<p><strong>ಬೆಳಗಾವಿ:</strong> ಚಳಿಗಾಲದ ಅಧಿವೇಶನಕ್ಕೆ ಕ್ಷಣಗಣನೆ ಆರಂಭವಾಗಿದ್ದು ಜಿಲ್ಲಾಡಳಿತದಲ್ಲಿ ಗಡಿಬಿಡಿ ಕೆಲಸಗಳು ಸಾಗಿವೆ. ವಸತಿ, ಊಟ, ನೀರು, ವಾಹನ, ಇಂಟರ್ನೆಟ್, ಸುರಕ್ಷತೆ ಸೇರಿದಂತೆ ಎಲ್ಲ ಸಿದ್ಧತೆಗಳು ಅಂತಿಮ ಹಂತ ತಲುಪಿವೆ. ವಿವಿಧ ಉಪ ಸಮಿತಿಗಳು ಶನಿವಾರ ಕೂಡ ನಿರಂತರ ಸಭೆ– ಸಿದ್ಧತೆಗಳಲ್ಲೇ ಮುಳುಗಿದವು.</p><p>ದೆಹಲಿಯಲ್ಲಿ ಭಯೋತ್ಪಾದಕರು ಬಾಂಬ್ ಸ್ಫೋಟಿಸಿದ ಕಾರಣ ಈ ಬಾರಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಕನಿಷ್ಠ 6,000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಭೂಷಣ ಬೊರಸೆ ತಿಳಿಸಿದ್ದಾರೆ. ಆದರೆ, ಜಿಲ್ಲಾಧಿಕಾರಿ ಇದಕ್ಕೂ ಒಂದು ಹೆಜ್ಜೆ ಮುಂದೆ ಹೋಗಿ ಪೊಲೀಸರ ಸಂಖ್ಯೆಯನ್ನು 8,000ಕ್ಕೆ ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ. ಒಟ್ಟಾರೆಯಾಗಿ ₹21 ಕೋಟಿ ವೆಚ್ಚವನ್ನು ಇಡೀ ಅಧಿವೇಶನಕ್ಕೆ ನಿಗದಿ ಮಾಡಿದ್ದರೆ ಇದರಲ್ಲಿ ₹5 ಕೋಟಿಯನ್ನು ಕೇವಲ ಭದ್ರತೆಗಾಗಿ ನಿಗದಿ ಮಾಡಲಾಗಿದೆ.</p><p>ಶನಿವಾರ ಮೊದಲ ತಂಡದ ಪೊಲೀಸ್ ಅಧಿಕಾರಿಗಳಿಗೆ ಕರ್ತವ್ಯ ನಿಯೋಜನೆ ಮಾಡಲಾಯಿತು. ಈಗಾಗಲೇ ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಪೊಲೀಸರು ಬಂದು ವರದಿ ಮಾಡಿಕೊಳ್ಳುವ ಪ್ರಕ್ರಿಯೆ ಮುಂದುವರಿದಿದೆ.</p>.<p><strong>ಇಂದು ಸಿದ್ದರಾಮಯ್ಯ ವಾಸ್ತವ್ಯ:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿವೇಶನಕ್ಕೆ ಒಂದು ದಿನ ಮುಂಚಿತವಾಗಿಯೇ ಅಂದರೆ; ಡಿ.7ರಂದೇ ಬೆಳಗಾವಿಗೆ ಆಗಮಿಸಲಿದ್ದಾರೆ. ಬೆಂಗಳೂರಿನಿಂದ ಧಾರವಾಡಕ್ಕೆ ಆಗಮಿಸುವ ಅವರು ಅಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಧ್ಯಾಹ್ನ 3.30ಕ್ಕೆ ಸುವರ್ಣ ವಿಧಾನಸೌಧಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದಾರೆ.</p><p>ಯಾವುದೇ ಅಧಿಕೃತ ಕಾರ್ಯಕ್ರಮಗಳು ನಿಗದಿಯಾಗಿಲ್ಲ. ಆದರೆ, ಅಧಿವೇಶನಕ್ಕೆ ಸಂಬಂಧಿಸಿದಂತೆ ಸಿದ್ಧತೆಗಳನ್ನು ಪರಿಶೀಲಿಸಲಿದ್ದಾರೆ. ಭಾನುವಾರ ಬೆಳಗಾವಿಯಲ್ಲೇ ವಸತಿ ಮಾಡಲಿದ್ದಾರೆ. ಕಾರಣ ಈಗಾಗಲೇ ಅಧಿಕಾರಿ ವಲಯದಲ್ಲಿ ಚಡಪಡಿಕೆ ಆರಂಭವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಚಳಿಗಾಲದ ಅಧಿವೇಶನಕ್ಕೆ ಕ್ಷಣಗಣನೆ ಆರಂಭವಾಗಿದ್ದು ಜಿಲ್ಲಾಡಳಿತದಲ್ಲಿ ಗಡಿಬಿಡಿ ಕೆಲಸಗಳು ಸಾಗಿವೆ. ವಸತಿ, ಊಟ, ನೀರು, ವಾಹನ, ಇಂಟರ್ನೆಟ್, ಸುರಕ್ಷತೆ ಸೇರಿದಂತೆ ಎಲ್ಲ ಸಿದ್ಧತೆಗಳು ಅಂತಿಮ ಹಂತ ತಲುಪಿವೆ. ವಿವಿಧ ಉಪ ಸಮಿತಿಗಳು ಶನಿವಾರ ಕೂಡ ನಿರಂತರ ಸಭೆ– ಸಿದ್ಧತೆಗಳಲ್ಲೇ ಮುಳುಗಿದವು.</p><p>ದೆಹಲಿಯಲ್ಲಿ ಭಯೋತ್ಪಾದಕರು ಬಾಂಬ್ ಸ್ಫೋಟಿಸಿದ ಕಾರಣ ಈ ಬಾರಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಕನಿಷ್ಠ 6,000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಭೂಷಣ ಬೊರಸೆ ತಿಳಿಸಿದ್ದಾರೆ. ಆದರೆ, ಜಿಲ್ಲಾಧಿಕಾರಿ ಇದಕ್ಕೂ ಒಂದು ಹೆಜ್ಜೆ ಮುಂದೆ ಹೋಗಿ ಪೊಲೀಸರ ಸಂಖ್ಯೆಯನ್ನು 8,000ಕ್ಕೆ ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ. ಒಟ್ಟಾರೆಯಾಗಿ ₹21 ಕೋಟಿ ವೆಚ್ಚವನ್ನು ಇಡೀ ಅಧಿವೇಶನಕ್ಕೆ ನಿಗದಿ ಮಾಡಿದ್ದರೆ ಇದರಲ್ಲಿ ₹5 ಕೋಟಿಯನ್ನು ಕೇವಲ ಭದ್ರತೆಗಾಗಿ ನಿಗದಿ ಮಾಡಲಾಗಿದೆ.</p><p>ಶನಿವಾರ ಮೊದಲ ತಂಡದ ಪೊಲೀಸ್ ಅಧಿಕಾರಿಗಳಿಗೆ ಕರ್ತವ್ಯ ನಿಯೋಜನೆ ಮಾಡಲಾಯಿತು. ಈಗಾಗಲೇ ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಪೊಲೀಸರು ಬಂದು ವರದಿ ಮಾಡಿಕೊಳ್ಳುವ ಪ್ರಕ್ರಿಯೆ ಮುಂದುವರಿದಿದೆ.</p>.<p><strong>ಇಂದು ಸಿದ್ದರಾಮಯ್ಯ ವಾಸ್ತವ್ಯ:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿವೇಶನಕ್ಕೆ ಒಂದು ದಿನ ಮುಂಚಿತವಾಗಿಯೇ ಅಂದರೆ; ಡಿ.7ರಂದೇ ಬೆಳಗಾವಿಗೆ ಆಗಮಿಸಲಿದ್ದಾರೆ. ಬೆಂಗಳೂರಿನಿಂದ ಧಾರವಾಡಕ್ಕೆ ಆಗಮಿಸುವ ಅವರು ಅಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಧ್ಯಾಹ್ನ 3.30ಕ್ಕೆ ಸುವರ್ಣ ವಿಧಾನಸೌಧಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದಾರೆ.</p><p>ಯಾವುದೇ ಅಧಿಕೃತ ಕಾರ್ಯಕ್ರಮಗಳು ನಿಗದಿಯಾಗಿಲ್ಲ. ಆದರೆ, ಅಧಿವೇಶನಕ್ಕೆ ಸಂಬಂಧಿಸಿದಂತೆ ಸಿದ್ಧತೆಗಳನ್ನು ಪರಿಶೀಲಿಸಲಿದ್ದಾರೆ. ಭಾನುವಾರ ಬೆಳಗಾವಿಯಲ್ಲೇ ವಸತಿ ಮಾಡಲಿದ್ದಾರೆ. ಕಾರಣ ಈಗಾಗಲೇ ಅಧಿಕಾರಿ ವಲಯದಲ್ಲಿ ಚಡಪಡಿಕೆ ಆರಂಭವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>