<p><strong>ಬೆಂಗಳೂರು</strong>: ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಶಾಲಾ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣು ಯೋಜನೆಯನ್ನು ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ. ಅದಕ್ಕಾಗಿ ₹ 1,500 ಕೋಟಿ ಮೀಸಲಿಡಾಗಿದೆ ಎಂದರು.</p>.Karnataka Budget: ಎಲ್ಲಾ ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೆ ₹8 ಸಾವಿರ ಕೋಟಿ.<h2>ಪ್ರಾಥಮಿಕ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಇತರ ಘೋಷಣೆಗಳು</h2><h2></h2><ul><li><p>ಏಷಿಯನ್ ಡೆವಲಪ್ಮೆಂಟ್ ಬ್ಯಾಂಕ್ ನೆರವಿನೊಂದಿಗೆ ₹2,500 ಕೋಟಿ ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭ</p></li><li><p>ಶಾಲಾ ಮಕ್ಕಳಿಗೆ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ಪ್ರಸ್ತುತ ವಾರದಲ್ಲಿ ಮೂರು ದಿನ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ಪುಡಿಯನ್ನು ಬಿಸಿ ಹಾಲಿನೊಂದಿಗೆ ಮಿಶ್ರಣ ಮಾಡಿ ವಿತರಿಸಲಾಗುತ್ತಿದ್ದು, ಇದನ್ನು ವಾರದ ಐದು ದಿನಗಳಿಗೆ ವಿಸ್ತರಿಸಲಾಗುವುದು. ₹ 100 ಕೋಟಿ ವೆಚ್ಚದ ಈ ಯೋಜನೆಯ ಶೇ 25 ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ.</p></li><li><p> ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕ ಮಾಸಿಕ ಗೌರವಧನವನ್ನು ₹ 2,000 ಹೆಚ್ಚಳ</p></li><li><p>ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನ ₹ 1,000ಗೆ</p></li><li><p>ರಾಜ್ಯದ ಅರ್ಹ 100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಣ</p></li><li><p>5000 ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳ ವಿಸ್ತರಣೆ ಇದಕ್ಕಾಗಿ ₹70 ಕೋಟಿ ವೆಚ್ಚ.</p></li><li><p> ʻಕಲಿಕಾ ಚಿಲುಮೆʼ ಕಾರ್ಯಕ್ರಮದಡಿ ಒಂದರಿಂದ ಐದನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸಂತಸದಾಯಕ ಕಲಿಕಾ ಅನುಭವ ಒದಗಿಸುವುದು.</p></li></ul>.Karnataka Budget 2025 | ಪಶುಸಂಗೋಪನೆ: 50 ನೂತನ ಪಶು ಚಿಕಿತ್ಸಾಲಯ ಪ್ರಾರಂಭ. <ul><li><p>ʻಗಣಿತ ಗಣಕʼ ಕಾರ್ಯಕ್ರಮದಡಿ 3 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಫೋನ್ ಮೂಲಕ ವೈಯಕ್ತಿಕ ಬೋಧನೆಯೊಂದಿಗೆ ಬುನಾದಿ ಗಣಿತ ಕೌಶಲ್ಯವನ್ನು ಅಭಿವೃದ್ಧಿಪಡಿಸಿ ರಾಜ್ಯಾದ್ಯಂತ ವಿಸ್ತರಣೆ</p></li><li><p>ʻಓದು ಕರ್ನಾಟಕʼ ಯೋಜನೆಯಡಿ 4 ಮತ್ತು 5ನೇ ತರಗತಿ ವಿದ್ಯಾರ್ಥಿಗಳಿಗೆ ಬುನಾದಿ ಸಾಕ್ಷರತೆ ಹಾಗೂ ಸಂಖ್ಯಾಜ್ಞಾನದ ಕೌಶಲ್ಯಗಳನ್ನು ಅಭಿವೃದ್ಧಿ</p></li><li><p> ಸರ್ಕಾರಿ ಶಾಲೆಗಳಲ್ಲಿ ಅತೀ ಕಡಿಮೆ ಕಲಿಕಾ ಸ್ತರದಲ್ಲಿರುವ 6 ರಿಂದ 10ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಹೆಚ್ಚಿಸುವ ʻಮರುಸಿಂಚನʼ ಕಾರ್ಯಕ್ರಮವನ್ನು ರಾಜ್ಯಾದ್ಯಂತ ವಿಸ್ತರಿಸುವುದು.</p></li><li><p>ʻನಿರಂತರʼ ಕಾರ್ಯಕ್ರಮದಡಿ Face Recognition ತಂತ್ರಜ್ಞಾನದ ಮೂಲಕ ಮಕ್ಕಳ ಹಾಜರಾತಿಯನ್ನು ಖಚಿತಪಡಿಸುವ ವ್ಯವಸ್ಥೆಯನ್ನು ಜಾರಿ</p></li><li><p>ವಿದ್ಯಾರ್ಥಿಗಳಲ್ಲಿ ಮಾತೃಭಾಷೆಯ ಜೊತೆಗೆ ಆಂಗ್ಲಭಾಷೆಯ ಕೌಶಲ್ಯ ಬೆಳೆಸಲು ರಾಜ್ಯದ 4,000 ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ವಿಭಾಗವನ್ನು ಪ್ರಾರಂಭಿಸಲಾಗುವುದು.</p></li><li><p>114. ರಾಜ್ಯದ 500 ಸರ್ಕಾರಿ ಪ್ರೌಢಶಾಲೆಗಳಲ್ಲಿ ಕಂಪ್ಯೂಟರ್ ಮತ್ತು ವಿಜ್ಞಾನ ಪ್ರಯೋಗಾಲಯಗಳ ಸ್ಥಾಪನೆ</p></li><li><p>ಸರ್ಕಾರಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ, ಶೌಚಾಲಯಗಳ ನಿರ್ಮಾಣ ಮತ್ತು ದುರಸ್ತಿ ಕಾರ್ಯಗಳಿಗೆ ₹725 ಕೋಟಿ. ಹಾಗೂ ಅಗತ್ಯ ಪೀಠೋಪಕರಣಗಳನ್ನು ಒದಗಿಸಲು ₹50 ಕೋಟಿ</p></li></ul>.Karnataka Budget 2025 Highlights: ಬಜೆಟ್ನ ಮುಖ್ಯಾಂಶಗಳು ಇಲ್ಲಿವೆ.<ul><li><p>ಮಧ್ಯಾಹ್ನ ಉಪಹಾರ ಯೋಜನೆಯಡಿ ರಾಜ್ಯದ 16,347 ಶಾಲೆಗಳ ಅಡುಗೆಮನೆ ಆಧುನೀಕರಣ ಕಾರ್ಯ ಮತ್ತು ಹೊಸ ಪಾತ್ರೆ ಪರಿಕರಗಳನ್ನು ಒದಗಿಸಲು ₹ 46 ಕೋಟಿ</p></li><li><p>ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಕ್ಷರ ಆವಿಷ್ಕಾರ ಯೋಜನೆ ಅಡಿ ₹200 ಕೋಟಿ ವೆಚ್ಚದಲ್ಲಿ ಆಯ್ದ 50 ಶಾಲೆಗಳನ್ನು ಸುಸಜ್ಜಿತ ಕೆ.ಪಿ.ಎಸ್. ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು.</p></li><li><p>ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 5,267 ಶಿಕ್ಷಕರ ಹುದ್ದೆಗಳನ್ನು ಭರ್ತಿ .</p></li><li><p>ಇನ್ನೂ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತರ್ಕಬದ್ಧಗೊಳಿಸಿ 5,000 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ</p></li><li><p>ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಯುವಕರ ತರಬೇತಿ ಕೇಂದ್ರದ ಅಭಿವೃದ್ಧಿಗಾಗಿ ₹2 ಎರಡು ಕೋಟಿ </p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಶಾಲಾ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣು ಯೋಜನೆಯನ್ನು ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ. ಅದಕ್ಕಾಗಿ ₹ 1,500 ಕೋಟಿ ಮೀಸಲಿಡಾಗಿದೆ ಎಂದರು.</p>.Karnataka Budget: ಎಲ್ಲಾ ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೆ ₹8 ಸಾವಿರ ಕೋಟಿ.<h2>ಪ್ರಾಥಮಿಕ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಇತರ ಘೋಷಣೆಗಳು</h2><h2></h2><ul><li><p>ಏಷಿಯನ್ ಡೆವಲಪ್ಮೆಂಟ್ ಬ್ಯಾಂಕ್ ನೆರವಿನೊಂದಿಗೆ ₹2,500 ಕೋಟಿ ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭ</p></li><li><p>ಶಾಲಾ ಮಕ್ಕಳಿಗೆ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ಪ್ರಸ್ತುತ ವಾರದಲ್ಲಿ ಮೂರು ದಿನ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ಪುಡಿಯನ್ನು ಬಿಸಿ ಹಾಲಿನೊಂದಿಗೆ ಮಿಶ್ರಣ ಮಾಡಿ ವಿತರಿಸಲಾಗುತ್ತಿದ್ದು, ಇದನ್ನು ವಾರದ ಐದು ದಿನಗಳಿಗೆ ವಿಸ್ತರಿಸಲಾಗುವುದು. ₹ 100 ಕೋಟಿ ವೆಚ್ಚದ ಈ ಯೋಜನೆಯ ಶೇ 25 ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ.</p></li><li><p> ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕ ಮಾಸಿಕ ಗೌರವಧನವನ್ನು ₹ 2,000 ಹೆಚ್ಚಳ</p></li><li><p>ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನ ₹ 1,000ಗೆ</p></li><li><p>ರಾಜ್ಯದ ಅರ್ಹ 100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಣ</p></li><li><p>5000 ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳ ವಿಸ್ತರಣೆ ಇದಕ್ಕಾಗಿ ₹70 ಕೋಟಿ ವೆಚ್ಚ.</p></li><li><p> ʻಕಲಿಕಾ ಚಿಲುಮೆʼ ಕಾರ್ಯಕ್ರಮದಡಿ ಒಂದರಿಂದ ಐದನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸಂತಸದಾಯಕ ಕಲಿಕಾ ಅನುಭವ ಒದಗಿಸುವುದು.</p></li></ul>.Karnataka Budget 2025 | ಪಶುಸಂಗೋಪನೆ: 50 ನೂತನ ಪಶು ಚಿಕಿತ್ಸಾಲಯ ಪ್ರಾರಂಭ. <ul><li><p>ʻಗಣಿತ ಗಣಕʼ ಕಾರ್ಯಕ್ರಮದಡಿ 3 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಫೋನ್ ಮೂಲಕ ವೈಯಕ್ತಿಕ ಬೋಧನೆಯೊಂದಿಗೆ ಬುನಾದಿ ಗಣಿತ ಕೌಶಲ್ಯವನ್ನು ಅಭಿವೃದ್ಧಿಪಡಿಸಿ ರಾಜ್ಯಾದ್ಯಂತ ವಿಸ್ತರಣೆ</p></li><li><p>ʻಓದು ಕರ್ನಾಟಕʼ ಯೋಜನೆಯಡಿ 4 ಮತ್ತು 5ನೇ ತರಗತಿ ವಿದ್ಯಾರ್ಥಿಗಳಿಗೆ ಬುನಾದಿ ಸಾಕ್ಷರತೆ ಹಾಗೂ ಸಂಖ್ಯಾಜ್ಞಾನದ ಕೌಶಲ್ಯಗಳನ್ನು ಅಭಿವೃದ್ಧಿ</p></li><li><p> ಸರ್ಕಾರಿ ಶಾಲೆಗಳಲ್ಲಿ ಅತೀ ಕಡಿಮೆ ಕಲಿಕಾ ಸ್ತರದಲ್ಲಿರುವ 6 ರಿಂದ 10ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಹೆಚ್ಚಿಸುವ ʻಮರುಸಿಂಚನʼ ಕಾರ್ಯಕ್ರಮವನ್ನು ರಾಜ್ಯಾದ್ಯಂತ ವಿಸ್ತರಿಸುವುದು.</p></li><li><p>ʻನಿರಂತರʼ ಕಾರ್ಯಕ್ರಮದಡಿ Face Recognition ತಂತ್ರಜ್ಞಾನದ ಮೂಲಕ ಮಕ್ಕಳ ಹಾಜರಾತಿಯನ್ನು ಖಚಿತಪಡಿಸುವ ವ್ಯವಸ್ಥೆಯನ್ನು ಜಾರಿ</p></li><li><p>ವಿದ್ಯಾರ್ಥಿಗಳಲ್ಲಿ ಮಾತೃಭಾಷೆಯ ಜೊತೆಗೆ ಆಂಗ್ಲಭಾಷೆಯ ಕೌಶಲ್ಯ ಬೆಳೆಸಲು ರಾಜ್ಯದ 4,000 ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ವಿಭಾಗವನ್ನು ಪ್ರಾರಂಭಿಸಲಾಗುವುದು.</p></li><li><p>114. ರಾಜ್ಯದ 500 ಸರ್ಕಾರಿ ಪ್ರೌಢಶಾಲೆಗಳಲ್ಲಿ ಕಂಪ್ಯೂಟರ್ ಮತ್ತು ವಿಜ್ಞಾನ ಪ್ರಯೋಗಾಲಯಗಳ ಸ್ಥಾಪನೆ</p></li><li><p>ಸರ್ಕಾರಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ, ಶೌಚಾಲಯಗಳ ನಿರ್ಮಾಣ ಮತ್ತು ದುರಸ್ತಿ ಕಾರ್ಯಗಳಿಗೆ ₹725 ಕೋಟಿ. ಹಾಗೂ ಅಗತ್ಯ ಪೀಠೋಪಕರಣಗಳನ್ನು ಒದಗಿಸಲು ₹50 ಕೋಟಿ</p></li></ul>.Karnataka Budget 2025 Highlights: ಬಜೆಟ್ನ ಮುಖ್ಯಾಂಶಗಳು ಇಲ್ಲಿವೆ.<ul><li><p>ಮಧ್ಯಾಹ್ನ ಉಪಹಾರ ಯೋಜನೆಯಡಿ ರಾಜ್ಯದ 16,347 ಶಾಲೆಗಳ ಅಡುಗೆಮನೆ ಆಧುನೀಕರಣ ಕಾರ್ಯ ಮತ್ತು ಹೊಸ ಪಾತ್ರೆ ಪರಿಕರಗಳನ್ನು ಒದಗಿಸಲು ₹ 46 ಕೋಟಿ</p></li><li><p>ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಕ್ಷರ ಆವಿಷ್ಕಾರ ಯೋಜನೆ ಅಡಿ ₹200 ಕೋಟಿ ವೆಚ್ಚದಲ್ಲಿ ಆಯ್ದ 50 ಶಾಲೆಗಳನ್ನು ಸುಸಜ್ಜಿತ ಕೆ.ಪಿ.ಎಸ್. ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು.</p></li><li><p>ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 5,267 ಶಿಕ್ಷಕರ ಹುದ್ದೆಗಳನ್ನು ಭರ್ತಿ .</p></li><li><p>ಇನ್ನೂ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತರ್ಕಬದ್ಧಗೊಳಿಸಿ 5,000 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ</p></li><li><p>ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಯುವಕರ ತರಬೇತಿ ಕೇಂದ್ರದ ಅಭಿವೃದ್ಧಿಗಾಗಿ ₹2 ಎರಡು ಕೋಟಿ </p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>