<p><strong>ನವದೆಹಲಿ: </strong>ಒಂದೇ ಬ್ಯಾಂಕ್ನಲ್ಲಿ ಪಿಂಚಣಿ ಆದಾಯ ಮತ್ತು ಸ್ಥಿರ ಠೇವಣಿಯನ್ನು ಹೊಂದಿರುವ 75 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯೋಮಾನದ ಹಿರಿಯ ನಾಗರಿಕರಿಗೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಯಿಂದ ವಿನಾಯಿತಿ ನೀಡಲಾಗಿದೆ.</p>.<p>ದೇಶದ 75ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ 75 ವರ್ಷ ಮತ್ತು ಹೆಚ್ಚಿನ ವಯೋಮಾನದ ಹಿರಿಯ ನಾಗರಿಕರ ಮೇಲೆ ಹೊರೆ ಕಡಿಮೆ ಮಾಡಲಾಗುತ್ತಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣದಲ್ಲಿ ಹೇಳಿದರು.</p>.<p>'ಪಿಂಚಣಿ ಮತ್ತು ಸ್ಥಿರ ಠೇವಣಿ ಬಡ್ಡಿಯ ಮೂಲಕ ಆದಾಯ ಪಡೆಯುತ್ತಿರುವ ಹಿರಿಯ ನಾಗರಿಕರಿಗೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಯಿಂದ (ಐಟಿಆರ್) ವಿನಾಯಿತಿ ನೀಡುವ ಪ್ರಸ್ತಾಪ ಮಾಡುತ್ತಿದ್ದೇನೆ. ಅವರ ಆದಾಯಕ್ಕೆ ತಕ್ಕಂತೆ ಬ್ಯಾಂಕ್ ತೆರಿಗೆ ಕಡಿತಗೊಳಿಸುತ್ತದೆ' ಎಂದು ತಿಳಿಸಿದರು.</p>.<p>ಬಡ್ಡಿಯ ಮೂಲಕ ಆದಾಯ ಪಡೆಯುತ್ತಿರುವ ಬ್ಯಾಂಕ್ ಮತ್ತು ಪಿಂಚಣಿ ಪಡೆಯುವ ಬ್ಯಾಂಕ್ ಎರಡೂ ಒಂದೇ ಆಗಿದ್ದಲ್ಲಿ ಮಾತ್ರವೇ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಯಿಂದ ವಿನಾಯಿತಿ ಸಿಗಲಿದೆ ಎಂದು ಹಣಕಾಸು ಸಚಿವಾಲಯದ ಕಾರ್ಯದರ್ಶಿ ಅಜಯ್ ಭೂಷಣ್ ಪಾಂಡೆ ಹೇಳಿದರು.</p>.<p>ಪಿಂಚಣಿ ಮತ್ತು ಸ್ಥಿತ ಠೇವಣಿ ಬಡ್ಡಿಯ ಮೂಲಕ ಪಡೆಯುವ ಆದಾಯದ ಹೊರತಾಗಿ ಇತರೆ ಮೂಲದಿಂದ ಆದಾಯವಿದ್ದರೆ, ಐಟಿಆರ್ ಸಲ್ಲಿಸಬೇಕಾಗುತ್ತದೆ ಎಂದರು.</p>.<p>ಹಲವು ವಸ್ತುಗಳ ಮೇಲೆ ಕೃಷಿ ಸೆಸ್ ವಿಧಿಸಲಾಗುತ್ತಿದ್ದರೂ ಅದರಿಂದ ಗ್ರಾಹಕರಿಗೆ ಹೊಣೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಒಂದೇ ಬ್ಯಾಂಕ್ನಲ್ಲಿ ಪಿಂಚಣಿ ಆದಾಯ ಮತ್ತು ಸ್ಥಿರ ಠೇವಣಿಯನ್ನು ಹೊಂದಿರುವ 75 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯೋಮಾನದ ಹಿರಿಯ ನಾಗರಿಕರಿಗೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಯಿಂದ ವಿನಾಯಿತಿ ನೀಡಲಾಗಿದೆ.</p>.<p>ದೇಶದ 75ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ 75 ವರ್ಷ ಮತ್ತು ಹೆಚ್ಚಿನ ವಯೋಮಾನದ ಹಿರಿಯ ನಾಗರಿಕರ ಮೇಲೆ ಹೊರೆ ಕಡಿಮೆ ಮಾಡಲಾಗುತ್ತಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣದಲ್ಲಿ ಹೇಳಿದರು.</p>.<p>'ಪಿಂಚಣಿ ಮತ್ತು ಸ್ಥಿರ ಠೇವಣಿ ಬಡ್ಡಿಯ ಮೂಲಕ ಆದಾಯ ಪಡೆಯುತ್ತಿರುವ ಹಿರಿಯ ನಾಗರಿಕರಿಗೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಯಿಂದ (ಐಟಿಆರ್) ವಿನಾಯಿತಿ ನೀಡುವ ಪ್ರಸ್ತಾಪ ಮಾಡುತ್ತಿದ್ದೇನೆ. ಅವರ ಆದಾಯಕ್ಕೆ ತಕ್ಕಂತೆ ಬ್ಯಾಂಕ್ ತೆರಿಗೆ ಕಡಿತಗೊಳಿಸುತ್ತದೆ' ಎಂದು ತಿಳಿಸಿದರು.</p>.<p>ಬಡ್ಡಿಯ ಮೂಲಕ ಆದಾಯ ಪಡೆಯುತ್ತಿರುವ ಬ್ಯಾಂಕ್ ಮತ್ತು ಪಿಂಚಣಿ ಪಡೆಯುವ ಬ್ಯಾಂಕ್ ಎರಡೂ ಒಂದೇ ಆಗಿದ್ದಲ್ಲಿ ಮಾತ್ರವೇ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಯಿಂದ ವಿನಾಯಿತಿ ಸಿಗಲಿದೆ ಎಂದು ಹಣಕಾಸು ಸಚಿವಾಲಯದ ಕಾರ್ಯದರ್ಶಿ ಅಜಯ್ ಭೂಷಣ್ ಪಾಂಡೆ ಹೇಳಿದರು.</p>.<p>ಪಿಂಚಣಿ ಮತ್ತು ಸ್ಥಿತ ಠೇವಣಿ ಬಡ್ಡಿಯ ಮೂಲಕ ಪಡೆಯುವ ಆದಾಯದ ಹೊರತಾಗಿ ಇತರೆ ಮೂಲದಿಂದ ಆದಾಯವಿದ್ದರೆ, ಐಟಿಆರ್ ಸಲ್ಲಿಸಬೇಕಾಗುತ್ತದೆ ಎಂದರು.</p>.<p>ಹಲವು ವಸ್ತುಗಳ ಮೇಲೆ ಕೃಷಿ ಸೆಸ್ ವಿಧಿಸಲಾಗುತ್ತಿದ್ದರೂ ಅದರಿಂದ ಗ್ರಾಹಕರಿಗೆ ಹೊಣೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>