂಭವಿಸುವ ಸಾಧ್ಯತೆಗಳಿವೆ. ಹೀಗಾಗಿ, ಆರೋಗ್ಯ ಇಲಾಖೆ ಹಲವು ಸಲಹೆಗಳನ್ನು ನೀಡಿದೆ.</p>.<p>ಈ ಬಗ್ಗೆ ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ಅವರು ಸುತ್ತೋಲೆ ಹೊರಡಿಸಿದ್ದಾರೆ.</p>.<p class="Subhead">ಬೇಸಿಗೆ ಕಾಲದಲ್ಲಿ ಅತಿಯಾದ ಉಷ್ಣಾಂಶದಿಂದ ಸಂಭವಿಸುವ ಅನಾರೋಗ್ಯ ಪರಿಸ್ಥಿತಿಗಳನ್ನು ತಡೆಯಲು ಸೂಕ್ತ ಕ್ರಮಕೈಗಳನ್ನು ಕೈಗೊಳ್ಳುವಂತೆ ಬಿಬಿಎಂಪಿ ಮತ್ತು ಜಿಲ್ಲಾಡಳಿತಗಳಿಗೆ ಸೂಚಿಸಿದ್ದಾರೆ.</p>.<p class="Subhead"><strong>ಸಲಹೆಗಳು:</strong> ಬಾಯಾರಿಕೆ ಇಲ್ಲದಿದ್ದರೂ ಪದೇ ಪದೇ ನೀರು ಕುಡಿಯಬೇಕು. ಪ್ರಯಾಣ ಸಮಯದಲ್ಲೂ ನೀರು ತೆಗೆದುಕೊಂಡು ಹೋಗಬೇಕು. ಹಣ್ಣು ಮತ್ತು ತರಕಾರಿಗಳನ್ನು ಹೆಚ್ಚು ಸೇವಿಸಬೇಕು. ಹತ್ತಿ ಬಟ್ಟೆ ಧರಿಸುವುದು ಉತ್ತಮ.</p>.<p><strong>ರಾಜಧಾನಿಯಲ್ಲಿ ಮೇಲ್ಮೈ ಬಿಸಿ ಗಾಳಿ<br />ಬೆಂಗಳೂರು:</strong> ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳಲ್ಲಿ ಮೇಲ್ಮೈಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.</p>.<p>ಉಷ್ಣಾಂಶವು ಗರಿಷ್ಠ 32 ಡಿಗ್ರಿ ಸೆಲಿಯಸ್ಸ್ ಹಾಗೂ ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ. ಉಳಿದಂತೆ ನಗರದಲ್ಲಿ ನಿರ್ಮಲ ಆಕಾಶ ಇರಲಿದೆ. ರಾಜಧಾನಿಯಲ್ಲಿ ಕಳೆದ ಎರಡು ದಿನಗಳಿಂದ ಬೇಸಿಗೆಯ ಧಗೆ ಕಾಣಿಸಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪ್ರಸ್ತುತ ರಾಜ್ಯದಲ್ಲಿ ಬೇಸಿಗೆ ಕಾಲ ಆರಂಭವಾಗಿದೆ. ಈ ಅವಧಿಯಲ್ಲಿ ಅತಿಯಾದ ಉಷ್ಣಾಂಶದಿಂದ ನಾನಾ ರೀತಿಯ ಅನಾರೋಗ್ಯ ಪರಿಸ್ಥಿತಿಗಳು ಸಂಭವಿಸುವ ಸಾಧ್ಯತೆಗಳಿವೆ. ಹೀಗಾಗಿ, ಆರೋಗ್ಯ ಇಲಾಖೆ ಹಲವು ಸಲಹೆಗಳನ್ನು ನೀಡಿದೆ.</p>.<p>ಈ ಬಗ್ಗೆ ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ಅವರು ಸುತ್ತೋಲೆ ಹೊರಡಿಸಿದ್ದಾರೆ.</p>.<p class="Subhead">ಬೇಸಿಗೆ ಕಾಲದಲ್ಲಿ ಅತಿಯಾದ ಉಷ್ಣಾಂಶದಿಂದ ಸಂಭವಿಸುವ ಅನಾರೋಗ್ಯ ಪರಿಸ್ಥಿತಿಗಳನ್ನು ತಡೆಯಲು ಸೂಕ್ತ ಕ್ರಮಕೈಗಳನ್ನು ಕೈಗೊಳ್ಳುವಂತೆ ಬಿಬಿಎಂಪಿ ಮತ್ತು ಜಿಲ್ಲಾಡಳಿತಗಳಿಗೆ ಸೂಚಿಸಿದ್ದಾರೆ.</p>.<p class="Subhead"><strong>ಸಲಹೆಗಳು:</strong> ಬಾಯಾರಿಕೆ ಇಲ್ಲದಿದ್ದರೂ ಪದೇ ಪದೇ ನೀರು ಕುಡಿಯಬೇಕು. ಪ್ರಯಾಣ ಸಮಯದಲ್ಲೂ ನೀರು ತೆಗೆದುಕೊಂಡು ಹೋಗಬೇಕು. ಹಣ್ಣು ಮತ್ತು ತರಕಾರಿಗಳನ್ನು ಹೆಚ್ಚು ಸೇವಿಸಬೇಕು. ಹತ್ತಿ ಬಟ್ಟೆ ಧರಿಸುವುದು ಉತ್ತಮ.</p>.<p><strong>ರಾಜಧಾನಿಯಲ್ಲಿ ಮೇಲ್ಮೈ ಬಿಸಿ ಗಾಳಿ<br />ಬೆಂಗಳೂರು:</strong> ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳಲ್ಲಿ ಮೇಲ್ಮೈಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.</p>.<p>ಉಷ್ಣಾಂಶವು ಗರಿಷ್ಠ 32 ಡಿಗ್ರಿ ಸೆಲಿಯಸ್ಸ್ ಹಾಗೂ ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ. ಉಳಿದಂತೆ ನಗರದಲ್ಲಿ ನಿರ್ಮಲ ಆಕಾಶ ಇರಲಿದೆ. ರಾಜಧಾನಿಯಲ್ಲಿ ಕಳೆದ ಎರಡು ದಿನಗಳಿಂದ ಬೇಸಿಗೆಯ ಧಗೆ ಕಾಣಿಸಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>