ಪ್ರಕರಣದ ಪ್ರಮುಖ ಆರೋಪಿ ಶರತ್ಚಂದ್ರ ರೆಡ್ಡಿ ಹೇಳಿಕೆ ಆಧರಿಸಿ, ಪ್ರಕರಣಕ್ಕೆ ಸಂಬಂಧವಿರದ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ. ಕೇಜ್ರಿವಾಲ್ ವಿರುದ್ಧ ಹೇಳಿಕೆ ನೀಡಿದರೆ, ಚುನಾವಣಾ ಬಾಂಡ್ ಮೂಲಕ ಬಿಜೆಪಿಗೆ ದೇಣಿಗೆ ನೀಡಿದರೆ ಬಂಧಮುಕ್ತಗೊಳಿಸುವುದಾಗಿ ಪುಸಲಾಯಿಸಿ ಶರತ್ ಚಂದ್ರ ರೆಡ್ಡಿ ಅವರನ್ನು ಸಾಕ್ಷೀದಾರರನ್ನಾಗಿಸಲಾಗಿದೆ. ಶರತ್ ಚಂದ್ರ ರೆಡ್ಡಿ ಒಡೆತನದ ಕಂಪನಿ ಬಿಜೆಪಿಗೆ ಚುನಾವಣಾ ಬಾಂಡ್ ಮೂಲಕ ಕೋಟ್ಯಂತರ ರೂಪಾಯಿ ದೇಣಿಗೆ ನೀಡಿದೆ. ನಂತರ ಬೆನ್ನು ನೋವು ಎಂಬ ಯಃಕಶ್ಚಿತ್ ಕಾರಣಕ್ಕೆ ಪ್ರಮುಖ ಆರೋಪಿಯನ್ನೇ ಬಿಡುಗಡೆ ಮಾಡಲಾಗಿದೆ. ಈ ಅವ್ಯವಹಾರದಲ್ಲಿ ನೇರವಾಗಿ ಭಾಗಿಯಾಗಿರುವ ಬಿಜೆಪಿ ನಾಯಕರನ್ನು ಏಕೆ ಬಂಧಿಸಿಲ್ಲ? ಇದರ ರೂವಾರಿ ನರೇಂದ್ರ ಮೋದಿ ಅವರನ್ನು ಬಂಧಿಸಬೇಕಲ್ಲವೇ ಎಂದು ಚಂದ್ರು ಆಗ್ರಹಿಸಿದರು.