<p><strong>ಬೆಳಗಾವಿ:</strong> ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಇಂಗಳಿ ಗ್ರಾಮದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಅವರು ಪಿಎಸ್ಐ ನಿಖಿಲ್ ಕಾಂಬಳೆ ಅವರನ್ನು ಅಮಾನತು ಮಾಡಿ ಮಂಗಳವಾರ ಆದೇಶ ಹೊರಡಿಸಿದ್ದಾರೆ.</p><p>ಶ್ರೀರಾಮ ಸೇನೆ ಕಾರ್ಯಕರ್ತರು ಜೂನ್ 26ರಂದು ಗೋವು ಸಾಗಿಸುತ್ತಿದ್ದ ವಾಹನ ಹಿಡಿದು ಠಾಣೆಗೆ ತಂದಿದ್ದರು. ಪೊಲೀಸರು ಗೋವುಗಳನ್ನು ಗೋ ಶಾಲೆಗೆ ಸಾಗಿಸಿದ್ದರು. ಆದರೆ, ಪ್ರಕರಣ ಕುರಿತು ಎಫ್ಐಆರ್ ದಾಖಲಿಸಿಲ್ಲ. ಈ ವಿಷಯವನ್ನು ಮೇಲಧಿಕಾರಿಗಳ ಗಮನಕ್ಕೂ ತಂದಿಲ್ಲ. ಅಲ್ಲದೇ, ಜಿಲ್ಲೆಯಿಂದ ಗಡೀಪಾರಾದ ಶ್ರೀರಾಮ ಸೇನೆಯ ಕಾರ್ಯಕರ್ತ, ರೌಡಿಶೀಟರ್ ಮಹಾವೀರ ಎಂಬಾತನನ್ನೂ ಹಾಗೇ ಬಿಟ್ಟು ಕಳಿಸಿದ್ದಾರೆ. ಇದನ್ನು ಕರ್ತವ್ಯ ಲೋಪ ಎಂದು ಪರಿಗಣಿಸಿ ಅಮಾನತು ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಇಂಗಳಿ ಗ್ರಾಮದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಅವರು ಪಿಎಸ್ಐ ನಿಖಿಲ್ ಕಾಂಬಳೆ ಅವರನ್ನು ಅಮಾನತು ಮಾಡಿ ಮಂಗಳವಾರ ಆದೇಶ ಹೊರಡಿಸಿದ್ದಾರೆ.</p><p>ಶ್ರೀರಾಮ ಸೇನೆ ಕಾರ್ಯಕರ್ತರು ಜೂನ್ 26ರಂದು ಗೋವು ಸಾಗಿಸುತ್ತಿದ್ದ ವಾಹನ ಹಿಡಿದು ಠಾಣೆಗೆ ತಂದಿದ್ದರು. ಪೊಲೀಸರು ಗೋವುಗಳನ್ನು ಗೋ ಶಾಲೆಗೆ ಸಾಗಿಸಿದ್ದರು. ಆದರೆ, ಪ್ರಕರಣ ಕುರಿತು ಎಫ್ಐಆರ್ ದಾಖಲಿಸಿಲ್ಲ. ಈ ವಿಷಯವನ್ನು ಮೇಲಧಿಕಾರಿಗಳ ಗಮನಕ್ಕೂ ತಂದಿಲ್ಲ. ಅಲ್ಲದೇ, ಜಿಲ್ಲೆಯಿಂದ ಗಡೀಪಾರಾದ ಶ್ರೀರಾಮ ಸೇನೆಯ ಕಾರ್ಯಕರ್ತ, ರೌಡಿಶೀಟರ್ ಮಹಾವೀರ ಎಂಬಾತನನ್ನೂ ಹಾಗೇ ಬಿಟ್ಟು ಕಳಿಸಿದ್ದಾರೆ. ಇದನ್ನು ಕರ್ತವ್ಯ ಲೋಪ ಎಂದು ಪರಿಗಣಿಸಿ ಅಮಾನತು ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>