<p>ಬೇಸಿಗೆಯಲ್ಲಿ ದೇಹದ ಉಷ್ಣತೆ ಸಹಜವಾಗಿ ಹೆಚ್ಚಾಗುತ್ತದೆ ಮತ್ತು ಜೀರ್ಣಕ್ರಿಯೆ ಕಮ್ಮಿಯಾಗಿರುತ್ತದೆ. ಈ ಸಂದರ್ಭದಲ್ಲಿ ಆಹಾರ ಪದ್ಧತಿಯನ್ನು ಸ್ವಲ್ಪ ಬದಲಾಯಿಸಿಕೊಳ್ಳುವುದು ಆರೋಗ್ಯದ ದೃಷ್ಟಿಯಿಂದ ಮುಖ್ಯವಾಗುತ್ತದೆ. </p><p>ನಾವು ಪ್ರತಿದಿನ ಬಳಸುವ ಕೆಲವು ತರಕಾರಿಗಳು ದೇಹದಲ್ಲಿ ಉಷ್ಣತೆಯನ್ನು ಹೆಚ್ಚಿಸುವ ಸ್ವಭಾವ ಹೊಂದಿರುವುದರಿಂದ ಅವುಗಳನ್ನು ಈ ಸಮಯದಲ್ಲಿ ಮಿತವಾಗಿ ಸೇವಿಸುವುದು ಒಳಿತು. ಹಸಿಮೆಣಸಿನಕಾಯಿ ಮತ್ತು ಒಣ ಮೆಣಸಿನಕಾಯಿ ಬೇಸಿಗೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಳಸಿದರೆ ಹೊಟ್ಟೆ ಉರಿ, ಹೆಚ್ಚುವರಿ ಬೆವರು ಮತ್ತು ಅಸ್ವಸ್ಥತೆ ಉಂಟಾಗಬಹುದು. </p>.<p>ಇದೇ ರೀತಿಯಾಗಿ, ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಕಚ್ಚಾ ರೂಪದಲ್ಲಿ ಹೆಚ್ಚಾಗಿ ಸೇವಿಸುವುದರಿಂದ ಕೆಲವರಿಗೆ ಆಸಿಡಿಟಿ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಆಲೂಗಡ್ಡೆ, ಮೂಲಂಗಿ, ಬೀಟ್ರೂಟ್ ಮತ್ತು ಸುವರ್ಣಗಡ್ಡೆ ಜೀರ್ಣಕ್ಕೆ ಸ್ವಲ್ಪ ಭಾರವಾಗುತ್ತವೆ. ಬೇಸಿಗೆಯಲ್ಲಿ ಜೀರ್ಣಕ್ರಿಯೆ ನಿಧಾನಗೊಳ್ಳುವ ಸಂದರ್ಭಗಳಲ್ಲಿ ಇವು ಹೊಟ್ಟೆ ತುಂಬಿದ ಭಾವನೆ ಮತ್ತು ಉಬ್ಬರವನ್ನೂ ಉಂಟುಮಾಡಬಹುದು. ಜೊತೆಗೆ, ಕೋಸು, ಹೂಕೋಸು, ಎಲೆಕೋಸು ತರಕಾರಿಗಳು ಕೆಲವರಿಗೆ ಹೊಟ್ಟೆ ಉಬ್ಬುವ ಸಮಸ್ಯೆಯನ್ನು ಹೆಚ್ಚಿಸಬಹುದು.</p>.<p>ಇದರ ಬದಲು, ದೇಹಕ್ಕೆ ತಂಪು ನೀಡುವ ತರಕಾರಿಗಳನ್ನು ಹೆಚ್ಚು ಬಳಸುವುದು ಉತ್ತಮ. ಸೌತೆಕಾಯಿ, ಸೊರೆಕಾಯಿ, ಕುಂಬಳಕಾಯಿ ಮುಂತಾದವುಗಳಲ್ಲಿ ನೀರಿನ ಅಂಶ ಹೆಚ್ಚು ಇರುವುದರಿಂದ ಸಮತೋಲನ ಕಾಪಾಡಲು ಸಹಾಯ ಮಾಡುತ್ತವೆ. ಇವು ದೇಹಕ್ಕೆ ತಾಜಾತನವನ್ನು ನೀಡುವ ಜೊತೆಗೆ ಜೀರ್ಣಕ್ರಿಯೆಯನ್ನೂ ಸುಲಭಗೊಳಿಸುತ್ತವೆ.</p><p>ಒಟ್ಟಿನಲ್ಲಿ, ಬೇಸಿಗೆಯಲ್ಲಿ ಯಾವುದೇ ತರಕಾರಿಯನ್ನು ಸಂಪೂರ್ಣವಾಗಿ ಬಿಟ್ಟುಬಿಡುವ ಅಗತ್ಯವಿಲ್ಲ. ಆದರೆ ಅವುಗಳನ್ನು ಸರಿಯಾದ ಪ್ರಮಾಣದಲ್ಲಿ ಸೇವಿಸುವುದು ಮುಖ್ಯ. ಹವಾಮಾನಕ್ಕೆ ತಕ್ಕಂತೆ ಆಹಾರವನ್ನು ಆಯ್ಕೆ ಮಾಡಿಕೊಂಡರೆ ದೇಹದ ಉಷ್ಣತೆ ನಿಯಂತ್ರಣದಲ್ಲಿರುತ್ತದೆ ಮತ್ತು ಆರೋಗ್ಯವೂ ಉತ್ತಮವಾಗಿರುತ್ತದೆ.</p>.<p><em><strong>(ಲೇಖಕರು: ಡಾ. ಪೂಜಾ. ಬಿ. MD, ಸಹಾಯಕ ಪ್ರಾಧ್ಯಾಪಕರು, ಶ್ರೀ ಧ.ಮಂ. ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಹಾಸನ)</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೇಸಿಗೆಯಲ್ಲಿ ದೇಹದ ಉಷ್ಣತೆ ಸಹಜವಾಗಿ ಹೆಚ್ಚಾಗುತ್ತದೆ ಮತ್ತು ಜೀರ್ಣಕ್ರಿಯೆ ಕಮ್ಮಿಯಾಗಿರುತ್ತದೆ. ಈ ಸಂದರ್ಭದಲ್ಲಿ ಆಹಾರ ಪದ್ಧತಿಯನ್ನು ಸ್ವಲ್ಪ ಬದಲಾಯಿಸಿಕೊಳ್ಳುವುದು ಆರೋಗ್ಯದ ದೃಷ್ಟಿಯಿಂದ ಮುಖ್ಯವಾಗುತ್ತದೆ. </p><p>ನಾವು ಪ್ರತಿದಿನ ಬಳಸುವ ಕೆಲವು ತರಕಾರಿಗಳು ದೇಹದಲ್ಲಿ ಉಷ್ಣತೆಯನ್ನು ಹೆಚ್ಚಿಸುವ ಸ್ವಭಾವ ಹೊಂದಿರುವುದರಿಂದ ಅವುಗಳನ್ನು ಈ ಸಮಯದಲ್ಲಿ ಮಿತವಾಗಿ ಸೇವಿಸುವುದು ಒಳಿತು. ಹಸಿಮೆಣಸಿನಕಾಯಿ ಮತ್ತು ಒಣ ಮೆಣಸಿನಕಾಯಿ ಬೇಸಿಗೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಳಸಿದರೆ ಹೊಟ್ಟೆ ಉರಿ, ಹೆಚ್ಚುವರಿ ಬೆವರು ಮತ್ತು ಅಸ್ವಸ್ಥತೆ ಉಂಟಾಗಬಹುದು. </p>.<p>ಇದೇ ರೀತಿಯಾಗಿ, ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಕಚ್ಚಾ ರೂಪದಲ್ಲಿ ಹೆಚ್ಚಾಗಿ ಸೇವಿಸುವುದರಿಂದ ಕೆಲವರಿಗೆ ಆಸಿಡಿಟಿ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಆಲೂಗಡ್ಡೆ, ಮೂಲಂಗಿ, ಬೀಟ್ರೂಟ್ ಮತ್ತು ಸುವರ್ಣಗಡ್ಡೆ ಜೀರ್ಣಕ್ಕೆ ಸ್ವಲ್ಪ ಭಾರವಾಗುತ್ತವೆ. ಬೇಸಿಗೆಯಲ್ಲಿ ಜೀರ್ಣಕ್ರಿಯೆ ನಿಧಾನಗೊಳ್ಳುವ ಸಂದರ್ಭಗಳಲ್ಲಿ ಇವು ಹೊಟ್ಟೆ ತುಂಬಿದ ಭಾವನೆ ಮತ್ತು ಉಬ್ಬರವನ್ನೂ ಉಂಟುಮಾಡಬಹುದು. ಜೊತೆಗೆ, ಕೋಸು, ಹೂಕೋಸು, ಎಲೆಕೋಸು ತರಕಾರಿಗಳು ಕೆಲವರಿಗೆ ಹೊಟ್ಟೆ ಉಬ್ಬುವ ಸಮಸ್ಯೆಯನ್ನು ಹೆಚ್ಚಿಸಬಹುದು.</p>.<p>ಇದರ ಬದಲು, ದೇಹಕ್ಕೆ ತಂಪು ನೀಡುವ ತರಕಾರಿಗಳನ್ನು ಹೆಚ್ಚು ಬಳಸುವುದು ಉತ್ತಮ. ಸೌತೆಕಾಯಿ, ಸೊರೆಕಾಯಿ, ಕುಂಬಳಕಾಯಿ ಮುಂತಾದವುಗಳಲ್ಲಿ ನೀರಿನ ಅಂಶ ಹೆಚ್ಚು ಇರುವುದರಿಂದ ಸಮತೋಲನ ಕಾಪಾಡಲು ಸಹಾಯ ಮಾಡುತ್ತವೆ. ಇವು ದೇಹಕ್ಕೆ ತಾಜಾತನವನ್ನು ನೀಡುವ ಜೊತೆಗೆ ಜೀರ್ಣಕ್ರಿಯೆಯನ್ನೂ ಸುಲಭಗೊಳಿಸುತ್ತವೆ.</p><p>ಒಟ್ಟಿನಲ್ಲಿ, ಬೇಸಿಗೆಯಲ್ಲಿ ಯಾವುದೇ ತರಕಾರಿಯನ್ನು ಸಂಪೂರ್ಣವಾಗಿ ಬಿಟ್ಟುಬಿಡುವ ಅಗತ್ಯವಿಲ್ಲ. ಆದರೆ ಅವುಗಳನ್ನು ಸರಿಯಾದ ಪ್ರಮಾಣದಲ್ಲಿ ಸೇವಿಸುವುದು ಮುಖ್ಯ. ಹವಾಮಾನಕ್ಕೆ ತಕ್ಕಂತೆ ಆಹಾರವನ್ನು ಆಯ್ಕೆ ಮಾಡಿಕೊಂಡರೆ ದೇಹದ ಉಷ್ಣತೆ ನಿಯಂತ್ರಣದಲ್ಲಿರುತ್ತದೆ ಮತ್ತು ಆರೋಗ್ಯವೂ ಉತ್ತಮವಾಗಿರುತ್ತದೆ.</p>.<p><em><strong>(ಲೇಖಕರು: ಡಾ. ಪೂಜಾ. ಬಿ. MD, ಸಹಾಯಕ ಪ್ರಾಧ್ಯಾಪಕರು, ಶ್ರೀ ಧ.ಮಂ. ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಹಾಸನ)</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>