ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈಕಮಾಂಡ್‌ ಹೇಳಿದಂತೆ ಕೇಳಲು ನಾನು ಫುಟ್‌ಬಾಲ್‌ ಅಲ್ಲ: ಪ್ರಕಾಶ ಹುಕ್ಕೇರಿ

ಲೋಕಸಭೆಗೆ ಸ್ಪರ್ಧಿಸಲು ಒಲ್ಲೆ ಎಂದ ಪ್ರಕಾಶ ಹುಕ್ಕೇರಿ
Published 1 ಫೆಬ್ರುವರಿ 2024, 15:29 IST
Last Updated 1 ಫೆಬ್ರುವರಿ 2024, 15:29 IST
ಅಕ್ಷರ ಗಾತ್ರ

ಚಿಕ್ಕೋಡಿ: ‘ನಾನು ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸುವುದಿಲ್ಲ. ವಿಧಾನ ಪರಿಷತ್ ಸದಸ್ಯನಾಗಿ ಇರುತ್ತೇನೆ. ಹೈಕಮಾಂಡ್‌ ಹೇಳಿದಂತೆ ಕೇಳಲು ನಾನು ಫುಟ್‌ಬಾಲ್ ಅಲ್ಲ’ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ–2 ಪ್ರಕಾಶ ಹುಕ್ಕೇರಿ ಪ್ರಶ್ನಿಸಿದರು.

ತಾಲ್ಲೂಕಿನ ಕೇರೂರು ಗ್ರಾಮದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘2014ರಲ್ಲಿ ರಾಜ್ಯದಲ್ಲಿ ಸಚಿವನಾಗಿದ್ದ ವೇಳೆ ಒಮ್ಮೆ ಒದ್ದರು, ದೆಹಲಿಗೆ ಹೋಗಿ ಬಿದ್ದೆ. ಅಲ್ಲಿಂದ ಒದ್ದರು, ವಿಧಾನ ಪರಿಷತ್‌ಗೆ ಬಂದೆ. ಈಗ ಮತ್ತೆ ಒದೆಯಲು ಮುಂದಾಗಿದ್ದಾರೆ. ಮತ್ತೆ ದೆಹಲಿಗೆ ಹೋಗಿ ಬೀಳಬೇಕೆ?’ ಎಂದು ಪ್ರಶ್ನಿಸಿದರು.

‘ಹೈಕಮಾಂಡ್‌ ಹೇಳಿದರೂ ಸ್ಪರ್ಧಿಸಲ್ಲ. ಹೈಕಮಾಂಡ್‌ ಹೇಳಿದ ತಕ್ಷಣ ಹೋಗಲು ಇದೇನು ಫುಟ್‌ಬಾಲ್‌ ರಾಜ್ಯವೇ? ವರ್ಷಕ್ಕೊಮ್ಮೆ ಎತ್ತ, ಬೇಕಾದತ್ತ ಒದಿಸಿಕೊಳ್ಳಲು ನಾನು ಸಿದ್ಧನಿಲ್ಲ. ಸಿದ್ದರಾಮಯ್ಯ ಹೇಳಿದರೂ ನಿಲ್ಲುವುದಿಲ್ಲ. ಅವರು ಹೇಳಿದ ತಕ್ಷಣ ನಿಲ್ಲುವೆ ಎಂದು ನಾನೇನೂ ಬರೆದು ಕೊಟ್ಟಿದ್ದೇನೆಯೇ’ ಎಂದೂ ಮರು ಪ್ರಶ್ನಿಸಿದರು.

‘ಲೋಕಸಭೆಗೆ ಪ್ರಕಾಶ ಹುಕ್ಕೇರಿ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ, ಅದು ಸತ್ಯಕ್ಕೆ ದೂರ. ನನ್ನನ್ನು ಶಿಕ್ಷಕರು ಆಯ್ಕೆ ಮಾಡಿದ್ದಾರೆ. ಇನ್ನೂ 5 ವರ್ಷ ಅವರ ಸೇವೆ ಮಾಡುವೆ. ಯಾರಿಂದ ಎಷ್ಟೇ ಒತ್ತಡ ಬಂದರೂ ನಾನು ಸ್ಪರ್ಧಿಸುವುದಿಲ್ಲ. ಹೈಕಮಾಂಡ್‌ ನನ್ನ ಮೇಲೆ ಒತ್ತಡ ಹೇರಬಾರದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT