<p><strong>ಬೆಳಗಾವಿ:</strong> ‘ಪ್ರತಿ ಟನ್ ಕಬ್ಬಿಗೆ ₹3,500 ನೀಡುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ನ್ಯಾಯ ಒದಗಿಸಲು ಜಿಲ್ಲಾಡಳಿತಕ್ಕೆ ಐದು ದಿನಗಳ ಗಡುವು ಕೊಡುತ್ತೇವೆ. ಅಷ್ಟರೊಳಗೆ ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರಗೊಳಿಸಬೇಕಾಗುತ್ತದೆ’ ಎಂದು ಭಾರತೀಯ ಕೃಷಿಕ ಸಮಾಜ(ರೈತ ಸಂಘಟನೆ) ಮುಖಂಡ ಸಿದಗೌಡ ಮೋದಗಿ ಎಚ್ಚರಿಕೆ ಕೊಟ್ಟರು.</p><p>ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಹಾರಾಷ್ಟ್ರದ ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ ₹3,750 ನೀಡುತ್ತಿವೆ. ಹೀಗಿರುವಾಗ ಜಿಲ್ಲೆಯ ಕಾರ್ಖಾನೆಗಳಿಂದ ₹3,500 ಕೊಡಿಸಲಾಗದಿದ್ದರೆ ಜಿಲ್ಲಾಡಳಿತ ರೈತರ ಪರವಾಗಿದೆಯೋ ಅಥವಾ ಕಾರ್ಖಾನೆಗಳ ಪರವೋ ಎಂಬ ಅನುಮಾನ ಮೂಡುತ್ತದೆ’ ಎಂದರು.</p><p>‘ಮೂಡಲಗಿ ತಾಲ್ಲೂಕಿನ ಗುರ್ಲಾಪುರ ಕ್ರಾಸ್ನಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಲು ಸೋಮವಾರ ರಾಜ್ಯಮಟ್ಟದ ಸಭೆ ನಡೆಸಿ ಚರ್ಚಿಸಿದ್ದೇವೆ. ನ್ಯಾಯ ಸಿಗುವವರೆಗೂ ರೈತರು ಹೋರಾಟ ಮುಂದುವರಿಸಬೇಕು. ಯಾವ ಕಾರಣಕ್ಕೂ ರಾಜಿ ಆಗಬಾರದು’ ಎಂದು ಹೇಳಿದರು.</p><p>ಮಾಜಿ ಸಚಿವ ಶಶಿಕಾಂತ ನಾಯಿಕ, ರೈತ ಮುಖಂಡರಾದ ಶಂಕರ ಅಂಬಲಿ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಪ್ರತಿ ಟನ್ ಕಬ್ಬಿಗೆ ₹3,500 ನೀಡುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ನ್ಯಾಯ ಒದಗಿಸಲು ಜಿಲ್ಲಾಡಳಿತಕ್ಕೆ ಐದು ದಿನಗಳ ಗಡುವು ಕೊಡುತ್ತೇವೆ. ಅಷ್ಟರೊಳಗೆ ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರಗೊಳಿಸಬೇಕಾಗುತ್ತದೆ’ ಎಂದು ಭಾರತೀಯ ಕೃಷಿಕ ಸಮಾಜ(ರೈತ ಸಂಘಟನೆ) ಮುಖಂಡ ಸಿದಗೌಡ ಮೋದಗಿ ಎಚ್ಚರಿಕೆ ಕೊಟ್ಟರು.</p><p>ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಹಾರಾಷ್ಟ್ರದ ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ ₹3,750 ನೀಡುತ್ತಿವೆ. ಹೀಗಿರುವಾಗ ಜಿಲ್ಲೆಯ ಕಾರ್ಖಾನೆಗಳಿಂದ ₹3,500 ಕೊಡಿಸಲಾಗದಿದ್ದರೆ ಜಿಲ್ಲಾಡಳಿತ ರೈತರ ಪರವಾಗಿದೆಯೋ ಅಥವಾ ಕಾರ್ಖಾನೆಗಳ ಪರವೋ ಎಂಬ ಅನುಮಾನ ಮೂಡುತ್ತದೆ’ ಎಂದರು.</p><p>‘ಮೂಡಲಗಿ ತಾಲ್ಲೂಕಿನ ಗುರ್ಲಾಪುರ ಕ್ರಾಸ್ನಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಲು ಸೋಮವಾರ ರಾಜ್ಯಮಟ್ಟದ ಸಭೆ ನಡೆಸಿ ಚರ್ಚಿಸಿದ್ದೇವೆ. ನ್ಯಾಯ ಸಿಗುವವರೆಗೂ ರೈತರು ಹೋರಾಟ ಮುಂದುವರಿಸಬೇಕು. ಯಾವ ಕಾರಣಕ್ಕೂ ರಾಜಿ ಆಗಬಾರದು’ ಎಂದು ಹೇಳಿದರು.</p><p>ಮಾಜಿ ಸಚಿವ ಶಶಿಕಾಂತ ನಾಯಿಕ, ರೈತ ಮುಖಂಡರಾದ ಶಂಕರ ಅಂಬಲಿ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>