<p><strong>ವಿಜಯಪುರ:</strong> ‘ವಿದ್ಯಾರ್ಥಿನಿಯರೆಲ್ಲರೂ ಕನಸುಗಾರರಾಗಿ, ಕಂಡಂತಹಕನಸುಗಳನ್ನು ಸಾಕಾರಗೊಳಿಸುವಲ್ಲಿ ದಿಟ್ಟ ಹೆಜ್ಜೆಯನ್ನಿಡಲು ಇಂದಿನಿಂದಲೇ ಸನ್ನದ್ಧರಾಗಬೇಕು’ ಎಂದು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಬಿಹಾ ಸಲಹೆ ನೀಡಿದರು.</p>.<p>ನಗರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಇತಿಹಾಸ ಅಧ್ಯಯನ ವಿಭಾಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಇತಿಹಾಸ ಕ್ಲಬ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ‘ ಇಂದಿನ ಮಕ್ಕಳಲ್ಲಿ ನವೀನ ಕೌಶಲಗಳು ಮನೆ ಮಾಡಬೇಕು’ ಎಂದರು.</p>.<p>ಸಮಾಜ ವಿಜ್ಞಾನ ನಿಕಾಯದ ಡೀನ್ ಪ್ರೊ.ಓಂಕಾರ ಕಾಕಡೆ, ನಮ್ಮಲ್ಲಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ನವೀನ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕು. ಕಲಿಕೆಯ ಮಟ್ಟ ಹೆಚ್ಚಾದಂತೆ ನಮ್ಮ ಅಭಿವೃದ್ಧಿಯು ಹೆಚ್ಚುತ್ತದೆ ಎಂದು ತಿಳಿಸಿದರು.</p>.<p>ಇತಿಹಾಸ ವಿಭಾಗದ ಪ್ರಾಧ್ಯಾಪಕರು, ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಇದ್ದರು. ಇತಿಹಾಸ ವಿಭಾಗದ ವಿದ್ಯಾರ್ಥಿನಿಯರು ಸ್ವಾಗತ ಗೀತೆಹಾಡಿದರು. ಉಪನ್ಯಾಸಕ ಡಾ.ಆನಂದ ಕುಲಕರ್ಣಿ ನಿರೂಪಿಸಿದರು. ಉಪನ್ಯಾಸಕ ಡಾ.ಎಂ.ಎಸ್.ಮುಜಾವರ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ‘ವಿದ್ಯಾರ್ಥಿನಿಯರೆಲ್ಲರೂ ಕನಸುಗಾರರಾಗಿ, ಕಂಡಂತಹಕನಸುಗಳನ್ನು ಸಾಕಾರಗೊಳಿಸುವಲ್ಲಿ ದಿಟ್ಟ ಹೆಜ್ಜೆಯನ್ನಿಡಲು ಇಂದಿನಿಂದಲೇ ಸನ್ನದ್ಧರಾಗಬೇಕು’ ಎಂದು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಬಿಹಾ ಸಲಹೆ ನೀಡಿದರು.</p>.<p>ನಗರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಇತಿಹಾಸ ಅಧ್ಯಯನ ವಿಭಾಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಇತಿಹಾಸ ಕ್ಲಬ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ‘ ಇಂದಿನ ಮಕ್ಕಳಲ್ಲಿ ನವೀನ ಕೌಶಲಗಳು ಮನೆ ಮಾಡಬೇಕು’ ಎಂದರು.</p>.<p>ಸಮಾಜ ವಿಜ್ಞಾನ ನಿಕಾಯದ ಡೀನ್ ಪ್ರೊ.ಓಂಕಾರ ಕಾಕಡೆ, ನಮ್ಮಲ್ಲಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ನವೀನ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕು. ಕಲಿಕೆಯ ಮಟ್ಟ ಹೆಚ್ಚಾದಂತೆ ನಮ್ಮ ಅಭಿವೃದ್ಧಿಯು ಹೆಚ್ಚುತ್ತದೆ ಎಂದು ತಿಳಿಸಿದರು.</p>.<p>ಇತಿಹಾಸ ವಿಭಾಗದ ಪ್ರಾಧ್ಯಾಪಕರು, ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಇದ್ದರು. ಇತಿಹಾಸ ವಿಭಾಗದ ವಿದ್ಯಾರ್ಥಿನಿಯರು ಸ್ವಾಗತ ಗೀತೆಹಾಡಿದರು. ಉಪನ್ಯಾಸಕ ಡಾ.ಆನಂದ ಕುಲಕರ್ಣಿ ನಿರೂಪಿಸಿದರು. ಉಪನ್ಯಾಸಕ ಡಾ.ಎಂ.ಎಸ್.ಮುಜಾವರ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>