<p><strong>ಬೆಳಗಾವಿ:</strong> ‘ಕರ್ನಾಟಕ– ಮಹಾರಾಷ್ಟ್ರ ಗಡಿ ವಿವಾದ ಕುರಿತು ಸುಪ್ರೀಂ ಕೋರ್ಟಿನಲ್ಲಿ ನಡೆಯುತ್ತಿರುವ ಪ್ರಕರಣದ ಬಗ್ಗೆ ಕನ್ನಡಿಗರು ಆತಂಕಪಡುವ ಅಗತ್ಯವಿಲ್ಲ. ಒಪ್ಪಿದರೆ ಮಹಾಜನ ವರದಿ ಒಪ್ಪಬೇಕು; ಇಲ್ಲದಿದ್ದರೆ ಯಥಾಸ್ಥಿತಿ ಮುಂದುವರೆಯಬೇಕು ಎಂಬುದು ರಾಜ್ಯದ ದೃಢ ನಿರ್ಧಾರವಾಗಿದೆ’ ಎಂದು ಗಡಿ ಉಸ್ತುವಾರಿ ಸಚಿವರೂ ಆಗಿರುವ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ.ಪಾಟೀಲ ಹೇಳಿದರು.</p><p>ನಗರದಲ್ಲಿ ಶನಿವಾರ, ಗಡಿ ಭಾಗದ ಕನ್ನಡರ ಸಂಘಟನೆಗಳ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ‘ದೇಶದ ಒಕ್ಕೂಟ ವ್ಯವಸ್ಥೆಯನ್ನು ಗೌರವಿಸಿ ಮಹಾಜನ ಆಯೋಗ ರಚನೆಗೆ ನಮ್ಮ ಸರ್ಕಾರ ಒಪ್ಪಿಕೊಂಡಿದೆ. ಮಹಾಜನ ವರದಿಯೇ ಅಂತಿಮ. ಅದನ್ನು ಮಹಾರಾಷ್ಟ್ರ ಒಪ್ಪದಿದ್ದರೆ ವ್ಯತ್ಯಾಸವೇನೂ ಆಗುವುದಿಲ್ಲ’ ಎಂದರು.</p><p>‘ಗಡಿ ವಿವಾದ ಸಾಂವಿಧಾನಿಕ ವಿಷಯ ಆಗಿರುವುದರಿಂದ ಅದನ್ನು ಸುಪ್ರೀಂ ಕೊರ್ಟಿನಲ್ಲಿ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕೋ, ಭೇಡವೋ ಎಂಬುದೇ ಇನ್ನೂ ನಿರ್ಧಾರವಾಗಿಲ್ಲ. ಹಾಗಾಗಿ, ಮಹಾರಾಷ್ಟ್ರದಲ್ಲಿನ ಬೆಳವಣಿಗೆ ಕಂಡು ಗಡಿ ಕನ್ನಡಿಗರು ಚಿಂತೆಪಡಬೇಕಿಲ್ಲ’ ಎಂದರು.</p><p>‘ಕನ್ನಡ– ಮರಾಠಿಗರ ಸಾಮರಸ್ಯದ ಬದುಕು ಇಡೀ ದೇಶಕ್ಕೆ ಮಾದರಿಯಾಗಿದೆ. ಅನಗತ್ಯ ಕ್ಯಾತೆ ತೆಗೆಯುವವರು ಇದನ್ನು ಅರಿತುಕೊಂಡು, ತಮ್ಮ ಮನಸ್ಥಿತಿ ಬದಲಿಸಿಕೊಳ್ಳಬೇಕು’ ಎಂದೂ ಎಂಇಎಸ್ಗೆ ಕಿವಿಮಾತು ಹೇಳಿದರು.</p><p>‘ಗೋವಾ ಕನ್ನಡಿಗರ ಮೇಲಿನ ಅನ್ಯಾಯ ತಡೆಯಲು ಎಲ್ಲ ಕ್ರಮ ವಹಿಸಲಾಗಿದೆ. ಕೇಂದ್ರ ಸರ್ಕಾರಕ್ಕೂ ಮನವರಿಕೆ ಮಾಡಲಾಗಿದೆ’ ಎಂದರು.</p><p>‘ಕನ್ನಡಪರ ಹೋರಾಟಗಾರರ ಮೇಲಿನ ಪ್ರಕರಣ ಹಿಂಪಡೆಯಲು ಕ್ರಮ ಅನುಸರಿಸಬೇಕಾಗುತ್ತದೆ. ಅದರ ಬಗ್ಗೆ ಸಂಬಂಧಪಟ್ಟವರ ಗಮನ ಸೆಳೆಯಲಾಗುವುದು’ ಎಂದು ಸಚಿವ ಭರವಸೆ ನೀಡಿದರು.</p><p>‘ಬೆಳಗಾವಿಯೂ ಸೇರಿದಂತೆ ರಾಜ್ಯದ ಗಡಿಯಲ್ಲಿರುವ ಕನ್ನಡ ಶಾಲೆಗಳನ್ನು ಸದೃಢಗೊಳಿಸಲು ಅಗತ್ಯ ಕ್ರಮಗಳ ಬಗ್ಗೆ ಬೆಳಗಾವಿ ನಿಯೋಗದೊಂದಿಗೆ ಶಿಕ್ಷಣ ಸಚಿವರ ಜತೆ ಚರ್ಚಿಸಲಾಗವುದು. ಇಲ್ಲಿನ ಎಲ್ಲ ಸಂಘಟನೆಗಳು ಸೇರಿಕೊಂಡು ಒಂದು ವರದಿ ನೀಡಬೇಕು’ ಎಂದೂ ಸಲಹೆ ನೀಡಿದರು.</p><p>‘ಬೆಳಗಾವಿಯಲ್ಲಿ ನಡೆಯುವ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಮೈಸೂರು ದಸರಾ ಮಾದರಿಯಲ್ಲಿ ವಿಶೇಷ ಅನುದಾನ ಒದಗಿಸಬೇಕು ಎಂಬುದು ನ್ಯಾಯಯುತ ಬೇಡಿಕೆ. ಇದನ್ನು ಪರಿಶೀಲಿಸಲಾಗುವುದು’ ಎಂದೂ ಅವರು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಕರ್ನಾಟಕ– ಮಹಾರಾಷ್ಟ್ರ ಗಡಿ ವಿವಾದ ಕುರಿತು ಸುಪ್ರೀಂ ಕೋರ್ಟಿನಲ್ಲಿ ನಡೆಯುತ್ತಿರುವ ಪ್ರಕರಣದ ಬಗ್ಗೆ ಕನ್ನಡಿಗರು ಆತಂಕಪಡುವ ಅಗತ್ಯವಿಲ್ಲ. ಒಪ್ಪಿದರೆ ಮಹಾಜನ ವರದಿ ಒಪ್ಪಬೇಕು; ಇಲ್ಲದಿದ್ದರೆ ಯಥಾಸ್ಥಿತಿ ಮುಂದುವರೆಯಬೇಕು ಎಂಬುದು ರಾಜ್ಯದ ದೃಢ ನಿರ್ಧಾರವಾಗಿದೆ’ ಎಂದು ಗಡಿ ಉಸ್ತುವಾರಿ ಸಚಿವರೂ ಆಗಿರುವ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ.ಪಾಟೀಲ ಹೇಳಿದರು.</p><p>ನಗರದಲ್ಲಿ ಶನಿವಾರ, ಗಡಿ ಭಾಗದ ಕನ್ನಡರ ಸಂಘಟನೆಗಳ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ‘ದೇಶದ ಒಕ್ಕೂಟ ವ್ಯವಸ್ಥೆಯನ್ನು ಗೌರವಿಸಿ ಮಹಾಜನ ಆಯೋಗ ರಚನೆಗೆ ನಮ್ಮ ಸರ್ಕಾರ ಒಪ್ಪಿಕೊಂಡಿದೆ. ಮಹಾಜನ ವರದಿಯೇ ಅಂತಿಮ. ಅದನ್ನು ಮಹಾರಾಷ್ಟ್ರ ಒಪ್ಪದಿದ್ದರೆ ವ್ಯತ್ಯಾಸವೇನೂ ಆಗುವುದಿಲ್ಲ’ ಎಂದರು.</p><p>‘ಗಡಿ ವಿವಾದ ಸಾಂವಿಧಾನಿಕ ವಿಷಯ ಆಗಿರುವುದರಿಂದ ಅದನ್ನು ಸುಪ್ರೀಂ ಕೊರ್ಟಿನಲ್ಲಿ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕೋ, ಭೇಡವೋ ಎಂಬುದೇ ಇನ್ನೂ ನಿರ್ಧಾರವಾಗಿಲ್ಲ. ಹಾಗಾಗಿ, ಮಹಾರಾಷ್ಟ್ರದಲ್ಲಿನ ಬೆಳವಣಿಗೆ ಕಂಡು ಗಡಿ ಕನ್ನಡಿಗರು ಚಿಂತೆಪಡಬೇಕಿಲ್ಲ’ ಎಂದರು.</p><p>‘ಕನ್ನಡ– ಮರಾಠಿಗರ ಸಾಮರಸ್ಯದ ಬದುಕು ಇಡೀ ದೇಶಕ್ಕೆ ಮಾದರಿಯಾಗಿದೆ. ಅನಗತ್ಯ ಕ್ಯಾತೆ ತೆಗೆಯುವವರು ಇದನ್ನು ಅರಿತುಕೊಂಡು, ತಮ್ಮ ಮನಸ್ಥಿತಿ ಬದಲಿಸಿಕೊಳ್ಳಬೇಕು’ ಎಂದೂ ಎಂಇಎಸ್ಗೆ ಕಿವಿಮಾತು ಹೇಳಿದರು.</p><p>‘ಗೋವಾ ಕನ್ನಡಿಗರ ಮೇಲಿನ ಅನ್ಯಾಯ ತಡೆಯಲು ಎಲ್ಲ ಕ್ರಮ ವಹಿಸಲಾಗಿದೆ. ಕೇಂದ್ರ ಸರ್ಕಾರಕ್ಕೂ ಮನವರಿಕೆ ಮಾಡಲಾಗಿದೆ’ ಎಂದರು.</p><p>‘ಕನ್ನಡಪರ ಹೋರಾಟಗಾರರ ಮೇಲಿನ ಪ್ರಕರಣ ಹಿಂಪಡೆಯಲು ಕ್ರಮ ಅನುಸರಿಸಬೇಕಾಗುತ್ತದೆ. ಅದರ ಬಗ್ಗೆ ಸಂಬಂಧಪಟ್ಟವರ ಗಮನ ಸೆಳೆಯಲಾಗುವುದು’ ಎಂದು ಸಚಿವ ಭರವಸೆ ನೀಡಿದರು.</p><p>‘ಬೆಳಗಾವಿಯೂ ಸೇರಿದಂತೆ ರಾಜ್ಯದ ಗಡಿಯಲ್ಲಿರುವ ಕನ್ನಡ ಶಾಲೆಗಳನ್ನು ಸದೃಢಗೊಳಿಸಲು ಅಗತ್ಯ ಕ್ರಮಗಳ ಬಗ್ಗೆ ಬೆಳಗಾವಿ ನಿಯೋಗದೊಂದಿಗೆ ಶಿಕ್ಷಣ ಸಚಿವರ ಜತೆ ಚರ್ಚಿಸಲಾಗವುದು. ಇಲ್ಲಿನ ಎಲ್ಲ ಸಂಘಟನೆಗಳು ಸೇರಿಕೊಂಡು ಒಂದು ವರದಿ ನೀಡಬೇಕು’ ಎಂದೂ ಸಲಹೆ ನೀಡಿದರು.</p><p>‘ಬೆಳಗಾವಿಯಲ್ಲಿ ನಡೆಯುವ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಮೈಸೂರು ದಸರಾ ಮಾದರಿಯಲ್ಲಿ ವಿಶೇಷ ಅನುದಾನ ಒದಗಿಸಬೇಕು ಎಂಬುದು ನ್ಯಾಯಯುತ ಬೇಡಿಕೆ. ಇದನ್ನು ಪರಿಶೀಲಿಸಲಾಗುವುದು’ ಎಂದೂ ಅವರು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>