<p><strong>ನವದೆಹಲಿ:</strong> ನಿತ್ಯ ಬಳಕೆಯ ಉತ್ಪನ್ನಗಳು, ಆಹಾರ ಉತ್ಪನ್ನಗಳು, ವಾಹನಗಳು ಸೇರಿದಂತೆ ಸರಿಸುಮಾರು 375 ಉತ್ಪನ್ನಗಳ ಬೆಲೆಯು ನವರಾತ್ರಿಯ ಮೊದಲ ದಿನವಾದ ಸೋಮವಾರದಿಂದ ಕಡಿಮೆ ಆಗಲಿವೆ.</p>.<p>ವಿವಿಧ ಉತ್ಪನ್ನಗಳು ಹಾಗೂ ಸೇವೆಗಳ ಮೇಲಿನ ತೆರಿಗೆ ಪ್ರಮಾಣವನ್ನು ಜಿಎಸ್ಟಿ ಮಂಡಳಿ ಪರಿಷ್ಕರಿಸಿದ್ದು, ಪರಿಷ್ಕೃತ ದರಗಳು ಸೋಮವಾರದಿಂದ ಜಾರಿಗೆ ಬರುತ್ತಿವೆ. ಇದರ ಪ್ರಯೋಜನವನ್ನು ಬಹುತೇಕ ಕಂಪನಿಗಳು ಗ್ರಾಹಕರಿಗೆ ವರ್ಗಾವಣೆ ಮಾಡಿವೆ.</p>.<p>ಇಷ್ಟು ವರ್ಷ ಜಿಎಸ್ಟಿ ವ್ಯವಸ್ಥೆಯ ಅಡಿಯಲ್ಲಿ ನಾಲ್ಕು ತೆರಿಗೆ ಹಂತಗಳು (ಶೇ 5, 12, 18 ಮತ್ತು 28) ಇದ್ದವು. ಆದರೆ ಇನ್ನು ಮುಂದೆ ಜಿಎಸ್ಟಿ ವ್ಯವಸ್ಥೆಯ ಅಡಿಯಲ್ಲಿ ಎರಡು ತೆರಿಗೆ ಹಂತಗಳು (ಶೇ 5 ಮತ್ತು 18) ಇರಲಿವೆ. ಐಷಾರಾಮಿ ಉತ್ಪನ್ನಗಳು ಹಾಗೂ ತಂಬಾಕಿನ ಉತ್ಪನ್ನಗಳಿಗೆ ಶೇ 40ರಷ್ಟು ತೆರಿಗೆ ಇರಲಿದೆ. ಈ ಬದಲಾವಣೆಗಳ ಪರಿಣಾಮವಾಗಿ ದೇಶದ ಮಾರುಕಟ್ಟೆಯಲ್ಲಿ ಮುಂದಿನ ದಿನಗಳಲ್ಲಿ ಬೇಡಿಕೆ ಹೆಚ್ಚಾಗಲಿದೆ ಎಂದು ನಿರೀಕ್ಷಿಸಲಾಗಿದೆ.</p>.<p>ತ್ವರಿತವಾಗಿ ಬಿಕರಿಯಾಗುವ ಗ್ರಾಹಕ ಬಳಕೆ ಉತ್ಪನ್ನಗಳನ್ನು (ಎಫ್ಎಂಸಿಜಿ) ತಯಾರಿಸುವ ಕಂಪನಿಗಳು ಪರಿಷ್ಕೃತ ದರವನ್ನು ಪ್ರಕಟಿಸಿವೆ. ಸೋಪು, ಶಾಂಪೂ, ಟೂತ್ಪೇಸ್ಟ್ ಸೇರಿದಂತೆ ತಮ್ಮ ಹತ್ತು ಹಲವು ಉತ್ಪನ್ನಗಳ ಮೇಲೆ ಹೊಸ ಎಂಆರ್ಪಿ ನಮೂದಿಸಿವೆ.</p>.<p>ಕುರುಕಲು, ಕಾಫಿ ಮತ್ತು ಚಹಾ ಪುಡಿ, ಐಸ್ಕ್ರೀಂ, ಚಾಕೊಲೇಟ್ ಹಾಗೂ ಇತರ ಆಹಾರ ವಸ್ತುಗಳ ತಯಾರಿಕಾ ಕಂಪನಿಗಳು ಕೂಡ ತೆರಿಗೆ ಇಳಿಕೆಯ ಪ್ರಯೋಜನವನ್ನು ಗ್ರಾಹಕರಿಗೆ ವರ್ಗಾಯಿಸಿವೆ.</p>.<p>ಈ ಕಂಪನಿಗಳು ಪರಿಷ್ಕೃತ ಎಂಆರ್ಪಿ ಇರುವ ಉತ್ಪನ್ನಗಳನ್ನು ವಿತರಕರಿಗೆ, ಇ–ವಾಣಿಜ್ಯ ಕಂಪನಿಗಳ ಗೋದಾಮುಗಳಿಗೆ, ಸಾಂಪ್ರದಾಯಿಕ ಕಿರಾಣಿ ಅಂಗಡಿಗಳಿಗೆ ರವಾನಿಸಿರುವುದಾಗಿ ಹೇಳಿವೆ. ಈಗಾಗಲೇ ಮಾರುಕಟ್ಟೆಯಲ್ಲಿ ಇರುವ ಉತ್ಪನ್ನಗಳ ಬೆಲೆಯನ್ನು ವಿಶೇಷವಾದ ರಿಯಾಯಿತಿಗಳ ಮೂಲಕ ಸರಿಹೊಂದಿಸಲಾಗಿದೆ ಎಂದು ಹೇಳಿವೆ.</p>.<p>ಡಾಬರ್, ಐಟಿಸಿ, ಪ್ರಾಕ್ಟರ್ ಆ್ಯಂಡ್ ಗ್ಯಾಂಬಲ್, ಇಮಾಮಿ, ನೆಸ್ಲೆ, ಆರ್ಸಿಪಿಎಲ್, ಅಮೂಲ್, ಎಚ್ಯುಎಲ್ನಂತಹ ಪ್ರಮುಖ ಕಂಪನಿಗಳು ಪರಿಷ್ಕೃತ ದರದ ಪಟ್ಟಿಯನ್ನು ತಮ್ಮ ವಿತರಕರಿಗೆ ರವಾನಿಸಿವೆ. ಅಲ್ಲದೆ, ತಮ್ಮ ವೆಬ್ಸೈಟ್ಗಳ ಮೂಲಕ ಹೊಸ ದರವನ್ನು ಗ್ರಾಹಕರಿಗೂ ತಿಳಿಸಿವೆ.</p>.<p>ಭಾರತೀಯ ವಾಣಿಜ್ಯೋದ್ಯಮ ಮಹಾಸಂಘ (ಫಿಕ್ಕಿ) ಈಚೆಗೆ ಸಿದ್ಧಪಡಿಸಿರುವ ವರದಿಯೊಂದು, ಜಿಎಸ್ಟಿ ದರ ಪರಿಷ್ಕರಣೆಯ ಪರಿಣಾಮವಾಗಿ ಅಲ್ಪಾವಧಿಯಲ್ಲಿ ವರಮಾನ ನಷ್ಟ ಉಂಟಾದರೂ ಮಾರುಕಟ್ಟೆಯಲ್ಲಿ ಬೇಡಿಕೆಯಲ್ಲಿ ಆಗುವ ಏರಿಕೆಯು ವರಮಾನ ನಷ್ಟವನ್ನು ಸರಿಹೊಂದಿಸಿಕೊಡುತ್ತದೆ ಎಂದು ಹೇಳಿದೆ.</p><p>ಈ ಕಂಪನಿಗಳು ಪರಿಷ್ಕೃತ ಎಂಆರ್ಪಿ ಇರುವ ಉತ್ಪನ್ನಗಳನ್ನು ವಿತರಕರಿಗೆ, ಇ–ವಾಣಿಜ್ಯ ಕಂಪನಿಗಳ ಗೋದಾಮುಗಳಿಗೆ, ಸಾಂಪ್ರದಾಯಿಕ ಕಿರಾಣಿ ಅಂಗಡಿಗಳಿಗೆ ರವಾನಿಸಿರುವುದಾಗಿ ಹೇಳಿವೆ. ಈಗಾಗಲೇ ಮಾರುಕಟ್ಟೆಯಲ್ಲಿ ಇರುವ ಉತ್ಪನ್ನಗಳ ಬೆಲೆಯನ್ನು ವಿಶೇಷವಾದ ರಿಯಾಯಿತಿಗಳ ಮೂಲಕ ಸರಿಹೊಂದಿಸಲಾಗಿದೆ ಎಂದು ಹೇಳಿವೆ.</p><p>ಡಾಬರ್, ಐಟಿಸಿ, ಪ್ರಾಕ್ಟರ್ ಆ್ಯಂಡ್ ಗ್ಯಾಂಬಲ್, ಇಮಾಮಿ, ನೆಸ್ಲೆ, ಆರ್ಸಿಪಿಎಲ್, ಅಮೂಲ್, ಎಚ್ಯುಎಲ್ನಂತಹ ಪ್ರಮುಖ ಕಂಪನಿಗಳು ಪರಿಷ್ಕೃತ ದರದ ಪಟ್ಟಿಯನ್ನು ತಮ್ಮ ವಿತರಕರಿಗೆ ರವಾನಿಸಿವೆ. ಅಲ್ಲದೆ, ತಮ್ಮ ವೆಬ್ಸೈಟ್ಗಳ ಮೂಲಕ ಹೊಸ ದರವನ್ನು ಗ್ರಾಹಕರಿಗೂ ತಿಳಿಸಿವೆ.</p><p>ಭಾರತೀಯ ವಾಣಿಜ್ಯೋದ್ಯಮ ಮಹಾಸಂಘ (ಫಿಕ್ಕಿ) ಈಚೆಗೆ ಸಿದ್ಧಪಡಿಸಿರುವ ವರದಿಯೊಂದು, ಜಿಎಸ್ಟಿ ದರ ಪರಿಷ್ಕರಣೆಯ ಪರಿಣಾಮವಾಗಿ ಅಲ್ಪಾವಧಿಯಲ್ಲಿ ವರಮಾನ ನಷ್ಟ ಉಂಟಾದರೂ ಮಾರುಕಟ್ಟೆಯಲ್ಲಿ ಬೇಡಿಕೆಯಲ್ಲಿ ಆಗುವ ಏರಿಕೆಯು ವರಮಾನ ನಷ್ಟವನ್ನು ಸರಿಹೊಂದಿಸಿಕೊಡುತ್ತದೆ ಎಂದು ಹೇಳಿದೆ.</p>.<p><strong>ಆರ್ಥಿಕ ಬೆಳವಣಿಗೆಗೆ ವೇಗ: ಪ್ರಧಾನಿ</strong></p><p>ಜಿಎಸ್ಟಿ ದರಗಳಲ್ಲಿನ ಪರಿಷ್ಕರಣೆಯು ಭಾರತದ ಆರ್ಥಿಕ ಬೆಳವಣಿಗೆ ದರವನ್ನು ಹೆಚ್ಚಿಸಲಿದೆ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಇದು ದೊಡ್ಡದಾದ ಹಾಗೂ ಮುಖ್ಯವಾದ ಹೆಜ್ಜೆ ಎಂದು ಹೇಳಿದ್ದಾರೆ.</p><p>ಅಲ್ಲದೆ, ಸ್ವದೇಶಿ ಉತ್ಪನ್ನಗಳ ಬಳಕೆಯು ದೇಶದ ಸಮೃದ್ಧಿಗೆ ಇರುವ ಮಾರ್ಗ ಎಂದು ಪ್ರತಿಪಾದಿಸಿದ್ದಾರೆ.</p><p>ಜಿಎಸ್ಟಿ ಸುಧಾರಣಾ ಕ್ರಮಗಳು ಜಾರಿಗೆ ಬರುವ ಹಿಂದಿನ ದಿನವಾದ ಭಾನುವಾರ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ ಅವರು, ಸ್ವದೇಶಿ ಉತ್ಪನ್ನಗಳ ಬಳಕೆಯು ದೇಶದ ಸ್ವಾತಂತ್ರ್ಯ ಚಳವಳಿಗೆ ಬಲ ನೀಡಿದ್ದ ಬಗೆಯಲ್ಲೇ ದೇಶದ ಸಮೃದ್ಧಿಗೂ ಬಲ ತಂದುಕೊಡುತ್ತದೆ ಎಂದಿದ್ದಾರೆ.</p><p>‘ಪ್ರತಿ ಮನೆಯನ್ನೂ ನಾವು ಸ್ವದೇಶಿಯ ಸಂಕೇತವನ್ನಾಗಿಸಬೇಕು, ಪ್ರತಿ ಅಂಗಡಿಯನ್ನೂ ಸ್ವದೇಶಿ<br>ಉತ್ಪನ್ನಗಳಿಂದ ಅಲಂಕರಿಸಬೇಕು’ ಎಂದು ಅವರು ಕರೆ ನೀಡಿದ್ದಾರೆ.</p><p>ಆದಾಯ ತೆರಿಗೆ ವಿನಾಯಿತಿ ಯನ್ನು ವಾರ್ಷಿಕ ₹12 ಲಕ್ಷಕ್ಕೆ ಹೆಚ್ಚಿಸಿದ ಕೆಲವು ತಿಂಗಳ ನಂತರ ದಲ್ಲಿ ಜಿಎಸ್ಟಿ ವ್ಯವಸ್ಥೆ ಯಲ್ಲಿ ತರುತ್ತಿರುವ ಸುಧಾರಣೆಯು ನಾಗರಿಕರಿಗೆ ಅನುಕೂಲ ಕಲ್ಪಿಸಲಿದೆ. ವೆಚ್ಚ ತಗ್ಗಿಸಿ, ಉಳಿತಾಯ ಹೆಚ್ಚಿಸಿ ತಮ್ಮ ಕನಸುಗಳನ್ನು ಸಾಕಾರಗೊಳಿಸಿ ಕೊಳ್ಳಲು ಅವರಿಗೆ ನೆರವಾಗಲಿದೆ. ಅಲ್ಲದೆ, ಈ ಎರಡು ಕ್ರಮಗಳಿಂದಾಗಿ ಜನರ ಕೈಯಲ್ಲಿ ₹2.5 ಲಕ್ಷ ಕೋಟಿ ಉಳಿಯಲಿದೆ ಎಂದು ಹೇಳಿದ್ದಾರೆ.</p><p><strong>ಸ್ವದೇಶಿಗೆ ಆದ್ಯತೆ: </strong></p><p>ಸ್ವದೇಶಿ ವಸ್ತುಗಳ ಖರೀದಿ ಮತ್ತು ಮಾರಾಟವು ದೇಶದ ಅಭಿವೃದ್ಧಿಗೆ ವೇಗ ನೀಡುತ್ತದೆ ಎಂದು ಮೋದಿ ಹೇಳಿದ್ದಾರೆ. ದೇಶದಲ್ಲೇ ತಯಾರಾದ ಉತ್ಪನ್ನಗಳ ಖರೀದಿಗೆ ಜನರು ಮುಂದಾಗಬೇಕು ಎಂದು ಕರೆ ನೀಡಿದ್ದಾರೆ.</p><p>‘ನಾನು ಸ್ವದೇಶಿ ಉತ್ಪನ್ನ ಖರೀದಿ ಸುತ್ತೇನೆ, ನಾನು ಸ್ವದೇಶಿ ಉತ್ಪನ್ನ ಮಾರಾಟ ಮಾಡುತ್ತೇನೆ ಎನ್ನುವುದು ಹೆಮ್ಮೆಯ ಸಂಗತಿ ಯಾಗಬೇಕು’ ಎಂದು ಕೂಡ ಪ್ರಧಾನಿ ಹೇಳಿದ್ದಾರೆ. ‘ಸೋಮವಾರದಿಂದ ಜಿಎಸ್ಟಿ ಉಳಿತಾಯ ಹಬ್ಬ ಶುರು ವಾಗುತ್ತದೆ. ಇದರಿಂದಾಗಿ ಪ್ರತಿ ಕುಟುಂಬದಲ್ಲಿ ಸಂತಸ ಮೂಡುತ್ತದೆ’ ಎಂದಿದ್ದಾರೆ.</p>.<p><strong>ಮೋದಿ ಮಾತು</strong></p><p>*ತಯಾರಿಕಾ ಚಟುವಟಿಕೆಗೆ ಉತ್ತೇಜನ ನೀಡಿ, ಹೂಡಿಕೆಗೆ ಪೂರಕವಾದ ವಾತಾವರಣವನ್ನು ರಾಜ್ಯಗಳು ನಿರ್ಮಾಣ ಮಾಡಬೇಕು</p><p>*‘ನಾಗರಿಕ ದೇವೋ ಭವ’ ಎಂಬುದು ಸರ್ಕಾರದ ಮಂತ್ರ ಎನ್ನುವುದನ್ನು ಜಿಎಸ್ಟಿ ಪರಿಷ್ಕರಣೆಯು<br>ಪ್ರತಿಬಿಂಬಿಸುತ್ತಿದೆ</p><p>*ಅತಿಸಣ್ಣ, ಸಣ್ಣ ಮತ್ತು ಗುಡಿಕೈಗಾರಿಕೆಗಳು ಸ್ವಾವಲಂಬಿ ಭಾರತದ ನಿರ್ಮಾಣದಲ್ಲಿ ಪ್ರಮುಖ ಪಾತ್ರ ಹೊಂದಿವೆ. ಸಾಧ್ಯವಾದಷ್ಟು ಮಟ್ಟಿಗೆ ದೇಶದಲ್ಲಿ ತಯಾರಿಕೆಯನ್ನು ಹೆಚ್ಚಿಸಬೇಕು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನಿತ್ಯ ಬಳಕೆಯ ಉತ್ಪನ್ನಗಳು, ಆಹಾರ ಉತ್ಪನ್ನಗಳು, ವಾಹನಗಳು ಸೇರಿದಂತೆ ಸರಿಸುಮಾರು 375 ಉತ್ಪನ್ನಗಳ ಬೆಲೆಯು ನವರಾತ್ರಿಯ ಮೊದಲ ದಿನವಾದ ಸೋಮವಾರದಿಂದ ಕಡಿಮೆ ಆಗಲಿವೆ.</p>.<p>ವಿವಿಧ ಉತ್ಪನ್ನಗಳು ಹಾಗೂ ಸೇವೆಗಳ ಮೇಲಿನ ತೆರಿಗೆ ಪ್ರಮಾಣವನ್ನು ಜಿಎಸ್ಟಿ ಮಂಡಳಿ ಪರಿಷ್ಕರಿಸಿದ್ದು, ಪರಿಷ್ಕೃತ ದರಗಳು ಸೋಮವಾರದಿಂದ ಜಾರಿಗೆ ಬರುತ್ತಿವೆ. ಇದರ ಪ್ರಯೋಜನವನ್ನು ಬಹುತೇಕ ಕಂಪನಿಗಳು ಗ್ರಾಹಕರಿಗೆ ವರ್ಗಾವಣೆ ಮಾಡಿವೆ.</p>.<p>ಇಷ್ಟು ವರ್ಷ ಜಿಎಸ್ಟಿ ವ್ಯವಸ್ಥೆಯ ಅಡಿಯಲ್ಲಿ ನಾಲ್ಕು ತೆರಿಗೆ ಹಂತಗಳು (ಶೇ 5, 12, 18 ಮತ್ತು 28) ಇದ್ದವು. ಆದರೆ ಇನ್ನು ಮುಂದೆ ಜಿಎಸ್ಟಿ ವ್ಯವಸ್ಥೆಯ ಅಡಿಯಲ್ಲಿ ಎರಡು ತೆರಿಗೆ ಹಂತಗಳು (ಶೇ 5 ಮತ್ತು 18) ಇರಲಿವೆ. ಐಷಾರಾಮಿ ಉತ್ಪನ್ನಗಳು ಹಾಗೂ ತಂಬಾಕಿನ ಉತ್ಪನ್ನಗಳಿಗೆ ಶೇ 40ರಷ್ಟು ತೆರಿಗೆ ಇರಲಿದೆ. ಈ ಬದಲಾವಣೆಗಳ ಪರಿಣಾಮವಾಗಿ ದೇಶದ ಮಾರುಕಟ್ಟೆಯಲ್ಲಿ ಮುಂದಿನ ದಿನಗಳಲ್ಲಿ ಬೇಡಿಕೆ ಹೆಚ್ಚಾಗಲಿದೆ ಎಂದು ನಿರೀಕ್ಷಿಸಲಾಗಿದೆ.</p>.<p>ತ್ವರಿತವಾಗಿ ಬಿಕರಿಯಾಗುವ ಗ್ರಾಹಕ ಬಳಕೆ ಉತ್ಪನ್ನಗಳನ್ನು (ಎಫ್ಎಂಸಿಜಿ) ತಯಾರಿಸುವ ಕಂಪನಿಗಳು ಪರಿಷ್ಕೃತ ದರವನ್ನು ಪ್ರಕಟಿಸಿವೆ. ಸೋಪು, ಶಾಂಪೂ, ಟೂತ್ಪೇಸ್ಟ್ ಸೇರಿದಂತೆ ತಮ್ಮ ಹತ್ತು ಹಲವು ಉತ್ಪನ್ನಗಳ ಮೇಲೆ ಹೊಸ ಎಂಆರ್ಪಿ ನಮೂದಿಸಿವೆ.</p>.<p>ಕುರುಕಲು, ಕಾಫಿ ಮತ್ತು ಚಹಾ ಪುಡಿ, ಐಸ್ಕ್ರೀಂ, ಚಾಕೊಲೇಟ್ ಹಾಗೂ ಇತರ ಆಹಾರ ವಸ್ತುಗಳ ತಯಾರಿಕಾ ಕಂಪನಿಗಳು ಕೂಡ ತೆರಿಗೆ ಇಳಿಕೆಯ ಪ್ರಯೋಜನವನ್ನು ಗ್ರಾಹಕರಿಗೆ ವರ್ಗಾಯಿಸಿವೆ.</p>.<p>ಈ ಕಂಪನಿಗಳು ಪರಿಷ್ಕೃತ ಎಂಆರ್ಪಿ ಇರುವ ಉತ್ಪನ್ನಗಳನ್ನು ವಿತರಕರಿಗೆ, ಇ–ವಾಣಿಜ್ಯ ಕಂಪನಿಗಳ ಗೋದಾಮುಗಳಿಗೆ, ಸಾಂಪ್ರದಾಯಿಕ ಕಿರಾಣಿ ಅಂಗಡಿಗಳಿಗೆ ರವಾನಿಸಿರುವುದಾಗಿ ಹೇಳಿವೆ. ಈಗಾಗಲೇ ಮಾರುಕಟ್ಟೆಯಲ್ಲಿ ಇರುವ ಉತ್ಪನ್ನಗಳ ಬೆಲೆಯನ್ನು ವಿಶೇಷವಾದ ರಿಯಾಯಿತಿಗಳ ಮೂಲಕ ಸರಿಹೊಂದಿಸಲಾಗಿದೆ ಎಂದು ಹೇಳಿವೆ.</p>.<p>ಡಾಬರ್, ಐಟಿಸಿ, ಪ್ರಾಕ್ಟರ್ ಆ್ಯಂಡ್ ಗ್ಯಾಂಬಲ್, ಇಮಾಮಿ, ನೆಸ್ಲೆ, ಆರ್ಸಿಪಿಎಲ್, ಅಮೂಲ್, ಎಚ್ಯುಎಲ್ನಂತಹ ಪ್ರಮುಖ ಕಂಪನಿಗಳು ಪರಿಷ್ಕೃತ ದರದ ಪಟ್ಟಿಯನ್ನು ತಮ್ಮ ವಿತರಕರಿಗೆ ರವಾನಿಸಿವೆ. ಅಲ್ಲದೆ, ತಮ್ಮ ವೆಬ್ಸೈಟ್ಗಳ ಮೂಲಕ ಹೊಸ ದರವನ್ನು ಗ್ರಾಹಕರಿಗೂ ತಿಳಿಸಿವೆ.</p>.<p>ಭಾರತೀಯ ವಾಣಿಜ್ಯೋದ್ಯಮ ಮಹಾಸಂಘ (ಫಿಕ್ಕಿ) ಈಚೆಗೆ ಸಿದ್ಧಪಡಿಸಿರುವ ವರದಿಯೊಂದು, ಜಿಎಸ್ಟಿ ದರ ಪರಿಷ್ಕರಣೆಯ ಪರಿಣಾಮವಾಗಿ ಅಲ್ಪಾವಧಿಯಲ್ಲಿ ವರಮಾನ ನಷ್ಟ ಉಂಟಾದರೂ ಮಾರುಕಟ್ಟೆಯಲ್ಲಿ ಬೇಡಿಕೆಯಲ್ಲಿ ಆಗುವ ಏರಿಕೆಯು ವರಮಾನ ನಷ್ಟವನ್ನು ಸರಿಹೊಂದಿಸಿಕೊಡುತ್ತದೆ ಎಂದು ಹೇಳಿದೆ.</p><p>ಈ ಕಂಪನಿಗಳು ಪರಿಷ್ಕೃತ ಎಂಆರ್ಪಿ ಇರುವ ಉತ್ಪನ್ನಗಳನ್ನು ವಿತರಕರಿಗೆ, ಇ–ವಾಣಿಜ್ಯ ಕಂಪನಿಗಳ ಗೋದಾಮುಗಳಿಗೆ, ಸಾಂಪ್ರದಾಯಿಕ ಕಿರಾಣಿ ಅಂಗಡಿಗಳಿಗೆ ರವಾನಿಸಿರುವುದಾಗಿ ಹೇಳಿವೆ. ಈಗಾಗಲೇ ಮಾರುಕಟ್ಟೆಯಲ್ಲಿ ಇರುವ ಉತ್ಪನ್ನಗಳ ಬೆಲೆಯನ್ನು ವಿಶೇಷವಾದ ರಿಯಾಯಿತಿಗಳ ಮೂಲಕ ಸರಿಹೊಂದಿಸಲಾಗಿದೆ ಎಂದು ಹೇಳಿವೆ.</p><p>ಡಾಬರ್, ಐಟಿಸಿ, ಪ್ರಾಕ್ಟರ್ ಆ್ಯಂಡ್ ಗ್ಯಾಂಬಲ್, ಇಮಾಮಿ, ನೆಸ್ಲೆ, ಆರ್ಸಿಪಿಎಲ್, ಅಮೂಲ್, ಎಚ್ಯುಎಲ್ನಂತಹ ಪ್ರಮುಖ ಕಂಪನಿಗಳು ಪರಿಷ್ಕೃತ ದರದ ಪಟ್ಟಿಯನ್ನು ತಮ್ಮ ವಿತರಕರಿಗೆ ರವಾನಿಸಿವೆ. ಅಲ್ಲದೆ, ತಮ್ಮ ವೆಬ್ಸೈಟ್ಗಳ ಮೂಲಕ ಹೊಸ ದರವನ್ನು ಗ್ರಾಹಕರಿಗೂ ತಿಳಿಸಿವೆ.</p><p>ಭಾರತೀಯ ವಾಣಿಜ್ಯೋದ್ಯಮ ಮಹಾಸಂಘ (ಫಿಕ್ಕಿ) ಈಚೆಗೆ ಸಿದ್ಧಪಡಿಸಿರುವ ವರದಿಯೊಂದು, ಜಿಎಸ್ಟಿ ದರ ಪರಿಷ್ಕರಣೆಯ ಪರಿಣಾಮವಾಗಿ ಅಲ್ಪಾವಧಿಯಲ್ಲಿ ವರಮಾನ ನಷ್ಟ ಉಂಟಾದರೂ ಮಾರುಕಟ್ಟೆಯಲ್ಲಿ ಬೇಡಿಕೆಯಲ್ಲಿ ಆಗುವ ಏರಿಕೆಯು ವರಮಾನ ನಷ್ಟವನ್ನು ಸರಿಹೊಂದಿಸಿಕೊಡುತ್ತದೆ ಎಂದು ಹೇಳಿದೆ.</p>.<p><strong>ಆರ್ಥಿಕ ಬೆಳವಣಿಗೆಗೆ ವೇಗ: ಪ್ರಧಾನಿ</strong></p><p>ಜಿಎಸ್ಟಿ ದರಗಳಲ್ಲಿನ ಪರಿಷ್ಕರಣೆಯು ಭಾರತದ ಆರ್ಥಿಕ ಬೆಳವಣಿಗೆ ದರವನ್ನು ಹೆಚ್ಚಿಸಲಿದೆ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಇದು ದೊಡ್ಡದಾದ ಹಾಗೂ ಮುಖ್ಯವಾದ ಹೆಜ್ಜೆ ಎಂದು ಹೇಳಿದ್ದಾರೆ.</p><p>ಅಲ್ಲದೆ, ಸ್ವದೇಶಿ ಉತ್ಪನ್ನಗಳ ಬಳಕೆಯು ದೇಶದ ಸಮೃದ್ಧಿಗೆ ಇರುವ ಮಾರ್ಗ ಎಂದು ಪ್ರತಿಪಾದಿಸಿದ್ದಾರೆ.</p><p>ಜಿಎಸ್ಟಿ ಸುಧಾರಣಾ ಕ್ರಮಗಳು ಜಾರಿಗೆ ಬರುವ ಹಿಂದಿನ ದಿನವಾದ ಭಾನುವಾರ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ ಅವರು, ಸ್ವದೇಶಿ ಉತ್ಪನ್ನಗಳ ಬಳಕೆಯು ದೇಶದ ಸ್ವಾತಂತ್ರ್ಯ ಚಳವಳಿಗೆ ಬಲ ನೀಡಿದ್ದ ಬಗೆಯಲ್ಲೇ ದೇಶದ ಸಮೃದ್ಧಿಗೂ ಬಲ ತಂದುಕೊಡುತ್ತದೆ ಎಂದಿದ್ದಾರೆ.</p><p>‘ಪ್ರತಿ ಮನೆಯನ್ನೂ ನಾವು ಸ್ವದೇಶಿಯ ಸಂಕೇತವನ್ನಾಗಿಸಬೇಕು, ಪ್ರತಿ ಅಂಗಡಿಯನ್ನೂ ಸ್ವದೇಶಿ<br>ಉತ್ಪನ್ನಗಳಿಂದ ಅಲಂಕರಿಸಬೇಕು’ ಎಂದು ಅವರು ಕರೆ ನೀಡಿದ್ದಾರೆ.</p><p>ಆದಾಯ ತೆರಿಗೆ ವಿನಾಯಿತಿ ಯನ್ನು ವಾರ್ಷಿಕ ₹12 ಲಕ್ಷಕ್ಕೆ ಹೆಚ್ಚಿಸಿದ ಕೆಲವು ತಿಂಗಳ ನಂತರ ದಲ್ಲಿ ಜಿಎಸ್ಟಿ ವ್ಯವಸ್ಥೆ ಯಲ್ಲಿ ತರುತ್ತಿರುವ ಸುಧಾರಣೆಯು ನಾಗರಿಕರಿಗೆ ಅನುಕೂಲ ಕಲ್ಪಿಸಲಿದೆ. ವೆಚ್ಚ ತಗ್ಗಿಸಿ, ಉಳಿತಾಯ ಹೆಚ್ಚಿಸಿ ತಮ್ಮ ಕನಸುಗಳನ್ನು ಸಾಕಾರಗೊಳಿಸಿ ಕೊಳ್ಳಲು ಅವರಿಗೆ ನೆರವಾಗಲಿದೆ. ಅಲ್ಲದೆ, ಈ ಎರಡು ಕ್ರಮಗಳಿಂದಾಗಿ ಜನರ ಕೈಯಲ್ಲಿ ₹2.5 ಲಕ್ಷ ಕೋಟಿ ಉಳಿಯಲಿದೆ ಎಂದು ಹೇಳಿದ್ದಾರೆ.</p><p><strong>ಸ್ವದೇಶಿಗೆ ಆದ್ಯತೆ: </strong></p><p>ಸ್ವದೇಶಿ ವಸ್ತುಗಳ ಖರೀದಿ ಮತ್ತು ಮಾರಾಟವು ದೇಶದ ಅಭಿವೃದ್ಧಿಗೆ ವೇಗ ನೀಡುತ್ತದೆ ಎಂದು ಮೋದಿ ಹೇಳಿದ್ದಾರೆ. ದೇಶದಲ್ಲೇ ತಯಾರಾದ ಉತ್ಪನ್ನಗಳ ಖರೀದಿಗೆ ಜನರು ಮುಂದಾಗಬೇಕು ಎಂದು ಕರೆ ನೀಡಿದ್ದಾರೆ.</p><p>‘ನಾನು ಸ್ವದೇಶಿ ಉತ್ಪನ್ನ ಖರೀದಿ ಸುತ್ತೇನೆ, ನಾನು ಸ್ವದೇಶಿ ಉತ್ಪನ್ನ ಮಾರಾಟ ಮಾಡುತ್ತೇನೆ ಎನ್ನುವುದು ಹೆಮ್ಮೆಯ ಸಂಗತಿ ಯಾಗಬೇಕು’ ಎಂದು ಕೂಡ ಪ್ರಧಾನಿ ಹೇಳಿದ್ದಾರೆ. ‘ಸೋಮವಾರದಿಂದ ಜಿಎಸ್ಟಿ ಉಳಿತಾಯ ಹಬ್ಬ ಶುರು ವಾಗುತ್ತದೆ. ಇದರಿಂದಾಗಿ ಪ್ರತಿ ಕುಟುಂಬದಲ್ಲಿ ಸಂತಸ ಮೂಡುತ್ತದೆ’ ಎಂದಿದ್ದಾರೆ.</p>.<p><strong>ಮೋದಿ ಮಾತು</strong></p><p>*ತಯಾರಿಕಾ ಚಟುವಟಿಕೆಗೆ ಉತ್ತೇಜನ ನೀಡಿ, ಹೂಡಿಕೆಗೆ ಪೂರಕವಾದ ವಾತಾವರಣವನ್ನು ರಾಜ್ಯಗಳು ನಿರ್ಮಾಣ ಮಾಡಬೇಕು</p><p>*‘ನಾಗರಿಕ ದೇವೋ ಭವ’ ಎಂಬುದು ಸರ್ಕಾರದ ಮಂತ್ರ ಎನ್ನುವುದನ್ನು ಜಿಎಸ್ಟಿ ಪರಿಷ್ಕರಣೆಯು<br>ಪ್ರತಿಬಿಂಬಿಸುತ್ತಿದೆ</p><p>*ಅತಿಸಣ್ಣ, ಸಣ್ಣ ಮತ್ತು ಗುಡಿಕೈಗಾರಿಕೆಗಳು ಸ್ವಾವಲಂಬಿ ಭಾರತದ ನಿರ್ಮಾಣದಲ್ಲಿ ಪ್ರಮುಖ ಪಾತ್ರ ಹೊಂದಿವೆ. ಸಾಧ್ಯವಾದಷ್ಟು ಮಟ್ಟಿಗೆ ದೇಶದಲ್ಲಿ ತಯಾರಿಕೆಯನ್ನು ಹೆಚ್ಚಿಸಬೇಕು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>