<p>ತುಳಸಿ ಗಿಡವನ್ನು ಮನೆಯ ಮುಂದೆ ನೆಟ್ಟು ಪೂಜೆ ಮಾಡುವುದರಿಂದ ಸಕಾರಾತ್ಮಕ ಭಾವನೆ ಮೂಡುತ್ತದೆ ಎಂಬ ನಂಬಿಕೆ ಇದೆ. ಅಷ್ಟು ಮಾತ್ರವಲ್ಲ ಈ ಗಿಡದಲ್ಲಿ ಸಾಕಷ್ಟು ಔಷಧೀಯ ಗುಣಗಳು ಅಡಗಿವೆ. ಇದರ ಬೇರು, ಎಲೆಗಳನ್ನು ವಿವಿಧ ರೂಪದಲ್ಲಿ ತೆಗೆದುಕೊಳ್ಳುವುದರಿಂದ ಅನೇಕ ಕಾಯಿಲೆಗಳ ನಿವಾರಣೆಗೆ ಸಹಕಾರಿ ಎಂದು ಆಯುರ್ವೇದ ತಜ್ಞರಾದ ಡಾ. ಶರದ್ ಕುಲಕರ್ಣಿ ಅವರು ಮಾಹಿತಿ ನೀಡಿದ್ದಾರೆ.</p><p><strong>ತುಳಸಿ ಎಲೆಯ ಉಪಯೋಗಗಳು</strong> </p><p>ತುಳಸಿಯಲ್ಲಿ ವಿಟಮಿನ್ ಎ, ಸಿ, ಕಬ್ಬಿಣಾಂಶ, ಕ್ಯಾಲ್ಸಿಯಂ ಅಂಶಗಳನ್ನು ಹೊಂದಿದೆ. ಇದರ ಎಲೆಯನ್ನು ಪ್ರತಿದಿನ ಸೇವನೆ ಮಾಡುವುದರಿಂದ ಜೀರ್ಣಕ್ರಿಯೆ, ರೋಗ ನಿರೋಧಕ ಶಕ್ತಿ, ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ ಎಂದು ಆಯುರ್ವೇದ ತಜ್ಞರು ಸಲಹೆ ನೀಡಿದ್ದಾರೆ.</p>.ಮುಖದ ಅಂದಗೆಡಿಸುವ ಮೊಡವೆಗಳ ನಿವಾರಣೆಗೆ ಇಲ್ಲಿವೆ ಸರಳ ಮನೆಮದ್ದುಗಳು.<p>ತುಳಸಿ ಎಲೆಯನ್ನು ಬಿಸಿ ನೀರಿನಲ್ಲಿ ಕುದಿಸಿ ಕುಡಿಯುವುದರಿಂದ ಬಿಟ್ಟೂ ಬಿಡದೆ ಕಾಡುವ ಶೀತ, ಜ್ವರವನ್ನು ನಿಯಂತ್ರಿಸುತ್ತದೆ. ಈ ಎಲೆಯ ರಸವನ್ನು ಹುರಿದ ಲವಂಗದ ಜತೆ ಸೇವನೆ ಮಾಡುವುದರಿಂದ ಕೆಮ್ಮಿನ ಸಮಸ್ಯೆ ನಿವಾರಣೆ ಆಗುತ್ತದೆ ಎಂದು ಆಯುರ್ವೇದ ವೈದ್ಯರು ಮಾಹಿತಿ ತಿಳಿಸಿದ್ದಾರೆ. </p><p>ತುಳಸಿ ಎಲೆಯನ್ನು ಕಾಫಿ ಟೀಯಲ್ಲಿ ಹಾಕಿ ಕುದಿಸಿ ಕುಡಿಯುವುದರಿಂದ ಗಂಟಲು ಕೆರೆತ ಕಮ್ಮಿ ಆಗುತ್ತದೆ. </p><p>ಪ್ರತಿನಿತ್ಯ ತುಳಸಿ ಎಲೆಯನ್ನು ಜಗಿಯುವುದರಿಂದ ಬಾಯಿ ವಾಸನೆ ಹೋಗಿಸಲು ಸಹಕಾರಿ. ಇದನ್ನು ಅರೆದು ಮುಖಕ್ಕೆ, ಚರ್ಮದ ಮೇಲೆ ಹಚ್ಚುವುದರಿಂದ ಚರ್ಮದ ಆರೋಗ್ಯ ಸುಧಾರಿಸುತ್ತದೆ ಎಂದು ಆಯುರ್ವೇದ ತಜ್ಞರಾದ ಡಾ. ಶರದ್ ಕುಲಕರ್ಣಿ ಅವರು ಮಾಹಿತಿ ನೀಡಿದ್ದಾರೆ.</p>
<p>ತುಳಸಿ ಗಿಡವನ್ನು ಮನೆಯ ಮುಂದೆ ನೆಟ್ಟು ಪೂಜೆ ಮಾಡುವುದರಿಂದ ಸಕಾರಾತ್ಮಕ ಭಾವನೆ ಮೂಡುತ್ತದೆ ಎಂಬ ನಂಬಿಕೆ ಇದೆ. ಅಷ್ಟು ಮಾತ್ರವಲ್ಲ ಈ ಗಿಡದಲ್ಲಿ ಸಾಕಷ್ಟು ಔಷಧೀಯ ಗುಣಗಳು ಅಡಗಿವೆ. ಇದರ ಬೇರು, ಎಲೆಗಳನ್ನು ವಿವಿಧ ರೂಪದಲ್ಲಿ ತೆಗೆದುಕೊಳ್ಳುವುದರಿಂದ ಅನೇಕ ಕಾಯಿಲೆಗಳ ನಿವಾರಣೆಗೆ ಸಹಕಾರಿ ಎಂದು ಆಯುರ್ವೇದ ತಜ್ಞರಾದ ಡಾ. ಶರದ್ ಕುಲಕರ್ಣಿ ಅವರು ಮಾಹಿತಿ ನೀಡಿದ್ದಾರೆ.</p><p><strong>ತುಳಸಿ ಎಲೆಯ ಉಪಯೋಗಗಳು</strong> </p><p>ತುಳಸಿಯಲ್ಲಿ ವಿಟಮಿನ್ ಎ, ಸಿ, ಕಬ್ಬಿಣಾಂಶ, ಕ್ಯಾಲ್ಸಿಯಂ ಅಂಶಗಳನ್ನು ಹೊಂದಿದೆ. ಇದರ ಎಲೆಯನ್ನು ಪ್ರತಿದಿನ ಸೇವನೆ ಮಾಡುವುದರಿಂದ ಜೀರ್ಣಕ್ರಿಯೆ, ರೋಗ ನಿರೋಧಕ ಶಕ್ತಿ, ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ ಎಂದು ಆಯುರ್ವೇದ ತಜ್ಞರು ಸಲಹೆ ನೀಡಿದ್ದಾರೆ.</p>.ಮುಖದ ಅಂದಗೆಡಿಸುವ ಮೊಡವೆಗಳ ನಿವಾರಣೆಗೆ ಇಲ್ಲಿವೆ ಸರಳ ಮನೆಮದ್ದುಗಳು.<p>ತುಳಸಿ ಎಲೆಯನ್ನು ಬಿಸಿ ನೀರಿನಲ್ಲಿ ಕುದಿಸಿ ಕುಡಿಯುವುದರಿಂದ ಬಿಟ್ಟೂ ಬಿಡದೆ ಕಾಡುವ ಶೀತ, ಜ್ವರವನ್ನು ನಿಯಂತ್ರಿಸುತ್ತದೆ. ಈ ಎಲೆಯ ರಸವನ್ನು ಹುರಿದ ಲವಂಗದ ಜತೆ ಸೇವನೆ ಮಾಡುವುದರಿಂದ ಕೆಮ್ಮಿನ ಸಮಸ್ಯೆ ನಿವಾರಣೆ ಆಗುತ್ತದೆ ಎಂದು ಆಯುರ್ವೇದ ವೈದ್ಯರು ಮಾಹಿತಿ ತಿಳಿಸಿದ್ದಾರೆ. </p><p>ತುಳಸಿ ಎಲೆಯನ್ನು ಕಾಫಿ ಟೀಯಲ್ಲಿ ಹಾಕಿ ಕುದಿಸಿ ಕುಡಿಯುವುದರಿಂದ ಗಂಟಲು ಕೆರೆತ ಕಮ್ಮಿ ಆಗುತ್ತದೆ. </p><p>ಪ್ರತಿನಿತ್ಯ ತುಳಸಿ ಎಲೆಯನ್ನು ಜಗಿಯುವುದರಿಂದ ಬಾಯಿ ವಾಸನೆ ಹೋಗಿಸಲು ಸಹಕಾರಿ. ಇದನ್ನು ಅರೆದು ಮುಖಕ್ಕೆ, ಚರ್ಮದ ಮೇಲೆ ಹಚ್ಚುವುದರಿಂದ ಚರ್ಮದ ಆರೋಗ್ಯ ಸುಧಾರಿಸುತ್ತದೆ ಎಂದು ಆಯುರ್ವೇದ ತಜ್ಞರಾದ ಡಾ. ಶರದ್ ಕುಲಕರ್ಣಿ ಅವರು ಮಾಹಿತಿ ನೀಡಿದ್ದಾರೆ.</p>