<p><strong>ಅಂಜೂರ ನೈಸರ್ಗಿಕವಾಗಿ ಹೆಚ್ಚು ಪೋಷಕಾಂಶ ಭರಿತವಾದ ಹಣ್ಣು. ಇದು ನಾರಿನಂಶ, ಪೊಟ್ಯಾಸಿಯಂ ಹಾಗೂ ವಿಟಮಿನ್ಗಳಿಂದ ಸಮೃದ್ದವಾಗಿದೆ. ಅಂಜೂರ ಸೇವನೆಯಿಂದ ದೇಹಕ್ಕೆ ಅನೇಕ ಲಾಭಗಳಿವೆ. ರಾತ್ರಿ ನೆನೆಸಿಟ್ಟು ಬೆಳಿಗ್ಗೆ ಅಂಚೂರವನ್ನು ಸೇವಿಸುವುದರಿಂದ ಜೀರ್ಣಕ್ರಿಯೆಯನ್ನು ಸುಧಾರಿಸುವುದಲ್ಲದೆ, ಕರುಳಿನ ಆರೋಗ್ಯಕ್ಕೂ ಸಹಕಾರಿಯಾಗಿದೆ ಎನ್ನುತ್ತಾರೆ ವೈದ್ಯರು. </strong></p>.<p><strong>ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ</strong></p><p>ಅಂಜೂರದಲ್ಲಿ ನಾರಿನಂಶ ಹೆಚ್ಚಿರುತ್ತದೆ. ನೆನೆಸಿದ ಅಂಚೂರವನ್ನು ಬೆಳಿಗ್ಗೆ ಎದ್ದ ತಕ್ಷಣ ಸೇವಿಸುವುದರಿಂದ ಕರುಳಿನ ಆರೋಗ್ಯ ಕಾಪಾಡುವುದರ ಜೊತೆಗೆ ಮಲಬದ್ಧತೆಯನ್ನು ನಿವಾರಿಸುತ್ತದೆ. ಜೀರ್ಣಾಂಗ ವ್ಯವಸ್ಥೆಯಲ್ಲಿ ಪೋಷಕಾಂಶಗಳನ್ನು ಹೀರಿಕೊಳ್ಳಲು ಸಹಕಾರಿಯಾಗುತ್ತದೆ.</p>.<p> <strong>ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ</strong></p><p>ಅಂಜೂರದಲ್ಲಿ ಪೊಟ್ಯಾಸಿಯಂ, ಮೆಗ್ನೀಸಿಯಂಗಳು ಸಮೃದ್ದವಾಗಿರುತ್ತವೆ. ಇವು ರಕ್ತದೊತ್ತಡವನ್ನು ಕಡಿಮೆ ಮಾಡುವುದರ ಜತೆಗೆ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಮಿತವಾಗಿಡಲು ಸಹಕಾರಿಯಾಗಿವೆ. ಹೃದಯದ ರಕ್ಕನಾಳಗಳ ಆರೋಗ್ಯಕ್ಕೂ ಸಹಕಾರಿಯಾಗಲಿದೆ ಎನ್ನುತ್ತಾರೆ ವೈದ್ಯರು.</p>.<p><strong>ಮೂಳೆಗಳ ಬಲ ಹೆಚ್ಚಿಸುತ್ತದೆ</strong></p><p>ಅಂಜೂರದಲ್ಲಿರುವ ಕ್ಯಾಲ್ಸಿಯಂ ಮತ್ತು ರಂಜಕ ಮೂಳೆ ಸಧೃಡವಾಗಿಡಲು ಸಹಕಾರಿಯಾಗಿವೆ. ಮೂಳೆಗಳನ್ನು ದುರ್ಬಲಗೊಳಿಸುವ ಆಸ್ಟಿಯೊಪೊರೋಸಿಸ್ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ವೃದ್ದರು ಹಾಗೂ ಮಹಿಳೆಯರಿಗೆ ಈ ಹಣ್ಣು ಬಹುಪಯೋಗಿಯಾಗಿದೆ.</p>.<p><strong>ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ</strong></p><p>ಅಂಜೂರವು ವಿಟಮಿನ್ ಎ, ಸಿ ಮತ್ತು ಕೆ ನಂತಹ ಜೀವಸತ್ವಗಳನ್ನು ಹೊಂದಿದೆ. ಇದರಲ್ಲಿ ಕಬ್ಬಿಣ ಮತ್ತು ತಾಮ್ರ ಸೇರಿದಂತೆ ಇತರೆ ಖನಿಜಗಳೂ ಸಮೃದ್ಧವಾಗಿವೆ. ಇವು ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುವುದರ ಜತೆಗೆ ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಂಜೂರ ನೈಸರ್ಗಿಕವಾಗಿ ಹೆಚ್ಚು ಪೋಷಕಾಂಶ ಭರಿತವಾದ ಹಣ್ಣು. ಇದು ನಾರಿನಂಶ, ಪೊಟ್ಯಾಸಿಯಂ ಹಾಗೂ ವಿಟಮಿನ್ಗಳಿಂದ ಸಮೃದ್ದವಾಗಿದೆ. ಅಂಜೂರ ಸೇವನೆಯಿಂದ ದೇಹಕ್ಕೆ ಅನೇಕ ಲಾಭಗಳಿವೆ. ರಾತ್ರಿ ನೆನೆಸಿಟ್ಟು ಬೆಳಿಗ್ಗೆ ಅಂಚೂರವನ್ನು ಸೇವಿಸುವುದರಿಂದ ಜೀರ್ಣಕ್ರಿಯೆಯನ್ನು ಸುಧಾರಿಸುವುದಲ್ಲದೆ, ಕರುಳಿನ ಆರೋಗ್ಯಕ್ಕೂ ಸಹಕಾರಿಯಾಗಿದೆ ಎನ್ನುತ್ತಾರೆ ವೈದ್ಯರು. </strong></p>.<p><strong>ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ</strong></p><p>ಅಂಜೂರದಲ್ಲಿ ನಾರಿನಂಶ ಹೆಚ್ಚಿರುತ್ತದೆ. ನೆನೆಸಿದ ಅಂಚೂರವನ್ನು ಬೆಳಿಗ್ಗೆ ಎದ್ದ ತಕ್ಷಣ ಸೇವಿಸುವುದರಿಂದ ಕರುಳಿನ ಆರೋಗ್ಯ ಕಾಪಾಡುವುದರ ಜೊತೆಗೆ ಮಲಬದ್ಧತೆಯನ್ನು ನಿವಾರಿಸುತ್ತದೆ. ಜೀರ್ಣಾಂಗ ವ್ಯವಸ್ಥೆಯಲ್ಲಿ ಪೋಷಕಾಂಶಗಳನ್ನು ಹೀರಿಕೊಳ್ಳಲು ಸಹಕಾರಿಯಾಗುತ್ತದೆ.</p>.<p> <strong>ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ</strong></p><p>ಅಂಜೂರದಲ್ಲಿ ಪೊಟ್ಯಾಸಿಯಂ, ಮೆಗ್ನೀಸಿಯಂಗಳು ಸಮೃದ್ದವಾಗಿರುತ್ತವೆ. ಇವು ರಕ್ತದೊತ್ತಡವನ್ನು ಕಡಿಮೆ ಮಾಡುವುದರ ಜತೆಗೆ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಮಿತವಾಗಿಡಲು ಸಹಕಾರಿಯಾಗಿವೆ. ಹೃದಯದ ರಕ್ಕನಾಳಗಳ ಆರೋಗ್ಯಕ್ಕೂ ಸಹಕಾರಿಯಾಗಲಿದೆ ಎನ್ನುತ್ತಾರೆ ವೈದ್ಯರು.</p>.<p><strong>ಮೂಳೆಗಳ ಬಲ ಹೆಚ್ಚಿಸುತ್ತದೆ</strong></p><p>ಅಂಜೂರದಲ್ಲಿರುವ ಕ್ಯಾಲ್ಸಿಯಂ ಮತ್ತು ರಂಜಕ ಮೂಳೆ ಸಧೃಡವಾಗಿಡಲು ಸಹಕಾರಿಯಾಗಿವೆ. ಮೂಳೆಗಳನ್ನು ದುರ್ಬಲಗೊಳಿಸುವ ಆಸ್ಟಿಯೊಪೊರೋಸಿಸ್ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ವೃದ್ದರು ಹಾಗೂ ಮಹಿಳೆಯರಿಗೆ ಈ ಹಣ್ಣು ಬಹುಪಯೋಗಿಯಾಗಿದೆ.</p>.<p><strong>ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ</strong></p><p>ಅಂಜೂರವು ವಿಟಮಿನ್ ಎ, ಸಿ ಮತ್ತು ಕೆ ನಂತಹ ಜೀವಸತ್ವಗಳನ್ನು ಹೊಂದಿದೆ. ಇದರಲ್ಲಿ ಕಬ್ಬಿಣ ಮತ್ತು ತಾಮ್ರ ಸೇರಿದಂತೆ ಇತರೆ ಖನಿಜಗಳೂ ಸಮೃದ್ಧವಾಗಿವೆ. ಇವು ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುವುದರ ಜತೆಗೆ ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>