ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಎತ್ತಿನಹೊಳೆ, ಕಾವೇರಿ ಬೇಕು; ವೃಷಭಾವತಿ ಬೇಡ

ದೊಡ್ಡಬಳ್ಳಾಪುರ ಕೆರೆಗಳಿಗೆ ಶುದ್ಧೀಕರಿಸಿರುವ ನೀರು ಹರಿಸದಂತೆ ಜನಕ್ರೋಶ
Published : 14 ಜೂನ್ 2025, 19:28 IST
Last Updated : 14 ಜೂನ್ 2025, 19:28 IST
ಫಾಲೋ ಮಾಡಿ
Comments
ನಮ್ಮ ತಾಲ್ಲೂಕಿಗೆ ಬೆಂಗಳೂರಿನ ಕೊಚ್ಚೆ ನೀರಾಗಿರುವ ವೃಷಾಭಾವತಿ ನೀರು ಹರಿಸುವ ಹಾಗೂ ಬಿಬಿಎಂಪಿ ಕಸ ತಂದು ಸುರಿಯುತ್ತಿರುವುದಕ್ಕೆ ನಮ್ಮ ವಿರೋಧವಿದೆ. ಯಾವುದೇ ತರಹದ ಹೋರಾಟಕ್ಕೂ ತಾಲ್ಲೂಕಿನ ಜನ ಸಿದ್ಧ. ಇಲ್ಲದಿದ್ದರೆ ನಮ್ಮ ಮಕ್ಕಳ ಬದುಕು ಕರಾಳವಾಗಲಿದೆ.
ತಿ.ರಂಗರಾಜು, ರೈತ, ಚಿಕ್ಕತುಮಕೂರು ಗ್ರಾಮ.
ಸಿಮೆಂಟ್‌ ಕಾರ್ಖಾನೆಗೆ ಅನುಮತಿ ಬೇಡ
ಕೇಂದ್ರ ಸರ್ಕಾರ ಈಗಾಗಲೇ ಬೆಂಗಳೂರಿನ ಹೊರ ವರ್ತುಲ ರೈಲು ಯೋಜನೆ ರೂಪಿಸಿದೆ. ಈ ಯೋಜನೆಯಲ್ಲಿ ತಾಲ್ಲೂಕಿನ ವಡ್ಡರಹಳ್ಳಿ ಗ್ರಾಮದ ರೈಲು ನಿಲ್ದಾಣವು ಪ್ರಮುಖವಾಗಿದೆ. ಆದರೆ ಇದೇ ರೈಲು ನಿಲ್ದಾಣದ ಸಮೀಪ ಖಾಸಗಿ ಕಂಪನಿಯೊಂದು ಸಿಮೆಂಟ್‌ ತಯಾರಿಕಾ ಕಾರ್ಖಾನೆ ನಿರ್ಮಿಸಲು ಮುಂದಾಗಿದೆ. ಇದಕ್ಕೆ ಸ್ಥಳೀಯ ಕಂಟನಕುಂಟೆ ಗ್ರಾಮ ಪಂಚಾಯಿತಿ ಅನುಮತಿ ನೀಡಬಾರದು ಎಂದು ಶಾಸಕ ಧೀರಜ್‌ ಮುನಿರಾಜು ಹೇಳಿದರು. ಈ ಬಗ್ಗೆ ದೊಡ್ಡಬಳ್ಳಾಪುರ ಯೋಜನ ಪ್ರಾಧಿಕಾರಕ್ಕೂ ಪತ್ರ ಬರೆಯಲಾಗಿದೆ. ಸಿಮೆಂಟ್‌ ಕಾರ್ಖಾನೆ ಇಲ್ಲಿ ಸ್ಥಾಪನೆಯಾದರೆ. ಇದರ ಧೂಳಿನಿಂದ ಗ್ರಾಮಗಳ ಜನರ ಆರೋಗ್ಯ ಹಾಳಾಗಲಿದೆ. ರೈತರ ಬೆಳೆಗಳಿಗೂ ಹಾನಿಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT