‘ಯಸಳೂರು ವಲಯದಲ್ಲಿ ಹಲವು ಕಾಡಾನೆಗಳು ಬೀಡು ಬಿಟ್ಟಿದ್ದು, ಹಾಸನ ವಲಯದಲ್ಲಿ ಈವರೆಗೆ ನಡೆದ ಕಾರ್ಯಾಚರಣೆಯಲ್ಲಿ ಐದು ಕಾಡಾನೆಗಳನ್ನು ಹಿಡಿದು ರೇಡಿಯೊ ಕಾಲರ್ ಅಳವಡಿಸಲಾಗಿದೆ. ಆದರೂ ಇಲ್ಲಿನ ಜನರು ಆತಂಕಕ್ಕೆ ಒಳಗಾಗಿದ್ದರು. ಆನೆಗಳನ್ನು ಕಾಡಿಗೆ ಅಟ್ಟಲು, ಇಲ್ಲವೆ ಆನೆ ಶಿಬಿರಕ್ಕೆ ಸ್ಥಳಾಂತರಿಸಲು ಒತ್ತಡ ಹೇರುತ್ತಿದ್ದರು. ಹೀಗಾಗಿ ಅರಣ್ಯ ಸಿಬ್ಬಂದಿ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಮತ್ತು ಸಿದ್ಧತೆಯೊಂದಿಗೆ ಅರ್ಜುನ ಸೇರಿದಂತೆ ನಾಲ್ಕು ಸಾಕು ಆನೆಗಳೊಂದಿಗೆ ಕಾರ್ಯಾಚರಣೆ ನಡೆಸುವಾಗ ಈ ದುರ್ಘಟನೆ ನಡೆದಿದೆ’ ಎಂದೂ ತಿಳಿಸಿದ್ದಾರೆ.