<p><strong>ಕೂಡಲಸಂಗಮ</strong>: ಮುಖ್ಯಮಂತ್ರಿ ಸಿದ್ಧರಾಮಯ್ಯ ಮೂಡಾ ಹಗರಣ ಆರೋಪ ಹಾಗೂ ಎಲ್ಲ ಕಂಟಕಗಳಿಂದ ಮುಕ್ತನಾಗಬೇಕು ಎಂದು ಹರಕೆ ಹೊತ್ತಿದ್ದ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಯರನಾಳ ಗ್ರಾಮದ ಶ್ರೀಶೈಲ ವಾಲೀಕಾರ ಹರಕೆ ತೀರಿಸಿದರು.</p>.<p>ಕೂಡಲಸಂಗಮ ಕ್ರಾಸ್ನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಸಚಿವ ಶಿವಾನಂದ ಪಾಟೀಲ, ಶಾಸಕ ವಿಜಯಾನಂದ ಕಾಶಪ್ಪನವರ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿ ದೀರ್ಘದಂಡ ನಮಸ್ಕಾರ ಆರಂಭಿಸಿದರು. ನಿತ್ಯ 1 ಕಿ.ಮೀ ದೀರ್ಘದಂಡ ನಮಸ್ಕಾರ ಹಾಕಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ ದೊಡಮನಿ ಈ ಸೇವಾ ಕಾರ್ಯಕ್ಕೆ ಚಾಲನೆ ನೀಡಿದರು.</p>.<p>ಸಿದ್ದರಾಮಯ್ಯನವರ ಅಭಿಮಾನಿಯಾದ ಶ್ರೀಶೈಲ ವಾಲೀಕರ ಕೂಡಲಸಂಗಮನಾಥ ಹಾಗೂ ಬಸವೇಶ್ವರರ ಐಕ್ಯಮಂಟಪದ ದರ್ಶನ ಮಾಡಿ ಹರಕೆ ಪೂರ್ಣಗೊಳಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೂಡಲಸಂಗಮ</strong>: ಮುಖ್ಯಮಂತ್ರಿ ಸಿದ್ಧರಾಮಯ್ಯ ಮೂಡಾ ಹಗರಣ ಆರೋಪ ಹಾಗೂ ಎಲ್ಲ ಕಂಟಕಗಳಿಂದ ಮುಕ್ತನಾಗಬೇಕು ಎಂದು ಹರಕೆ ಹೊತ್ತಿದ್ದ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಯರನಾಳ ಗ್ರಾಮದ ಶ್ರೀಶೈಲ ವಾಲೀಕಾರ ಹರಕೆ ತೀರಿಸಿದರು.</p>.<p>ಕೂಡಲಸಂಗಮ ಕ್ರಾಸ್ನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಸಚಿವ ಶಿವಾನಂದ ಪಾಟೀಲ, ಶಾಸಕ ವಿಜಯಾನಂದ ಕಾಶಪ್ಪನವರ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿ ದೀರ್ಘದಂಡ ನಮಸ್ಕಾರ ಆರಂಭಿಸಿದರು. ನಿತ್ಯ 1 ಕಿ.ಮೀ ದೀರ್ಘದಂಡ ನಮಸ್ಕಾರ ಹಾಕಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ ದೊಡಮನಿ ಈ ಸೇವಾ ಕಾರ್ಯಕ್ಕೆ ಚಾಲನೆ ನೀಡಿದರು.</p>.<p>ಸಿದ್ದರಾಮಯ್ಯನವರ ಅಭಿಮಾನಿಯಾದ ಶ್ರೀಶೈಲ ವಾಲೀಕರ ಕೂಡಲಸಂಗಮನಾಥ ಹಾಗೂ ಬಸವೇಶ್ವರರ ಐಕ್ಯಮಂಟಪದ ದರ್ಶನ ಮಾಡಿ ಹರಕೆ ಪೂರ್ಣಗೊಳಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>