<p>ಇತ್ತೀಚಿನ ದಿನಗಳಲ್ಲಿ ಅಸಮರ್ಪಕ ಆಹಾರ ಪದ್ಧತಿಯ ಕಾರಣದಿಂದ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಜನರಿಗೆ ಯಕೃತ್ಗೆ ಸಂಬಂಧಿಸಿದ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದೆ. ಆರೋಗ್ಯಯುತ ಆಹಾರ ಸೇವನೆಯಿಂದ ಯಕೃತ್ಗೆ ಹಾನಿಯುಂಟಾಗುವುದನ್ನು ಶೇ 50ರಷ್ಟು ತಡೆಯಬಹುದು ಎನ್ನುತ್ತಾರೆ ವೈದ್ಯರು.</p><p>ಭಾರತೀಯ ಯಕೃತ್ ಕಸಿ ಸಂಸ್ಥೆಯ ಅಧ್ಯಕ್ಷ ಡಾ.ಸಂಜೀವ್ ಸೈಗಲ್ ಮಾತನಾಡಿ, ‘ಇಂದಿನಿಂದಲೇ ಸರಿಯಾದ ಆಹಾರ, ಜೀವನಕ್ರಮ ಅಳವಡಿಸಿಕೊಂಡರೆ ಕಳಪೆ ಆಹಾರ, ಆಲ್ಕೋಹಾಲ್, ಸಂಸ್ಕರಿತ ಆಹಾರ ಮತ್ತು ಜಡ ಜೀವನಶೈಲಿಯಿಂದಾಗಿ ಹಾನಿಯಾದ ಯಕೃತ್ಅನ್ನು ಸರಿಪಡಿಸಿಕೊಳ್ಳಬಹುದು’ ಎನ್ನುತ್ತಾರೆ.</p><p>ಪ್ರತಿ ವರ್ಷ ಏ.19ರಂದು ವಿಶ್ವ ಯಕೃತ್ ದಿನವನ್ನಾಗಿ ಆಚರಿಸಲಾಗುತ್ತದೆ. ಈ ಬಾರಿ ‘ಆಹಾರವೇ ಔಷಧ’ ಎನ್ನುವ ಸಂದೇಶವನ್ನು ತಜ್ಞ ವೈದ್ಯರು ಸಾರುತ್ತಿದ್ದಾರೆ ಎಂದು ಪಿಟಿಐ ವರದಿ ತಿಳಿಸಿದೆ.</p><p>ಹಲವು ವರ್ಷಗಳಿಂದ ಹಾನಿಗೊಳಗಾಗಿದ್ದರೂ ತಾನಾಗಿಯೇ ಸರಿಪಡಿಸಿಕೊಳ್ಳುವ ಶಕ್ತಿ ಯಕೃತ್ಗೆ ಇರುತ್ತದೆ. ಅದು ಸರಿಯಾದ ಜೀವನಶೈಲಿಯಿಂದ ಮಾತ್ರ ಸಾಧ್ಯ. ಆಹಾರದಲ್ಲಿ ತಾಜಾ ಹಣ್ಣುಗಳು, ಹಸಿರು ತರಕಾರಿ, ಧಾನ್ಯಗಳು ಮತ್ತು ಪ್ರೋಟನ್ಯುಕ್ತ ಆಹಾರಗಳಿಂದ ಯಕೃತ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎನ್ನುತ್ತಾರೆ ಡಾ.ಸಂಜೀವ್.</p><p>ಕೇವಲ ಆಲ್ಕೋಹಾಲ್ ಸೇವನೆಯಿಂದ ಯಕೃತ್ಗೆ ಹಾನಿಯಾಗುತ್ತದೆ ಎನ್ನುವ ಕಾಲ ಈಗಿಲ್ಲ. ಅನಾರೋಗ್ಯಕರ ಆಹಾರ ಸೇವನೆ, ಬೊಜ್ಜು, ದೈಹಿಕ ಚಟುವಟಿಕೆಗಳ ಕೊರತೆಯ ಕಾರಣದಿಂದ ಆಲ್ಕೋಹಾಲ್ ಸೇವಿಸದವರಲ್ಲೂ ಯಕೃತ್ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ ಎಂದು ತಜ್ಞರು ಹೇಳುತ್ತಾರೆ.</p>.ಆರೋಗ್ಯ | ದಿನವೂ ಬಾದಾಮಿ ಸೇವಿಸಿದರೆ ತಗ್ಗಲಿದೆ ರಕ್ತದಲ್ಲಿನ ಸಕ್ಕರೆ ಪ್ರಮಾಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಇತ್ತೀಚಿನ ದಿನಗಳಲ್ಲಿ ಅಸಮರ್ಪಕ ಆಹಾರ ಪದ್ಧತಿಯ ಕಾರಣದಿಂದ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಜನರಿಗೆ ಯಕೃತ್ಗೆ ಸಂಬಂಧಿಸಿದ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದೆ. ಆರೋಗ್ಯಯುತ ಆಹಾರ ಸೇವನೆಯಿಂದ ಯಕೃತ್ಗೆ ಹಾನಿಯುಂಟಾಗುವುದನ್ನು ಶೇ 50ರಷ್ಟು ತಡೆಯಬಹುದು ಎನ್ನುತ್ತಾರೆ ವೈದ್ಯರು.</p><p>ಭಾರತೀಯ ಯಕೃತ್ ಕಸಿ ಸಂಸ್ಥೆಯ ಅಧ್ಯಕ್ಷ ಡಾ.ಸಂಜೀವ್ ಸೈಗಲ್ ಮಾತನಾಡಿ, ‘ಇಂದಿನಿಂದಲೇ ಸರಿಯಾದ ಆಹಾರ, ಜೀವನಕ್ರಮ ಅಳವಡಿಸಿಕೊಂಡರೆ ಕಳಪೆ ಆಹಾರ, ಆಲ್ಕೋಹಾಲ್, ಸಂಸ್ಕರಿತ ಆಹಾರ ಮತ್ತು ಜಡ ಜೀವನಶೈಲಿಯಿಂದಾಗಿ ಹಾನಿಯಾದ ಯಕೃತ್ಅನ್ನು ಸರಿಪಡಿಸಿಕೊಳ್ಳಬಹುದು’ ಎನ್ನುತ್ತಾರೆ.</p><p>ಪ್ರತಿ ವರ್ಷ ಏ.19ರಂದು ವಿಶ್ವ ಯಕೃತ್ ದಿನವನ್ನಾಗಿ ಆಚರಿಸಲಾಗುತ್ತದೆ. ಈ ಬಾರಿ ‘ಆಹಾರವೇ ಔಷಧ’ ಎನ್ನುವ ಸಂದೇಶವನ್ನು ತಜ್ಞ ವೈದ್ಯರು ಸಾರುತ್ತಿದ್ದಾರೆ ಎಂದು ಪಿಟಿಐ ವರದಿ ತಿಳಿಸಿದೆ.</p><p>ಹಲವು ವರ್ಷಗಳಿಂದ ಹಾನಿಗೊಳಗಾಗಿದ್ದರೂ ತಾನಾಗಿಯೇ ಸರಿಪಡಿಸಿಕೊಳ್ಳುವ ಶಕ್ತಿ ಯಕೃತ್ಗೆ ಇರುತ್ತದೆ. ಅದು ಸರಿಯಾದ ಜೀವನಶೈಲಿಯಿಂದ ಮಾತ್ರ ಸಾಧ್ಯ. ಆಹಾರದಲ್ಲಿ ತಾಜಾ ಹಣ್ಣುಗಳು, ಹಸಿರು ತರಕಾರಿ, ಧಾನ್ಯಗಳು ಮತ್ತು ಪ್ರೋಟನ್ಯುಕ್ತ ಆಹಾರಗಳಿಂದ ಯಕೃತ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎನ್ನುತ್ತಾರೆ ಡಾ.ಸಂಜೀವ್.</p><p>ಕೇವಲ ಆಲ್ಕೋಹಾಲ್ ಸೇವನೆಯಿಂದ ಯಕೃತ್ಗೆ ಹಾನಿಯಾಗುತ್ತದೆ ಎನ್ನುವ ಕಾಲ ಈಗಿಲ್ಲ. ಅನಾರೋಗ್ಯಕರ ಆಹಾರ ಸೇವನೆ, ಬೊಜ್ಜು, ದೈಹಿಕ ಚಟುವಟಿಕೆಗಳ ಕೊರತೆಯ ಕಾರಣದಿಂದ ಆಲ್ಕೋಹಾಲ್ ಸೇವಿಸದವರಲ್ಲೂ ಯಕೃತ್ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ ಎಂದು ತಜ್ಞರು ಹೇಳುತ್ತಾರೆ.</p>.ಆರೋಗ್ಯ | ದಿನವೂ ಬಾದಾಮಿ ಸೇವಿಸಿದರೆ ತಗ್ಗಲಿದೆ ರಕ್ತದಲ್ಲಿನ ಸಕ್ಕರೆ ಪ್ರಮಾಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>