<p><strong>ಬೆಂಗಳೂರು:</strong> ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಆಯುಷ್ ಇಲಾಖೆಯು ಇದೇ 21ರಂದು ಬೆಳಿಗ್ಗೆ 6ರಿಂದ 8 ಗಂಟೆವರೆಗೆ ರಾಜ್ಯದ ವಿವಿಧೆಡೆ ‘ಯೋಗ ಸಂಗಮ’ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಡಿ 5 ಲಕ್ಷಕ್ಕೂ ಅಧಿಕ ಮಂದಿ ಯೋಗಾಭ್ಯಾಸ ಮಾಡಲಿದ್ದಾರೆ. </p>.<p>ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ‘ಯೋಗ ದಿನಾಚರಣೆಯ ಮುಖ್ಯ ಕಾರ್ಯಕ್ರಮ ವಿಧಾನಸೌಧದ ಆವರಣದಲ್ಲಿ ನಡೆಯಲಿದೆ. ರಾಜ್ಯಪಾಲ ಥಾವರಚಂದ್ ಗೆಹಲೋತ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೆ ಸಚಿವರು, ಸಂಸದರು ಭಾಗವಹಿಸುತ್ತಾರೆ. ಚಲನಚಿತ್ರ ತಾರೆಯರಿಗೂ ಆಹ್ವಾನ ನೀಡಲಾಗಿದೆ. 7 ಗಂಟೆಯಿಂದ 7.45ರವರೆಗೆ ಯೋಗ ಪ್ರಾತ್ಯಕ್ಷಿಕೆ ನಡೆಯಲಿದೆ. ವಿಧಾನಸೌಧದ ಆವರಣದಲ್ಲಿ 3 ಸಾವಿರ ಮಂದಿ ಯೋಗಾಭ್ಯಾಸ ಮಾಡುತ್ತಾರೆ. ಇದೇ ವೇಳೆ ಜಿಲ್ಲೆ ಹಾಗೂ ತಾಲ್ಲೂಕು ಕೇಂದ್ರಗಳು, 360 ಆಯುಷ್ಮಾನ್ ಆರೋಗ್ಯ ಕೇಂದ್ರಗಳಲ್ಲಿ ಯೋಗಾಭ್ಯಾಸ ನಡೆಯಲಿದೆ’ ಎಂದು ತಿಳಿಸಿದರು.</p>.<p>‘ಯೋಗದಿನದಂದು ಮೈಸೂರಿನಲ್ಲಿಯೂ ಬೃಹತ್ ಕಾರ್ಯಕ್ರಮ ನಡೆಸಲಾಗುತ್ತಿದೆ. ‘ಯೋಗ ಮಹಾಕುಂಭ’ ಶೀರ್ಷಿಕೆಯಡಿ ಮೈಸೂರು ಅರಮನೆ ಮೈದಾನದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ, 15 ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ’ ಎಂದು ವಿವರಿಸಿದರು.</p>.<p><strong>ವರ್ಷವಿಡೀ ಯೋಗಾಭ್ಯಾಸ:</strong> ‘ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಜುಲೈ ಅಂತ್ಯದವರೆಗೂ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಈ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆ. ‘ಯೋಗ ಪಾರ್ಕ್’ ಕಾರ್ಯಕ್ರಮದಡಿ ಬೆಂಗಳೂರು ಹಾಗೂ ಜಿಲ್ಲೆಗಳಲ್ಲಿರುವ ಉದ್ಯಾನಗಳಲ್ಲಿ ಯೋಗ ಸಂಬಂಧಿ ಚಟುವಟಿಕೆಗಳನ್ನು ನಡೆಸಲಾಗುತ್ತದೆ. ಈ ಕಾರ್ಯಕ್ರಮ ವರ್ಷವಿಡೀ ನಡೆಯಲಿದೆ’ ಎಂದು ಸಚಿವರು ಹೇಳಿದರು. </p>.<p>‘ಹಸಿರು ಯೋಗ ಕಾರ್ಯಕ್ರಮದಡಿ ಅರಣ್ಯ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳ ಸಹಯೋಗದಲ್ಲಿ 5 ಲಕ್ಷ ಗಿಡಗಳನ್ನು ನೆಡುವ ಸಂಕಲ್ಪ ಮಾಡಲಾಗಿದೆ. ಶಾಲಾ–ಕಾಲೇಜು ವಿದ್ಯಾರ್ಥಿಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಸಹಕಾರದೊಂದಿಗೆ ಈ ಕಾರ್ಯ ಮಾಡಲಾಗುವುದು’ ಎಂದರು.</p>.<p>ಆಯುಷ್ ಇಲಾಖೆ ಆಯುಕ್ತ ವಿಪಿನ್ ಸಿಂಗ್ ಉಪಸ್ಥಿತರಿದ್ದರು.</p>.<p><strong>‘ಯೋಗ ಜಿಲ್ಲೆ ಪ್ರಸ್ತಾವ ಸಲ್ಲಿಕೆ’:</strong></p><p>‘ಮೈಸೂರನ್ನು ಯೋಗ ಜಿಲ್ಲೆಯೆಂದು ಘೋಷಿಸುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ಕ್ರಮವಹಿಸಿದ್ದೇವೆ. ಜಿಲ್ಲೆಯ ಪ್ರತಿಯೊಂದು ಮನೆಯವರೂ ಯೋಗಾಭ್ಯಾಸ ಮಾಡುವಂತಾಗಬೇಕು. ಮುಂದಿನ ಎರಡು ಮೂರು ವರ್ಷಗಳಲ್ಲಿ ಈ ಗುರಿ ಸಾಕಾರ ಮಾಡಲು ಕಾರ್ಯಕ್ರಮ ರೂಪಿಸುತ್ತಿದ್ದೇವೆ. ಇದು ಸಾಧ್ಯವಾದರೆ ದೇಶದ ಪ್ರಥಮ ಯೋಗ ಜಿಲ್ಲೆ ಮೈಸೂರು ಆಗಲಿದೆ. ಕರ್ನಾಟಕಕ್ಕೂ ಯೋಗಕ್ಕೂ ಹತ್ತಿರದ ಸಂಬಂಧವಿದೆ’ ಎಂದು ದಿನೇಶ್ ಗುಂಡೂರಾವ್ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಆಯುಷ್ ಇಲಾಖೆಯು ಇದೇ 21ರಂದು ಬೆಳಿಗ್ಗೆ 6ರಿಂದ 8 ಗಂಟೆವರೆಗೆ ರಾಜ್ಯದ ವಿವಿಧೆಡೆ ‘ಯೋಗ ಸಂಗಮ’ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಡಿ 5 ಲಕ್ಷಕ್ಕೂ ಅಧಿಕ ಮಂದಿ ಯೋಗಾಭ್ಯಾಸ ಮಾಡಲಿದ್ದಾರೆ. </p>.<p>ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ‘ಯೋಗ ದಿನಾಚರಣೆಯ ಮುಖ್ಯ ಕಾರ್ಯಕ್ರಮ ವಿಧಾನಸೌಧದ ಆವರಣದಲ್ಲಿ ನಡೆಯಲಿದೆ. ರಾಜ್ಯಪಾಲ ಥಾವರಚಂದ್ ಗೆಹಲೋತ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೆ ಸಚಿವರು, ಸಂಸದರು ಭಾಗವಹಿಸುತ್ತಾರೆ. ಚಲನಚಿತ್ರ ತಾರೆಯರಿಗೂ ಆಹ್ವಾನ ನೀಡಲಾಗಿದೆ. 7 ಗಂಟೆಯಿಂದ 7.45ರವರೆಗೆ ಯೋಗ ಪ್ರಾತ್ಯಕ್ಷಿಕೆ ನಡೆಯಲಿದೆ. ವಿಧಾನಸೌಧದ ಆವರಣದಲ್ಲಿ 3 ಸಾವಿರ ಮಂದಿ ಯೋಗಾಭ್ಯಾಸ ಮಾಡುತ್ತಾರೆ. ಇದೇ ವೇಳೆ ಜಿಲ್ಲೆ ಹಾಗೂ ತಾಲ್ಲೂಕು ಕೇಂದ್ರಗಳು, 360 ಆಯುಷ್ಮಾನ್ ಆರೋಗ್ಯ ಕೇಂದ್ರಗಳಲ್ಲಿ ಯೋಗಾಭ್ಯಾಸ ನಡೆಯಲಿದೆ’ ಎಂದು ತಿಳಿಸಿದರು.</p>.<p>‘ಯೋಗದಿನದಂದು ಮೈಸೂರಿನಲ್ಲಿಯೂ ಬೃಹತ್ ಕಾರ್ಯಕ್ರಮ ನಡೆಸಲಾಗುತ್ತಿದೆ. ‘ಯೋಗ ಮಹಾಕುಂಭ’ ಶೀರ್ಷಿಕೆಯಡಿ ಮೈಸೂರು ಅರಮನೆ ಮೈದಾನದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ, 15 ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ’ ಎಂದು ವಿವರಿಸಿದರು.</p>.<p><strong>ವರ್ಷವಿಡೀ ಯೋಗಾಭ್ಯಾಸ:</strong> ‘ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಜುಲೈ ಅಂತ್ಯದವರೆಗೂ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಈ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆ. ‘ಯೋಗ ಪಾರ್ಕ್’ ಕಾರ್ಯಕ್ರಮದಡಿ ಬೆಂಗಳೂರು ಹಾಗೂ ಜಿಲ್ಲೆಗಳಲ್ಲಿರುವ ಉದ್ಯಾನಗಳಲ್ಲಿ ಯೋಗ ಸಂಬಂಧಿ ಚಟುವಟಿಕೆಗಳನ್ನು ನಡೆಸಲಾಗುತ್ತದೆ. ಈ ಕಾರ್ಯಕ್ರಮ ವರ್ಷವಿಡೀ ನಡೆಯಲಿದೆ’ ಎಂದು ಸಚಿವರು ಹೇಳಿದರು. </p>.<p>‘ಹಸಿರು ಯೋಗ ಕಾರ್ಯಕ್ರಮದಡಿ ಅರಣ್ಯ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳ ಸಹಯೋಗದಲ್ಲಿ 5 ಲಕ್ಷ ಗಿಡಗಳನ್ನು ನೆಡುವ ಸಂಕಲ್ಪ ಮಾಡಲಾಗಿದೆ. ಶಾಲಾ–ಕಾಲೇಜು ವಿದ್ಯಾರ್ಥಿಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಸಹಕಾರದೊಂದಿಗೆ ಈ ಕಾರ್ಯ ಮಾಡಲಾಗುವುದು’ ಎಂದರು.</p>.<p>ಆಯುಷ್ ಇಲಾಖೆ ಆಯುಕ್ತ ವಿಪಿನ್ ಸಿಂಗ್ ಉಪಸ್ಥಿತರಿದ್ದರು.</p>.<p><strong>‘ಯೋಗ ಜಿಲ್ಲೆ ಪ್ರಸ್ತಾವ ಸಲ್ಲಿಕೆ’:</strong></p><p>‘ಮೈಸೂರನ್ನು ಯೋಗ ಜಿಲ್ಲೆಯೆಂದು ಘೋಷಿಸುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ಕ್ರಮವಹಿಸಿದ್ದೇವೆ. ಜಿಲ್ಲೆಯ ಪ್ರತಿಯೊಂದು ಮನೆಯವರೂ ಯೋಗಾಭ್ಯಾಸ ಮಾಡುವಂತಾಗಬೇಕು. ಮುಂದಿನ ಎರಡು ಮೂರು ವರ್ಷಗಳಲ್ಲಿ ಈ ಗುರಿ ಸಾಕಾರ ಮಾಡಲು ಕಾರ್ಯಕ್ರಮ ರೂಪಿಸುತ್ತಿದ್ದೇವೆ. ಇದು ಸಾಧ್ಯವಾದರೆ ದೇಶದ ಪ್ರಥಮ ಯೋಗ ಜಿಲ್ಲೆ ಮೈಸೂರು ಆಗಲಿದೆ. ಕರ್ನಾಟಕಕ್ಕೂ ಯೋಗಕ್ಕೂ ಹತ್ತಿರದ ಸಂಬಂಧವಿದೆ’ ಎಂದು ದಿನೇಶ್ ಗುಂಡೂರಾವ್ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>