<p><strong>ಬೆಂಗಳೂರು:</strong> ಬೇಸಿಗೆ ಋತುವಿನಲ್ಲಿ ಬಿಸಿಲಿನ ತಾಪ ತಾಳಲಾರದೇ ಹೊರಬರುವ ಹಾವುಗಳು ಮನುಷ್ಯರನ್ನು ಕಚ್ಚುವ ಸಾಧ್ಯತೆ ಹೆಚ್ಚು. ಹೀಗಾಗಿ ಭಾರತ್ ಸೀರಮ್ ಮತ್ತು ವ್ಯಾಕ್ಸಿನೇಷನ್ ಸಂಸ್ಥೆ (ಬಿಎಸ್ವಿ) ಹಾವು ಕಡಿತ ಸಂಭವಿಸಿದರೆ ತೆಗೆದುಕೊಳ್ಳಬೇಕಾದ ಮುಂಜಾಗ್ರತೆ ಹಾಗೂ ಚಿಕಿತ್ಸೆ ಬಗ್ಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.</p><p>ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ದತ್ತಾಂಶದ ಪ್ರಕಾರ 4.5–5.4 ಮಿಲಿಯನ್ (ಅಂದಾಜು 40 ರಿಂದ 50 ಲಕ್ಷ) ಜನರು ಜಗತ್ತಿನಾದ್ಯಂತ ವಾರ್ಷಿಕವಾಗಿ ಹಾವುಗಳಿಂದ ಸಾವನ್ನಪ್ಪುತ್ತಿದ್ದಾರೆ. ಅದರಲ್ಲಿ ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಹಾವಿನ ಕಡಿತದಿಂದ ಸಾವುಗಳಾಗುತ್ತವೆ. </p><p>ಇನ್ನು, ಹಾವು ಕಡಿತದಿಂದ ಹೆಚ್ಚಾಗಿ ಬಹು-ಅಂಗಾಂಗ ವೈಫಲ್ಯ ಉಂಟುಮಾಡಬಹುದು, ರಕ್ತಸ್ರಾವ, ಪಾರ್ಶ್ವವಾಯು, ಸ್ನಾಯು ನಷ್ಟ, ಹೃದಯಾಘಾತ, ತೀವ್ರವಾದ ಮೂತ್ರಪಿಂಡದ ಸಮಸ್ಯೆ ಸೇರಿದಂತೆ ಹಲವು ರೀತಿಯ ಆರೋಗ್ಯ ಸಮಸ್ಯೆಗೆ ಹಾದಿ ಮಾಡಿಕೊಡಲಿದೆ. ಕೆಲವು ಪ್ರಕರಣದಲ್ಲಿ ಸಾವು ಸಂಭವಿಸಬಹುದು. ಹೀಗಾಗಿ ಹಾವು ಕಡಿತವನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು.</p><p><strong>ಹಾವು ಕಡಿತ ತಕ್ಷಣ ಏನು ಮಾಡಬೇಕು?</strong></p><p>* ಹಾವು ಕಡಿದ ಕೂಡಲೇ ಗಾಬರಿಯಾಗದೇ, ನಿಮ್ಮ ಚಲನವಲನ ನಿರ್ಭಂದಿಸಿ.<br>* ಹಾವು ಕಚ್ಚಿದ ಸ್ಥಳದಲ್ಲಿ ಯಾವುದೇ ಆಭರಣ ಅಥವಾ ಬಿಗಿಯಾದ ಬಟ್ಟೆ ಇದ್ದರೆ ಕೂಡಲೇ ತೆಗೆದು ಹಾಕಿ ಎದೆ ಭಾಗದಡಿ ಹಾವು ಕಚ್ಚಿದ್ದರೆ, ಆ ವ್ಯಕ್ತಿಯನ್ನು ಮಲಗಿಸಬೇಕು. ವಿಷ ಹರಡುವುದನ್ನು ತಡೆಯಲು ವ್ಯಕ್ತಿಯನ್ನು ಶಾಂತವಾಗಿರಿಸಬೇಕು.<br>* ಗಾಯವನ್ನು ಸ್ವಚ್ಛವಾದ ಬ್ಯಾಂಡೇಜ್ನಿಂದ ಮುಚ್ಚಿ ಮತ್ತು ದೇಹಕ್ಕೆ ವಿಷ ಏರದಂತೆ ಆ ಸ್ಥಳಕ್ಕಿಂತ ಮೇಲೆ ದಾರದಿಂದ ಬಿಗಿಯಾಗಿ ಕಟ್ಟಿ. ಒಂದು ವೇಳೆ ಹಾವು ನಿಮ್ಮ ಕಾಲಿಗೆ ಕಚ್ಚಿದರೆ, ನೀವು ನಿಮ್ಮ ಬೂಟುಗಳನ್ನು ತೆಗೆದು ಸಾಧ್ಯವಾದಷ್ಟು ಬೇಗ ವೈದ್ಯರ ಬಳಿಗೆ ಹೋಗಬೇಕು</p><p><strong>ಏನು ಮಾಡಬಾರದು...</strong></p><p>* ಯಾವುದೇ ಸ್ವಯಂ ಔಷಧ ಮಾಡಿಕೊಳ್ಳುವುದು ಒಳ್ಳೆಯದಲ್ಲ.<br>* ಹಾವು ಕಚ್ಚಿದ ಗಾಯವನ್ನು ಕತ್ತರಿಸಲು ಪ್ರಯತ್ನಿಸಬೇಡಿ ಹಾಗೂ ವಿಷ ಹೀರಲು ಸಹ ಪ್ರಯತ್ನಿಸಬೇಡಿ. ಒಂದು ವೇಳೆ ವಿಷ ಹೀರುವುದರಿಂದ ಹೀರುವ ವ್ಯಕ್ತಿಗೂ ವಿಷ ದೇಹ ಸೇರಬಹುದು. ಹೀಗಾಗಿ ವಿಷ ಹೀರುವ ಬದಲು, ಆ ಜಾಗಕ್ಕಿಂತ ಸ್ವಲ್ಪ ಮೆಲ್ಭಾಗ ಗಟ್ಟಿಯಾಗಿ ಕಟ್ಟಿ, ಕೂಡಲೇ ವೈದ್ಯರ ಬಳಿ ಕರೆದೊಯ್ಯಿರಿ<br>* ನೀರಿನಲ್ಲಿ ತೊಳೆಯಬೇಡಿ, <br>* ಗಾಯಕ್ಕೆ ಐಸ್ ಹಚ್ಚಬೇಡಿ, ಕೆಫೀನ್ ಅಥವಾ ಆಲ್ಕೋಹಾಲ್ ಇರುವ ಯಾವುದನ್ನೂ ನೀಡಬೇಡಿ, <br>* ವ್ಯಕ್ತಿಯನ್ನು ಓಡಾಡಲು ಬಿಡಬೇಡಿ, ಕೂಡಲೇ ಆತನನ್ನು ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ಯಿರಿ.</p><p><strong>ಚಿಕಿತ್ಸೆ ಏನು?</strong></p><p>ಸಾಮಾನ್ಯವಾಗಿ ಹಾವು ಕಡಿತಕ್ಕೆ ಆಂಟಿವೆನಮ್ ಚುಚ್ಚುಮದ್ದು ನೀಡಲಾಗುತ್ತದೆ. ಇದು ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಲಭ್ಯವಿದೆ. ಈ ಚುಚ್ಚುಮದ್ದಿನಿಂದ ಜೀವ ಉಳಿಸುವುದಲ್ಲದೆ, ಹಾವಿನ ವಿಷದಲ್ಲಿನ ನೆಕ್ರೋಟಿಕ್ ಇತರ ವಿಷಗಳಿಂದ ಉಂಟಾಗುವ ರೋಗಿಗಳ ನೋವನ್ನು ಕಡಿಮೆ ಮಾಡುತ್ತದೆ. ಈ ಚುಚ್ಚುಮದ್ದು ರೋಗಿಗಳು ತ್ವರಿತವಾಗಿ ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ. ಹೀಗಾಗಿ ಹಾವು ಕಡಿದ ಕೂಡಲೇ ನೀವು ಸ್ವಯಂ ಆರೈಕೆ ಮಾಡದೇ ಕೂಡಲೇ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ಯಿರಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೇಸಿಗೆ ಋತುವಿನಲ್ಲಿ ಬಿಸಿಲಿನ ತಾಪ ತಾಳಲಾರದೇ ಹೊರಬರುವ ಹಾವುಗಳು ಮನುಷ್ಯರನ್ನು ಕಚ್ಚುವ ಸಾಧ್ಯತೆ ಹೆಚ್ಚು. ಹೀಗಾಗಿ ಭಾರತ್ ಸೀರಮ್ ಮತ್ತು ವ್ಯಾಕ್ಸಿನೇಷನ್ ಸಂಸ್ಥೆ (ಬಿಎಸ್ವಿ) ಹಾವು ಕಡಿತ ಸಂಭವಿಸಿದರೆ ತೆಗೆದುಕೊಳ್ಳಬೇಕಾದ ಮುಂಜಾಗ್ರತೆ ಹಾಗೂ ಚಿಕಿತ್ಸೆ ಬಗ್ಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.</p><p>ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ದತ್ತಾಂಶದ ಪ್ರಕಾರ 4.5–5.4 ಮಿಲಿಯನ್ (ಅಂದಾಜು 40 ರಿಂದ 50 ಲಕ್ಷ) ಜನರು ಜಗತ್ತಿನಾದ್ಯಂತ ವಾರ್ಷಿಕವಾಗಿ ಹಾವುಗಳಿಂದ ಸಾವನ್ನಪ್ಪುತ್ತಿದ್ದಾರೆ. ಅದರಲ್ಲಿ ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಹಾವಿನ ಕಡಿತದಿಂದ ಸಾವುಗಳಾಗುತ್ತವೆ. </p><p>ಇನ್ನು, ಹಾವು ಕಡಿತದಿಂದ ಹೆಚ್ಚಾಗಿ ಬಹು-ಅಂಗಾಂಗ ವೈಫಲ್ಯ ಉಂಟುಮಾಡಬಹುದು, ರಕ್ತಸ್ರಾವ, ಪಾರ್ಶ್ವವಾಯು, ಸ್ನಾಯು ನಷ್ಟ, ಹೃದಯಾಘಾತ, ತೀವ್ರವಾದ ಮೂತ್ರಪಿಂಡದ ಸಮಸ್ಯೆ ಸೇರಿದಂತೆ ಹಲವು ರೀತಿಯ ಆರೋಗ್ಯ ಸಮಸ್ಯೆಗೆ ಹಾದಿ ಮಾಡಿಕೊಡಲಿದೆ. ಕೆಲವು ಪ್ರಕರಣದಲ್ಲಿ ಸಾವು ಸಂಭವಿಸಬಹುದು. ಹೀಗಾಗಿ ಹಾವು ಕಡಿತವನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು.</p><p><strong>ಹಾವು ಕಡಿತ ತಕ್ಷಣ ಏನು ಮಾಡಬೇಕು?</strong></p><p>* ಹಾವು ಕಡಿದ ಕೂಡಲೇ ಗಾಬರಿಯಾಗದೇ, ನಿಮ್ಮ ಚಲನವಲನ ನಿರ್ಭಂದಿಸಿ.<br>* ಹಾವು ಕಚ್ಚಿದ ಸ್ಥಳದಲ್ಲಿ ಯಾವುದೇ ಆಭರಣ ಅಥವಾ ಬಿಗಿಯಾದ ಬಟ್ಟೆ ಇದ್ದರೆ ಕೂಡಲೇ ತೆಗೆದು ಹಾಕಿ ಎದೆ ಭಾಗದಡಿ ಹಾವು ಕಚ್ಚಿದ್ದರೆ, ಆ ವ್ಯಕ್ತಿಯನ್ನು ಮಲಗಿಸಬೇಕು. ವಿಷ ಹರಡುವುದನ್ನು ತಡೆಯಲು ವ್ಯಕ್ತಿಯನ್ನು ಶಾಂತವಾಗಿರಿಸಬೇಕು.<br>* ಗಾಯವನ್ನು ಸ್ವಚ್ಛವಾದ ಬ್ಯಾಂಡೇಜ್ನಿಂದ ಮುಚ್ಚಿ ಮತ್ತು ದೇಹಕ್ಕೆ ವಿಷ ಏರದಂತೆ ಆ ಸ್ಥಳಕ್ಕಿಂತ ಮೇಲೆ ದಾರದಿಂದ ಬಿಗಿಯಾಗಿ ಕಟ್ಟಿ. ಒಂದು ವೇಳೆ ಹಾವು ನಿಮ್ಮ ಕಾಲಿಗೆ ಕಚ್ಚಿದರೆ, ನೀವು ನಿಮ್ಮ ಬೂಟುಗಳನ್ನು ತೆಗೆದು ಸಾಧ್ಯವಾದಷ್ಟು ಬೇಗ ವೈದ್ಯರ ಬಳಿಗೆ ಹೋಗಬೇಕು</p><p><strong>ಏನು ಮಾಡಬಾರದು...</strong></p><p>* ಯಾವುದೇ ಸ್ವಯಂ ಔಷಧ ಮಾಡಿಕೊಳ್ಳುವುದು ಒಳ್ಳೆಯದಲ್ಲ.<br>* ಹಾವು ಕಚ್ಚಿದ ಗಾಯವನ್ನು ಕತ್ತರಿಸಲು ಪ್ರಯತ್ನಿಸಬೇಡಿ ಹಾಗೂ ವಿಷ ಹೀರಲು ಸಹ ಪ್ರಯತ್ನಿಸಬೇಡಿ. ಒಂದು ವೇಳೆ ವಿಷ ಹೀರುವುದರಿಂದ ಹೀರುವ ವ್ಯಕ್ತಿಗೂ ವಿಷ ದೇಹ ಸೇರಬಹುದು. ಹೀಗಾಗಿ ವಿಷ ಹೀರುವ ಬದಲು, ಆ ಜಾಗಕ್ಕಿಂತ ಸ್ವಲ್ಪ ಮೆಲ್ಭಾಗ ಗಟ್ಟಿಯಾಗಿ ಕಟ್ಟಿ, ಕೂಡಲೇ ವೈದ್ಯರ ಬಳಿ ಕರೆದೊಯ್ಯಿರಿ<br>* ನೀರಿನಲ್ಲಿ ತೊಳೆಯಬೇಡಿ, <br>* ಗಾಯಕ್ಕೆ ಐಸ್ ಹಚ್ಚಬೇಡಿ, ಕೆಫೀನ್ ಅಥವಾ ಆಲ್ಕೋಹಾಲ್ ಇರುವ ಯಾವುದನ್ನೂ ನೀಡಬೇಡಿ, <br>* ವ್ಯಕ್ತಿಯನ್ನು ಓಡಾಡಲು ಬಿಡಬೇಡಿ, ಕೂಡಲೇ ಆತನನ್ನು ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ಯಿರಿ.</p><p><strong>ಚಿಕಿತ್ಸೆ ಏನು?</strong></p><p>ಸಾಮಾನ್ಯವಾಗಿ ಹಾವು ಕಡಿತಕ್ಕೆ ಆಂಟಿವೆನಮ್ ಚುಚ್ಚುಮದ್ದು ನೀಡಲಾಗುತ್ತದೆ. ಇದು ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಲಭ್ಯವಿದೆ. ಈ ಚುಚ್ಚುಮದ್ದಿನಿಂದ ಜೀವ ಉಳಿಸುವುದಲ್ಲದೆ, ಹಾವಿನ ವಿಷದಲ್ಲಿನ ನೆಕ್ರೋಟಿಕ್ ಇತರ ವಿಷಗಳಿಂದ ಉಂಟಾಗುವ ರೋಗಿಗಳ ನೋವನ್ನು ಕಡಿಮೆ ಮಾಡುತ್ತದೆ. ಈ ಚುಚ್ಚುಮದ್ದು ರೋಗಿಗಳು ತ್ವರಿತವಾಗಿ ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ. ಹೀಗಾಗಿ ಹಾವು ಕಡಿದ ಕೂಡಲೇ ನೀವು ಸ್ವಯಂ ಆರೈಕೆ ಮಾಡದೇ ಕೂಡಲೇ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ಯಿರಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>