ಕೋವಿಡ್ ವಿರುದ್ಧ ರೋಗ ನಿರೋಧಕ ಶಕ್ತಿ ವೃದ್ಧಿಗೆ ಆಯುಷ್ ಇಲಾಖೆ ಸಲಹೆಗಳಿವು...

ಬೆಂಗಳೂರು: ಕೊರೊನಾ ವೈರಸ್ ವಿರುದ್ಧ ದೇಹದಲ್ಲಿ ನಿರೋಧಕ ಶಕ್ತಿ ವೃದ್ಧಿಸಿಕೊಳ್ಳಲು ಆಯುಷ್ ಇಲಾಖೆಯು ನಾಗರಿಕರೆ ಕೆಲ ಸಲಹೆಗಳನ್ನು ನೀಡಿದೆ.
ಇಲಾಖೆ ನೀಡಿರುವ ಸಲಹೆಗಳನ್ನು ಇಲ್ಲಿ ಪಟ್ಟಿ ಮಾಡಲಾಗಿದೆ
* ಕುಡಿಯಲು ಯಾವಾಗಲೂ ಬಿಸಿನೀರು ಉಪಯೋಗಿಸಬೇಕು
* ಪ್ರತಿದಿನ ಯೋಗಾಸನ, ಪ್ರಾಣಾಯಾಮವನ್ನು ಕನಿಷ್ಠ 30 ನಿಮಿಷ ಮಾಡಬೇಕು
* ಅರಿಸಿನ, ಜೀರಿಗೆ, ಬೆಳ್ಳುಳ್ಳಿ ಮತ್ತು ಧನಿಯಾಗಳನ್ನು ಆಹಾರದಲ್ಲಿ ಬಳಸಬೇಕು
* ಅರಿಸಿನ ಬೆರೆಸಿದ ಹಾಲು ಕುಡಿಯುವುದು ಒಳ್ಳೆಯದು
* ಗಿಡಮೂಲಿಕೆ ಬಳಸಿ ತಯಾರಿಸಿ ಚಹಾವನ್ನು ಕುಡಿಯುವುದು
* ಪುದಿನ ಎಲೆಗಳನ್ನು ಬಿಸಿನೀರಿಗೆ ಹಾಕಿ, ಹಬೆಯನ್ನು ತೆಗೆದುಕೊಳ್ಳಬೇಕು
* ಕೆಮ್ಮು ಅಥವಾ ಗಂಟಲಿನ ಕಿರಿಕಿರಿ ಇದ್ದಲ್ಲಿ ಸಕ್ಕರೆ ಅಥವಾ ಜೇನುತುಪ್ಪದಲ್ಲಿ ಲವಂಗ ಪುಡಿಯನ್ನು ಬೆರೆಸಿ, ದಿನಕ್ಕೆ ಎರಡರಿಂದ ಮೂರುಬಾರಿ ಸೇವಿಸಬೇಕು
* ಎಳ್ಳೆಣ್ಣೆ, ಕೊಬ್ಬರಿ ಎಣ್ಣೆ ಅಥವಾ ತುಪ್ಪವನ್ನು ಮೂಗಿನ ಎರಡೂ ಹೊಳ್ಳೆಗಳಿಗೆ ದಿನಕ್ಕೆ ಎರಡು ಬಾರಿ ಸವರಿಕೊಳ್ಳಬೇಕು
* ಒಂದು ಟೇಬಲ್ ಚಮಚ ಎಳ್ಳೆಣ್ಣೆ ಅಥವಾ ತೆಂಗಿನ ಎಣ್ಣೆಯನ್ನು ಎರಡು-ಮೂರು ನಿಮಿಷ ಬಾಯಿಯಲ್ಲಿಟ್ಟು ಉಗುಳಬೇಕು. ನಂತರ ಬಿಸಿನೀರಿನಿಂದ ಬಾಯಿ ಮುಕ್ಕಳಿಸಬೇಕು. ಈ ವಿಧಾನವನ್ನು ದಿನಕ್ಕೆ ಎರಡು ಬಾರಿ ಮಾಡಬೇಕು
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.