<p><strong>ದೊಡ್ಡಬಳ್ಳಾಪುರ:</strong> ತಾಲ್ಲೂಕಿನ ಸೋತೆನಹಳ್ಳಿ ಗ್ರಾಮದ ಗೃಹಿಣಿ ಪುಷ್ಪಾ(28)ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿಂತೆ ತಲೆ ಮರೆಸಿಕೊಂಡಿದ್ದ ಆಕೆಯ ಪತಿಯ ಕುಟುಂಬದ ಮೂವರನ್ನು ಶನಿವಾರ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.</p>.<p>ಮೃತಳ ಅತ್ತೆ ಭಾರತಮ್ಮ(50), ಪತಿಯ ಚಿಕ್ಕಪ್ಪ, ಸರ್ಕಾರಿ ಶಾಲಾ ಶಿಕ್ಷಕ ಮುತ್ತೇಗೌಡ(49), ಇವರ ಪತ್ನಿ, ಸರ್ಕಾರಿ ಶಾಲಾ ಶಿಕ್ಷಕಿ ಪಲ್ಲವಿ ಅವರನ್ನು ಸರ್ಜಾಪುರದಲ್ಲಿ ಬಂಧಿಸಿದ್ದಾರೆ.</p>.<p>ಅಕ್ಟೋಬರ್ 20ರಂದು ಗೃಹಿಣಿ ಪುಷ್ಪಾ ಅವರು ತಾನು ಗಂಡ, ಅತ್ತೆ, ಮಾವ, ಮೈದುನ ಹಾಗೂ ಸಂಬಂಧಿಕರ ಕಿರುಕುಳಕ್ಕೆ ಬೇಸತ್ತಿದ್ದೇನೆಂದು ವಿಡಿಯೊ ಚಿತ್ರೀಕರಿಸಿ, ಸಂಬಂಧಿಕರಿಗೆ ಕಳುಹಿಸಿದ್ದರು. ಬಳಿಕ ತಾಲ್ಲೂಕಿನ ಎಸ್.ಎಸ್.ಘಾಟಿ ಸಮೀಪದ ಸರ್.ಎಂ.ವಿಶ್ವೇಶ್ವರಯ್ಯ ಪಿಕ್ಆಪ್ ಡ್ಯಾಂಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.</p>.<p>ಮಗಳ ಸಾವಿಗೆ ಗಂಡನ ಮನೆಯವರೇ ಕಾರಣ ಎಂದು ಮೃತಳ ತಂದೆ ಮಹಿಳಾ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳದ ದೂರು ದಾಖಲಿಸಿದ್ದರು.</p>.<p>ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಮೃತಳ ಪತಿ ವೇಣು(30) ಮತ್ತು ಮಾವ ಗೋವಿಂದಪ್ಪ(55) ಬಂಧಿಸಿದ್ದರು. ತಲೆ ಮರೆಸಿಕೊಂಡಿದ್ದ ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ಆರಂಭಿಸಿದ್ದರು. ಶನಿವಾರ ಮೂವರನ್ನು ಬಂಧಿಸಲಾಗಿದ್ದು, ತಲೆ ಮರೆಸಿಕೊಂಡಿರುವ ಮೃತಳ ಮೈದುನ ನಾರಾಯಣಸ್ವಾಮಿ ಪತ್ತೆಗೆ ಪೊಲೀಸರು ಹುಡಕಾಟ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ:</strong> ತಾಲ್ಲೂಕಿನ ಸೋತೆನಹಳ್ಳಿ ಗ್ರಾಮದ ಗೃಹಿಣಿ ಪುಷ್ಪಾ(28)ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿಂತೆ ತಲೆ ಮರೆಸಿಕೊಂಡಿದ್ದ ಆಕೆಯ ಪತಿಯ ಕುಟುಂಬದ ಮೂವರನ್ನು ಶನಿವಾರ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.</p>.<p>ಮೃತಳ ಅತ್ತೆ ಭಾರತಮ್ಮ(50), ಪತಿಯ ಚಿಕ್ಕಪ್ಪ, ಸರ್ಕಾರಿ ಶಾಲಾ ಶಿಕ್ಷಕ ಮುತ್ತೇಗೌಡ(49), ಇವರ ಪತ್ನಿ, ಸರ್ಕಾರಿ ಶಾಲಾ ಶಿಕ್ಷಕಿ ಪಲ್ಲವಿ ಅವರನ್ನು ಸರ್ಜಾಪುರದಲ್ಲಿ ಬಂಧಿಸಿದ್ದಾರೆ.</p>.<p>ಅಕ್ಟೋಬರ್ 20ರಂದು ಗೃಹಿಣಿ ಪುಷ್ಪಾ ಅವರು ತಾನು ಗಂಡ, ಅತ್ತೆ, ಮಾವ, ಮೈದುನ ಹಾಗೂ ಸಂಬಂಧಿಕರ ಕಿರುಕುಳಕ್ಕೆ ಬೇಸತ್ತಿದ್ದೇನೆಂದು ವಿಡಿಯೊ ಚಿತ್ರೀಕರಿಸಿ, ಸಂಬಂಧಿಕರಿಗೆ ಕಳುಹಿಸಿದ್ದರು. ಬಳಿಕ ತಾಲ್ಲೂಕಿನ ಎಸ್.ಎಸ್.ಘಾಟಿ ಸಮೀಪದ ಸರ್.ಎಂ.ವಿಶ್ವೇಶ್ವರಯ್ಯ ಪಿಕ್ಆಪ್ ಡ್ಯಾಂಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.</p>.<p>ಮಗಳ ಸಾವಿಗೆ ಗಂಡನ ಮನೆಯವರೇ ಕಾರಣ ಎಂದು ಮೃತಳ ತಂದೆ ಮಹಿಳಾ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳದ ದೂರು ದಾಖಲಿಸಿದ್ದರು.</p>.<p>ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಮೃತಳ ಪತಿ ವೇಣು(30) ಮತ್ತು ಮಾವ ಗೋವಿಂದಪ್ಪ(55) ಬಂಧಿಸಿದ್ದರು. ತಲೆ ಮರೆಸಿಕೊಂಡಿದ್ದ ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ಆರಂಭಿಸಿದ್ದರು. ಶನಿವಾರ ಮೂವರನ್ನು ಬಂಧಿಸಲಾಗಿದ್ದು, ತಲೆ ಮರೆಸಿಕೊಂಡಿರುವ ಮೃತಳ ಮೈದುನ ನಾರಾಯಣಸ್ವಾಮಿ ಪತ್ತೆಗೆ ಪೊಲೀಸರು ಹುಡಕಾಟ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>