<p><strong>ಬೆಂಗಳೂರು:</strong> ಆರು ನಕ್ಸಲರು ಶರಣರಾಗುವುದರೊಂದಿಗೆ ರಾಜ್ಯವು ನಕ್ಸಲ್ ಮುಕ್ತವಾಗಿದೆ. ಹಾಗಾಗಿ ನಕ್ಸಲ್ ನಿಗ್ರಹ ಪಡೆಯನ್ನು ವಿಸರ್ಜನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.</p><p>ಶರಣಾಗಿರುವ ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ಸೇರ್ಪಡೆಗೊಳಿಸಲು ಹಾಗೂ ನಕ್ಸಲ್ ಬಾಧಿತ ಪ್ರದೇಶಗಳಲ್ಲಿ ಮೂಲಸೌಕರ್ಯ ಒದಗಿಸಲು ₹ 10 ಕೋಟಿ ವೆಚ್ಚದ ವಿಶೇಷ ಪ್ಯಾಕೇಜ್ ರೂಪಿಸಲಾಗುತ್ತದೆ ಎಂದು ಪ್ರಕಟಿಸಿದರು.</p><p>ರಾಜ್ಯದಲ್ಲಿ ಪ್ರಸ್ತುತ 5 ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರಸಕ್ತ ವರ್ಷದಿಂದ ಬಳ್ಳಾರಿ, ದಾವಣಗೆರೆ, ಮೈಸೂರು ಮತ್ತು ಬೆಂಗಳೂರು ಕೇಂದ್ರ ವಲಯಗಳಲ್ಲಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳಗಳ ಸ್ಥಾಪನೆಗೆ ಒತ್ತು ನೀಡಲಾಗಿದೆ.</p><p>ನಂದಿ ಬೆಟ್ಟದ ಕೂಡುಗುರ್ಕಿ ಮತ್ತು ಕೆಜಿಎಫ್ ಬಳಿ ಎರಡು ಭಾರತೀಯ ಮೀಸಲು ಪೊಲೀಸ್ ಪಡೆಗಳನ್ನು (ಐಆರ್ ಬಿ) ಸ್ಥಾಪಿಸಲು ಬಜೆಟ್ನಲ್ಲಿ ₹80 ಕೋಟಿ ಅನುದಾನ ಒದಗಿಸಲಾಗಿದೆ. ಪೊಲೀಸ್ ವಸತಿ ಗೃಹಗಳ ನಿರ್ಮಾಣಕ್ಕೆ 2025-26ನೇ ಸಾಲಿಗೆ ₹300 ಕೋಟಿ ಹಾಗೂ ಪೊಲೀಸ್ ಸಿಬ್ಬಂದಿಗೆ ಆರೋಗ್ಯ ತಪಾಸಣೆಗೆ ನೀಡುತ್ತಿರುವ ಮೊತ್ತವನ್ನು ₹1 ಸಾವಿರದಿಂದ ₹1,500ಕ್ಕೆ ಹೆಚ್ಚಿಸಲಾಗಿದೆ.</p>.Karnataka Budget 2025 Highlights: ಬಜೆಟ್ನ ಮುಖ್ಯಾಂಶಗಳು ಇಲ್ಲಿವೆ.Karnataka Budget: ಬಜೆಟ್ ಭಾಷಣದಲ್ಲಿ ಕವಿತೆ, ಚಿಂತಕರ ನುಡಿ ಪ್ರಸ್ತಾಪಿಸಿದ ಸಿಎಂ.Budget | ಪ್ರವಾಸೋದ್ಯಮ: ₹ 8,000 ಕೋಟಿ ಹೂಡಿಕೆ, 1.5 ಲಕ್ಷ ಉದ್ಯೋಗ ಸೃಷ್ಟಿ ಗುರಿ.Budget: ಒಲಿಂಪಿಕ್ಸ್ಗೆ ತಯಾರಾಗುತ್ತಿರುವ ಕ್ರೀಡಾಪಟುಗಳಿಗೆ ತಲಾ ₹10 ಲಕ್ಷ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಆರು ನಕ್ಸಲರು ಶರಣರಾಗುವುದರೊಂದಿಗೆ ರಾಜ್ಯವು ನಕ್ಸಲ್ ಮುಕ್ತವಾಗಿದೆ. ಹಾಗಾಗಿ ನಕ್ಸಲ್ ನಿಗ್ರಹ ಪಡೆಯನ್ನು ವಿಸರ್ಜನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.</p><p>ಶರಣಾಗಿರುವ ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ಸೇರ್ಪಡೆಗೊಳಿಸಲು ಹಾಗೂ ನಕ್ಸಲ್ ಬಾಧಿತ ಪ್ರದೇಶಗಳಲ್ಲಿ ಮೂಲಸೌಕರ್ಯ ಒದಗಿಸಲು ₹ 10 ಕೋಟಿ ವೆಚ್ಚದ ವಿಶೇಷ ಪ್ಯಾಕೇಜ್ ರೂಪಿಸಲಾಗುತ್ತದೆ ಎಂದು ಪ್ರಕಟಿಸಿದರು.</p><p>ರಾಜ್ಯದಲ್ಲಿ ಪ್ರಸ್ತುತ 5 ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರಸಕ್ತ ವರ್ಷದಿಂದ ಬಳ್ಳಾರಿ, ದಾವಣಗೆರೆ, ಮೈಸೂರು ಮತ್ತು ಬೆಂಗಳೂರು ಕೇಂದ್ರ ವಲಯಗಳಲ್ಲಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳಗಳ ಸ್ಥಾಪನೆಗೆ ಒತ್ತು ನೀಡಲಾಗಿದೆ.</p><p>ನಂದಿ ಬೆಟ್ಟದ ಕೂಡುಗುರ್ಕಿ ಮತ್ತು ಕೆಜಿಎಫ್ ಬಳಿ ಎರಡು ಭಾರತೀಯ ಮೀಸಲು ಪೊಲೀಸ್ ಪಡೆಗಳನ್ನು (ಐಆರ್ ಬಿ) ಸ್ಥಾಪಿಸಲು ಬಜೆಟ್ನಲ್ಲಿ ₹80 ಕೋಟಿ ಅನುದಾನ ಒದಗಿಸಲಾಗಿದೆ. ಪೊಲೀಸ್ ವಸತಿ ಗೃಹಗಳ ನಿರ್ಮಾಣಕ್ಕೆ 2025-26ನೇ ಸಾಲಿಗೆ ₹300 ಕೋಟಿ ಹಾಗೂ ಪೊಲೀಸ್ ಸಿಬ್ಬಂದಿಗೆ ಆರೋಗ್ಯ ತಪಾಸಣೆಗೆ ನೀಡುತ್ತಿರುವ ಮೊತ್ತವನ್ನು ₹1 ಸಾವಿರದಿಂದ ₹1,500ಕ್ಕೆ ಹೆಚ್ಚಿಸಲಾಗಿದೆ.</p>.Karnataka Budget 2025 Highlights: ಬಜೆಟ್ನ ಮುಖ್ಯಾಂಶಗಳು ಇಲ್ಲಿವೆ.Karnataka Budget: ಬಜೆಟ್ ಭಾಷಣದಲ್ಲಿ ಕವಿತೆ, ಚಿಂತಕರ ನುಡಿ ಪ್ರಸ್ತಾಪಿಸಿದ ಸಿಎಂ.Budget | ಪ್ರವಾಸೋದ್ಯಮ: ₹ 8,000 ಕೋಟಿ ಹೂಡಿಕೆ, 1.5 ಲಕ್ಷ ಉದ್ಯೋಗ ಸೃಷ್ಟಿ ಗುರಿ.Budget: ಒಲಿಂಪಿಕ್ಸ್ಗೆ ತಯಾರಾಗುತ್ತಿರುವ ಕ್ರೀಡಾಪಟುಗಳಿಗೆ ತಲಾ ₹10 ಲಕ್ಷ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>