<p><strong>ಸವದತ್ತಿ</strong>: ‘ಈ ವರ್ಷ ಸುರಿದ ಉತ್ತಮ ಮಳೆಯಿಂದ ನವಿಲುತೀರ್ಥ ಜಲಾಶಯ ತುಂಬಿದೆ. ಇದನ್ನೇ ನೆಚ್ಚಿಕೊಂಡವರಿಗೆ ಒಂದು ವರ್ಷದವರೆಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲಾಗುವುದು’ ಎಂದು ಮಲಪ್ರಭಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷೆಯೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.</p><p>ತಾಲ್ಲೂಕಿನ ನವಿಲುತೀರ್ಥ ಜಲಾಶಯದ ಸ್ಥಳದಲ್ಲಿ ಮಂಗಳವಾರ ಗಂಗಾಪೂಜೆ ನೆರವೇರಿಸಿ, ಮಲಪ್ರಭೆಗೆ ಬಾಗಿನ ಅರ್ಪಿಸಿದ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p><p>‘ನವಿಲುತೀರ್ಥ ಜಲಾಶಯ ಉತ್ತರ ಕರ್ನಾಟಕದ ಜನರ ಜೀವನಾಡಿ. ರೇಣುಕಾ ಯಲ್ಲಮ್ಮ ದೇವಿ ಕೃಪೆಯಿಂದ ಇದು ಭರ್ತಿಯಾಗಿದ್ದು ಸಂತಸ ತಂದಿದೆ. ಈ ಬಾರಿ ಬೇಸಿಗೆಯಲ್ಲೂ ಜನ, ಜಾನುವಾರು ಮತ್ತು ಕೃಷಿ ಚಟುವಟಿಕೆಗೆ ನೀರಿನ ಕೊರತೆ ಎದುರಾಗದು’ ಎಂದರು.</p><p>‘ಮುಂದಿನ ದಿನಗಳಲ್ಲಿ ಜಲಾಶಯದಲ್ಲಿ ಉದ್ಯಾನ ನಿರ್ಮಿಸಲಾಗುವುದು. ವೀಕ್ಷಕರಿಗೆ ಆಸನ ವ್ಯವಸ್ಥೆ ಕಲ್ಪಿಸಲಾಗುವುದು. ಕೆಆರ್ಎಸ್ ಮಾದರಿಯಲ್ಲಿ ಜಲಾಶಯ ಅಭಿವೃದ್ಧಿಪಡಿಸಲಾಗುವುದು’ ಎಂದು ಭರವಸೆ ನೀಡಿದರು.</p><p>ನವಲಗುಂದ ಕ್ಷೇತ್ರದ ಶಾಸಕ ಎನ್.ಎಚ್.ಕೋನರೆಡ್ಡಿ, ‘ನಾಲ್ಕು ಜಿಲ್ಲೆಗಳ 13 ತಾಲ್ಲೂಕುಗಳ ಜನರು ಕುಡಿಯುವ ನೀರು ಮತ್ತು ಕೃಷಿ ಚಟುವಟಿಕೆಗೆ ಈ ಜಲಾಶಯ ಅವಲಂಬಿಸಿದ್ದಾರೆ. ಇದು ಭರ್ತಿಯಾಗಿದ್ದು ಜನರು ಸಂತಸಗೊಂಡಿದ್ದಾರೆ’ ಎಂದರು.</p><p>ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ ವಿಶ್ವಾಸ ವೈದ್ಯ, ‘ರಾಜ್ಯ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು, ನವಿಲುತೀರ್ಥ ಜಲಾಶಯದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು’ ಎಂದು ತಿಳಿಸಿದರು.</p><p>ಬಾದಾಮಿ ಕ್ಷೇತ್ರದ ಶಾಸಕ ಬಿ.ಬಿ.ಚಿಮ್ಮನಕಟ್ಟಿ, ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್, ನೀರು ಬಳಕೆದಾರರ ಸಂಘದ ಅಧ್ಯಕ್ಷ ಸದಾಶಿವಗೌಡ ಪಾಟೀಲ, ನೀರಾವರಿ ನಿಗಮದ ಮುಖ್ಯ ಎಂಜಿನಿಯರ್ ಎ.ಎಲ್.ವಾಸನದ, ನವಿಲುತೀರ್ಥ ವೃತ್ತದ ಅಧೀಕ್ಷಕ ಎಂಜಿನಿಯರ್ ವಿ.ಎಸ್.ಮಧುಕರ ಉಪಸ್ಥಿತರಿದ್ದರು.</p><p>ಇದಕ್ಕೂ ಮುನ್ನ, ನವೀಕೃತ ಪ್ರವಾಸಿ ಮಂದಿರದ ಕಟ್ಟಡವನ್ನು ಲಕ್ಷ್ಮಿ ಹೆಬ್ಬಾಳಕರ ಉದ್ಘಾಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸವದತ್ತಿ</strong>: ‘ಈ ವರ್ಷ ಸುರಿದ ಉತ್ತಮ ಮಳೆಯಿಂದ ನವಿಲುತೀರ್ಥ ಜಲಾಶಯ ತುಂಬಿದೆ. ಇದನ್ನೇ ನೆಚ್ಚಿಕೊಂಡವರಿಗೆ ಒಂದು ವರ್ಷದವರೆಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲಾಗುವುದು’ ಎಂದು ಮಲಪ್ರಭಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷೆಯೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.</p><p>ತಾಲ್ಲೂಕಿನ ನವಿಲುತೀರ್ಥ ಜಲಾಶಯದ ಸ್ಥಳದಲ್ಲಿ ಮಂಗಳವಾರ ಗಂಗಾಪೂಜೆ ನೆರವೇರಿಸಿ, ಮಲಪ್ರಭೆಗೆ ಬಾಗಿನ ಅರ್ಪಿಸಿದ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p><p>‘ನವಿಲುತೀರ್ಥ ಜಲಾಶಯ ಉತ್ತರ ಕರ್ನಾಟಕದ ಜನರ ಜೀವನಾಡಿ. ರೇಣುಕಾ ಯಲ್ಲಮ್ಮ ದೇವಿ ಕೃಪೆಯಿಂದ ಇದು ಭರ್ತಿಯಾಗಿದ್ದು ಸಂತಸ ತಂದಿದೆ. ಈ ಬಾರಿ ಬೇಸಿಗೆಯಲ್ಲೂ ಜನ, ಜಾನುವಾರು ಮತ್ತು ಕೃಷಿ ಚಟುವಟಿಕೆಗೆ ನೀರಿನ ಕೊರತೆ ಎದುರಾಗದು’ ಎಂದರು.</p><p>‘ಮುಂದಿನ ದಿನಗಳಲ್ಲಿ ಜಲಾಶಯದಲ್ಲಿ ಉದ್ಯಾನ ನಿರ್ಮಿಸಲಾಗುವುದು. ವೀಕ್ಷಕರಿಗೆ ಆಸನ ವ್ಯವಸ್ಥೆ ಕಲ್ಪಿಸಲಾಗುವುದು. ಕೆಆರ್ಎಸ್ ಮಾದರಿಯಲ್ಲಿ ಜಲಾಶಯ ಅಭಿವೃದ್ಧಿಪಡಿಸಲಾಗುವುದು’ ಎಂದು ಭರವಸೆ ನೀಡಿದರು.</p><p>ನವಲಗುಂದ ಕ್ಷೇತ್ರದ ಶಾಸಕ ಎನ್.ಎಚ್.ಕೋನರೆಡ್ಡಿ, ‘ನಾಲ್ಕು ಜಿಲ್ಲೆಗಳ 13 ತಾಲ್ಲೂಕುಗಳ ಜನರು ಕುಡಿಯುವ ನೀರು ಮತ್ತು ಕೃಷಿ ಚಟುವಟಿಕೆಗೆ ಈ ಜಲಾಶಯ ಅವಲಂಬಿಸಿದ್ದಾರೆ. ಇದು ಭರ್ತಿಯಾಗಿದ್ದು ಜನರು ಸಂತಸಗೊಂಡಿದ್ದಾರೆ’ ಎಂದರು.</p><p>ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ ವಿಶ್ವಾಸ ವೈದ್ಯ, ‘ರಾಜ್ಯ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು, ನವಿಲುತೀರ್ಥ ಜಲಾಶಯದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು’ ಎಂದು ತಿಳಿಸಿದರು.</p><p>ಬಾದಾಮಿ ಕ್ಷೇತ್ರದ ಶಾಸಕ ಬಿ.ಬಿ.ಚಿಮ್ಮನಕಟ್ಟಿ, ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್, ನೀರು ಬಳಕೆದಾರರ ಸಂಘದ ಅಧ್ಯಕ್ಷ ಸದಾಶಿವಗೌಡ ಪಾಟೀಲ, ನೀರಾವರಿ ನಿಗಮದ ಮುಖ್ಯ ಎಂಜಿನಿಯರ್ ಎ.ಎಲ್.ವಾಸನದ, ನವಿಲುತೀರ್ಥ ವೃತ್ತದ ಅಧೀಕ್ಷಕ ಎಂಜಿನಿಯರ್ ವಿ.ಎಸ್.ಮಧುಕರ ಉಪಸ್ಥಿತರಿದ್ದರು.</p><p>ಇದಕ್ಕೂ ಮುನ್ನ, ನವೀಕೃತ ಪ್ರವಾಸಿ ಮಂದಿರದ ಕಟ್ಟಡವನ್ನು ಲಕ್ಷ್ಮಿ ಹೆಬ್ಬಾಳಕರ ಉದ್ಘಾಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>