<p><strong>ಬಳ್ಳಾರಿ</strong>: ಬಳ್ಳಾರಿಯ ಎಪಿಎಂಸಿಗೆ ಗುರುವಾರ ದಿಢೀರ್ ಭೇಟಿ ನೀಡಿದ ಉಪ ಲೋಕಾಯುಕ್ತ ಬಿ. ವೀರಪ್ಪ ಇಡೀ ವ್ಯವಸ್ಥೆ ಪರಿಶೀಲಿಸಿದರು.</p><p>ರೈತರಿಂದ ಅಕ್ರಮವಾಗಿ ಕಮಿಷನ್ ವಸೂಲಿ, ಮೂಲಸೌಕರ್ಯ ಇಲ್ಲದೇ ಇರುವುದನ್ನು ಕಂಡ ವೀರಪ್ಪ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. </p><p>'ರೈತರಿಂದ ಕಮಿಷನ್ ವಸೂಲಿ ಮಾಡಲು ಎಪಿಎಂಸಿ ಕಾಯ್ದೆ, ಬೈಲಾದಲ್ಲಿ ಅವಕಾಶ ಇಲ್ಲ. ಖರೀದಿದಾರರಿಂದ ಕೇವಲ ₹2 ಕಮಿಷನ್ ಪಡೆಯಬೇಕು ಎಂದು ಕಾನೂನು ಹೇಳುತ್ತದೆ. ಆದರೆ ಇಲ್ಲಿ ನೇರವಾಗಿ ರೈತರಿಂದಲೇ ₹10 ವಸೂಲಿ ಮಾಡಲಾಗುತ್ತಿದೆ. ಇದು ಅಕ್ರಮ. ಬಳ್ಳಾರಿ ಎಪಿಎಂಸಿಯಲ್ಲಿ ರೈತರನ್ನು ಶೋಷಣೆ ಮಾಡಲಾಗುತ್ತಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದರು. </p><p>'ಎಪಿಎಂಸಿಗೆ ನಿತ್ಯ 20 ಸಾವಿರ ಜನ ಬರುತ್ತಾರೆ. ನಿತ್ಯ ಎಷ್ಟು ಕಮಿಷನ್, ಸೆಸ್ ವಸೂಲಿ ಮಾಡಲಾಗುತ್ತಿದೆ, ಈ ವರೆಗೆ ಎಷ್ಟು ಸಂಗ್ರಹವಾಗುತ್ತಿದೆ ಎಂಬುದರ ಮಾಹಿತಿಯನ್ನು ಗುರುವಾರ ಸಂಜೆ ಒಳಗಾಗಿ ನೀಡಲು ಸೂಚಿಸಿದ್ದೇನೆ. ಅಧಿಕಾರಿ, ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ' ಎಂದು ತಿಳಿಸಿದರು. </p><p>ಉಪ ಲೋಕಾಯುಕ್ತ ವೀರಪ್ಪ ಎಪಿಎಂಸಿ ಪರಿಶೀಲಿಸುತ್ತಿದ್ದರೂ ಸ್ಥಳಕ್ಕೆ ಬಾರದ ಕಾರ್ಯದರ್ಶಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ಬಳ್ಳಾರಿಯ ಎಪಿಎಂಸಿಗೆ ಗುರುವಾರ ದಿಢೀರ್ ಭೇಟಿ ನೀಡಿದ ಉಪ ಲೋಕಾಯುಕ್ತ ಬಿ. ವೀರಪ್ಪ ಇಡೀ ವ್ಯವಸ್ಥೆ ಪರಿಶೀಲಿಸಿದರು.</p><p>ರೈತರಿಂದ ಅಕ್ರಮವಾಗಿ ಕಮಿಷನ್ ವಸೂಲಿ, ಮೂಲಸೌಕರ್ಯ ಇಲ್ಲದೇ ಇರುವುದನ್ನು ಕಂಡ ವೀರಪ್ಪ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. </p><p>'ರೈತರಿಂದ ಕಮಿಷನ್ ವಸೂಲಿ ಮಾಡಲು ಎಪಿಎಂಸಿ ಕಾಯ್ದೆ, ಬೈಲಾದಲ್ಲಿ ಅವಕಾಶ ಇಲ್ಲ. ಖರೀದಿದಾರರಿಂದ ಕೇವಲ ₹2 ಕಮಿಷನ್ ಪಡೆಯಬೇಕು ಎಂದು ಕಾನೂನು ಹೇಳುತ್ತದೆ. ಆದರೆ ಇಲ್ಲಿ ನೇರವಾಗಿ ರೈತರಿಂದಲೇ ₹10 ವಸೂಲಿ ಮಾಡಲಾಗುತ್ತಿದೆ. ಇದು ಅಕ್ರಮ. ಬಳ್ಳಾರಿ ಎಪಿಎಂಸಿಯಲ್ಲಿ ರೈತರನ್ನು ಶೋಷಣೆ ಮಾಡಲಾಗುತ್ತಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದರು. </p><p>'ಎಪಿಎಂಸಿಗೆ ನಿತ್ಯ 20 ಸಾವಿರ ಜನ ಬರುತ್ತಾರೆ. ನಿತ್ಯ ಎಷ್ಟು ಕಮಿಷನ್, ಸೆಸ್ ವಸೂಲಿ ಮಾಡಲಾಗುತ್ತಿದೆ, ಈ ವರೆಗೆ ಎಷ್ಟು ಸಂಗ್ರಹವಾಗುತ್ತಿದೆ ಎಂಬುದರ ಮಾಹಿತಿಯನ್ನು ಗುರುವಾರ ಸಂಜೆ ಒಳಗಾಗಿ ನೀಡಲು ಸೂಚಿಸಿದ್ದೇನೆ. ಅಧಿಕಾರಿ, ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ' ಎಂದು ತಿಳಿಸಿದರು. </p><p>ಉಪ ಲೋಕಾಯುಕ್ತ ವೀರಪ್ಪ ಎಪಿಎಂಸಿ ಪರಿಶೀಲಿಸುತ್ತಿದ್ದರೂ ಸ್ಥಳಕ್ಕೆ ಬಾರದ ಕಾರ್ಯದರ್ಶಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>