<p><strong>ಬೆಳಗಾವಿ</strong>: ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಅವಾಚ್ಯ ಪದ ಬಳಸಿ ನಿಂದಿಸಿದ ಆರೋಪದ ಮೇಲೆ ಬಂಧಿತರಾದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಶುಕ್ರವಾರ ಬೆಳಿಗ್ಗೆ 11.10ಕ್ಕೆ ನಗರದ 5ನೇ ಹೆಚ್ಚುವರಿ ಜೆಎಂಎಫ್ಸಿ ನ್ಯಾಯಾಲಯದ ಹಾಜರುಪಡಿಸಲಾಯಿತು.</p><p>ನ್ಯಾಯಾಲಯದ ಆವರಣದಲ್ಲಿ ಅಪಾರ ಸಂಖ್ಯೆಯಲ್ಲಿ ಸೇರುತ್ತಿರುವ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.</p><p>ನ್ಯಾಯಾಲಯದ ಬಳಿ ಇರುವ ರಾಣಿ ಚನ್ನಮ್ಮನ ವೃತ್ತದಲ್ಲಿ ಬೆಳಿಗ್ಗೆ 11ಕ್ಕೆ ಬಿಜೆಪಿಯವರು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ಕರೆ ಕೊಟ್ಟಿದ್ದಾರೆ. ಹಾಗಾಗಿ ವೃತ್ತದಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.</p><p><strong>ವಿಚಾರಣೆ ಆರಂಭಿಸಿದ ನ್ಯಾಯಾಧೀಶರಾದ ಸ್ಪರ್ಶ ಡಿಸೋಜಾ</strong></p><p>ನ್ಯಾಯಾಧೀಶರಾದ ಸ್ಪರ್ಶಾ ಡಿಸೋಜಾ ಅವರ ಮುಂದೆ ರವಿ ಅವರನ್ನು ಹಾಜರುಪಡಿಸಲಾಯಿತು. ಬಿಜೆಪಿ ರಾಜ್ಯ ವಕ್ತಾರರೂ ಆಗಿರುವ ವಕೀಲ ಎಂ.ಬಿ.ಝಿರಲಿ ಅವರು ಸಿ.ಟಿ.ರವಿ ಪರ ವಕಾಲತು ವಹಿಸಿದ್ದಾರೆ.</p><p>ಇದಕ್ಕೂ ಮುನ್ನ ಒಂದು ತಾಸಿ ನ್ಯಾಯಾಲಯದಲ್ಲಿ ಬೀಡು ಬಿಟ್ಟಿದ್ದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮುಖಂಡರು ಹಾಗೂ ವಕೀಲರೊಂದಿಗೆ ಚರ್ಚಿಸಿದರು.</p><p>ನ್ಯಾಯಾಲಯದ ಮುಂದೆ ಅಪಾರ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರೂ ಸೇರಿದ್ದಾರೆ.</p>.ಸಚಿವೆಗೆ ಮಾನಹಾನಿ ಪದ ಬಳಸಿ ನಿಂದನೆ ಆರೋಪ: ಖಾನಾಪುರ ಠಾಣೆಗೆ ಸಿ.ಟಿ.ರವಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಅವಾಚ್ಯ ಪದ ಬಳಸಿ ನಿಂದಿಸಿದ ಆರೋಪದ ಮೇಲೆ ಬಂಧಿತರಾದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಶುಕ್ರವಾರ ಬೆಳಿಗ್ಗೆ 11.10ಕ್ಕೆ ನಗರದ 5ನೇ ಹೆಚ್ಚುವರಿ ಜೆಎಂಎಫ್ಸಿ ನ್ಯಾಯಾಲಯದ ಹಾಜರುಪಡಿಸಲಾಯಿತು.</p><p>ನ್ಯಾಯಾಲಯದ ಆವರಣದಲ್ಲಿ ಅಪಾರ ಸಂಖ್ಯೆಯಲ್ಲಿ ಸೇರುತ್ತಿರುವ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.</p><p>ನ್ಯಾಯಾಲಯದ ಬಳಿ ಇರುವ ರಾಣಿ ಚನ್ನಮ್ಮನ ವೃತ್ತದಲ್ಲಿ ಬೆಳಿಗ್ಗೆ 11ಕ್ಕೆ ಬಿಜೆಪಿಯವರು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ಕರೆ ಕೊಟ್ಟಿದ್ದಾರೆ. ಹಾಗಾಗಿ ವೃತ್ತದಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.</p><p><strong>ವಿಚಾರಣೆ ಆರಂಭಿಸಿದ ನ್ಯಾಯಾಧೀಶರಾದ ಸ್ಪರ್ಶ ಡಿಸೋಜಾ</strong></p><p>ನ್ಯಾಯಾಧೀಶರಾದ ಸ್ಪರ್ಶಾ ಡಿಸೋಜಾ ಅವರ ಮುಂದೆ ರವಿ ಅವರನ್ನು ಹಾಜರುಪಡಿಸಲಾಯಿತು. ಬಿಜೆಪಿ ರಾಜ್ಯ ವಕ್ತಾರರೂ ಆಗಿರುವ ವಕೀಲ ಎಂ.ಬಿ.ಝಿರಲಿ ಅವರು ಸಿ.ಟಿ.ರವಿ ಪರ ವಕಾಲತು ವಹಿಸಿದ್ದಾರೆ.</p><p>ಇದಕ್ಕೂ ಮುನ್ನ ಒಂದು ತಾಸಿ ನ್ಯಾಯಾಲಯದಲ್ಲಿ ಬೀಡು ಬಿಟ್ಟಿದ್ದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮುಖಂಡರು ಹಾಗೂ ವಕೀಲರೊಂದಿಗೆ ಚರ್ಚಿಸಿದರು.</p><p>ನ್ಯಾಯಾಲಯದ ಮುಂದೆ ಅಪಾರ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರೂ ಸೇರಿದ್ದಾರೆ.</p>.ಸಚಿವೆಗೆ ಮಾನಹಾನಿ ಪದ ಬಳಸಿ ನಿಂದನೆ ಆರೋಪ: ಖಾನಾಪುರ ಠಾಣೆಗೆ ಸಿ.ಟಿ.ರವಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>