ದಿನ ಭವಿಷ್ಯ: ಈ ರಾಶಿಯ ವ್ಯಾಪಾರಿಗಳಿಗೆ ಅಧಿಕ ಲಾಭ
Published 16 ಫೆಬ್ರುವರಿ 2026, 22:30 IST
ವಿದ್ಯಾಶಂಕರ ಸೋಮಯಾಜಿ, ಕಮ್ಮರಡಿ
ಮೇಷ
ಉದ್ವೇಗ ಹಾಗೂ ಕೆಲ ವೈಮನಸ್ಸುಗಳು ತಂದೆಯ ತಿಳಿವಳಿಕೆ ನುಡಿಯಿಂದ ದೂರಾಗುವುದು. ಆರಿಸಿಕೊಂಡ ಮಾರ್ಗದಲ್ಲಿ ಸರಿ ಬಗ್ಗೆ ಯೋಚಿಸಿ ಏಕಾಗ್ರತೆಯಿಂದ ಮುನ್ನಡೆಯಿರಿ.
ವೃಷಭ
ಆರೋಗ್ಯದಲ್ಲಿ ಸ್ವಲ್ಪ ಮಟ್ಟಿಗೆ ಏರುಪೇರಾದರೂ ಆತಂಕಕ್ಕೆ ಕಾರಣವಾಗಬೇಕಿಲ್ಲ. ಆಫೀಸಿನ ಕೆಲಸಗಳು ಬೇಗನೇ ಮುಗಿಸಿ. ಪರೀಕ್ಷಾ ಅಧಿಕಾರಿಗಳು ಕಚೇರಿಗೆ ಭೇಟಿ ನೀಡಿ ಕೆಲಸವನ್ನು ಪರೀಕ್ಷಿಸಬಹುದು.
ಮಿಥುನ
ಆಟಿಕೆಗಳ ಮಾರಾಟದವರಿಗೆ ಮತ್ತು ಉಡುಗೊರೆ ವಸ್ತುಗಳ ಮಾರಾಟಗಾರರಿಗೆ ಉತ್ತಮ ಮಾರಾಟ ಹಾಗೂ ಲಾಭವಿರುವುದು. ಉನ್ನತ ಶಿಕ್ಷಣದವರಿಗೆ ಕೀರ್ತಿ ಮತ್ತು ಸಾಮಾಜಿಕ ಗೌರವ ಪ್ರಾಪ್ತಿ.
ಕರ್ಕಾಟಕ
ನಿಯೋಜಿತ ಕೆಲಸಗಳನ್ನು ಉತ್ಸಾಹದಿಂದ ಮಾಡಿ ಮುಗಿಸುವಿರಿ. ಇನ್ನೊಂದು ಹೊಸ ಕೆಲಸ ನಿಮಗಾಗಿ ಕಾದಿರಲಿದೆ. ಮೇಧಾಕರ ದಕ್ಷಿಣಾಮೂರ್ತಿಯ ಆರಾಧನೆ ಸುಲಭವಾಗಿ ಯಶಸ್ಸಿನ ದಾರಿ ತೋರಿಸಲಿದೆ.
ಸಿಂಹ
ಭೂ ಖರೀದಿಯಂಥ ಅಥವಾ ಗೃಹ ನಿರ್ಮಾಣ ಕಾರ್ಯದಂಥ ಕನಸಿನ ಯೋಚನೆಗಳು ಕಾರ್ಯರೂಪಕ್ಕೆ ಬರಲಿವೆ. ಸಹಚರರಿಂದ ಅಥವಾ ಅಧಿಕಾರಿಗಳಿಂದ ಅಸಹಕಾರದ ಪರಿಸ್ಥಿತಿ ಎದುರಾಗಬಹುದು.
ಕನ್ಯಾ
ವಿಚಾರದ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳದೇ ಯಾವುದೇ ರೀತಿಯ ತೀರ್ಮಾನ ತೆಗೆದುಕೊಳ್ಳಬೇಡಿ. ಯಂತ್ರೋಪಕರಣಗಳ ಸಹಾಯದಿಂದ ಕೆಲಸ ಮಾಡುವ ವೇಳೆಯಲ್ಲಿ ಅಪಾಯ ಸಂಭವಿಸಬಹುದು.
ತುಲಾ
ಆತ್ಮೀಯರು ಹೇಳಿದ ಸಲಹೆ ಸೂಚನೆಗಳನ್ನು ಪಾಲಿಸಲಾಗದೇ ಬಿಡಲೂ ಆಗದೇ ಚಡಪಡಿಸುವ ಪರಿಸ್ಥಿತಿ ನಿಮ್ಮದಾಗುತ್ತದೆ. ನಿಮ್ಮ ಮೇಲುಸ್ತುವಾರಿಯಲ್ಲಿ ಕೆಲಸ ಕಾರ್ಯಗಳು ಸುಗಮವಾಗಿ ಸಾಗಲಿವೆ.
ವೃಶ್ಚಿಕ
ಸಾಹಸಪ್ರಿಯತೆ ಮನೋಭಾವವು ಆವರಿಸಲಿದ್ದು ಚಾರಣ ಅಥವಾ ಸವಾಲಿನ ಕೆಲಸಗಳನ್ನು ಮಾಡುವಿರಿ. ಕುಟುಂಬದಲ್ಲಿ ಉತ್ತಮ ವಾತಾವರಣವಿದ್ದು ಸಂತಸ ಹಾಗೂ ಸಮಾಧಾನ ತರಲಿದೆ.
ಧನು
ವಿಲಾಸೀ ವಸ್ತುಗಳ ಖರೀದಿ ಮಾಡುವ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಲೇಬೇಕಾದ ಪರಿಸ್ಥಿತಿ ತೋರಲಿದೆ. ನಿಮ್ಮ ಸೇವಾ ಮನೋಭಾವಕ್ಕೆ ಕುಟುಂಬ ವರ್ಗದವರು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಾರೆ.
ಮಕರ
ಜೀವನದಲ್ಲಿ ಹಳೆಯ ಘಟನೆಗಳಿಂದ ಕಲಿತ ಪಾಠ ಉತ್ತಮ ತಿಳಿವಳಿಕೆಗೆ ಕಾರಣವಾಗುವುದು. ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯಲ್ಲಿ ಅನೇಕ ತರಹದ ಅವಕಾಶಗಳು ಒದಗಿ ಬರುತ್ತವೆ.
ಕುಂಭ
ಅಭಿಪ್ರಾಯಗಳು ಬೇರೆಯವರ ಆಲೋಚನೆಗೆ ಹೊಂದಿಕೊಳ್ಳುವುದು ಬಹಳ ಕಷ್ಟಕರ ಎನಿಸಲಿದೆ. ನಿಯೋಜಿತ ಕಾರ್ಯ ಕಲಾಪಕ್ಕೆ ಪುಟ್ಟ ಆತಂಕಗಳು ಎದುರಾಗಲಿವೆ.
ಮೀನ
ಮಕ್ಕಳ ವಿಷಯದಲ್ಲಿ ಸಂಯಮದೊಂದಿಗೆ ವರ್ತಿಸುವುದು ಉತ್ತಮ. ಸಂತೋಷವಾಗಿ ದಿನ ಕಳೆಯುವ ಹಾಗೆ ಆಗುವುದು. ವ್ಯವಹಾರಗಳಲ್ಲಿ ಉತ್ತಮ ಆದಾಯ ಇರುವುದು.