‘ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬಾರದು’ ಎಂದು ಆಗ್ರಹಿಸಿ ಕಾವೇರಿ ಜಲ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಇಂದು ಬೆಂಗಳೂರು ಬಂದ್ಗೆ ಕರೆ ನೀಡಲಾಗಿದೆ.
ಕಾವೇರಿ ಜಲ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಇಂದು ಬೆಂಗಳೂರು ಬಂದ್ಗೆ ಕರೆ ನೀಡಲಾಗಿದೆ. ಬಿಜೆಪಿ ಹಾಗೂ ಜೆಡಿಎಸ್ ಜತೆ, 50ಕ್ಕೂ ಹೆಚ್ಚು ಸಂಘಟನೆಗಳು ಬಂದ್ಗೆ ಬೆಂಬಲ ಸೂಚಿಸಿವೆ.
ಕರ್ನಾಟಕ ರಕ್ಷಣಾ ವೇದಿಕೆಯ ಟಿ.ಎ. ನಾರಾಯಣಗೌಡ ಬಣದಿಂದ ಇಂದು ಬೆಳಿಗ್ಗೆ ಪ್ರತ್ಯೇಕ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಗಾಂಧಿನಗರದಲ್ಲಿ ಇರುವ ಸಂಘಟನೆಯ ಕಚೇರಿಯಿಂದ ವಿಧಾನ ಸೌಧದವರೆಗೆ ಮೆರವಣಿಗೆ ನಡೆಸಿ, ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಕರವೇ ತಿಳಿಸಿದೆ.
‘ಕಾವೇರಿ ನದಿ ವಿಚಾರವಾಗಿ ನಮ್ಮ ಹೋರಾಟ ನಿರಂತರ. ಜನರಲ್ಲಿ ಜಾಗೃತಿ ಮೂಡಿಸುವುದು ಮೊದಲ ಆದ್ಯತೆ. ಬಂದ್ ಮಾಡಿ ಜನಸಾಮಾನ್ಯರಿಗೆ ತೊಂದರೆ ನೀಡುವ ಉದ್ದೇಶ ನಮಗಿಲ್ಲ. ಬಂದ್ ಎಂಬುದು ಹೋರಾಟದ ಕೊನೆಯ ಅಸ್ತ್ರ. ಹೀಗಾಗಿ, ಯಾವುದೇ ಬಂದ್ಗೆ ನಮ್ಮ ಬೆಂಬಲವಿಲ್ಲ’ ಎಂದು ಟಿ.ಎ. ನಾರಾಯಣಗೌಡ ತಿಳಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಬಿಎಂಟಿಸಿ ಬಸ್ ಸಂಚಾರ ಮತ್ತು ಮೆಟ್ರೊ ರೈಲು ಸಂಚಾರ ಎಂದಿನಂತೆ ಇದೆ.
ಬೆಂಗಳೂರು ಬಂದ್ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಬಳಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
ಬೆಂಗಳೂರು ನಗರದಲ್ಲಿ ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್ ಸಂಚಾರ ಮತ್ತು ಮೆಟ್ರೊ ರೈಲು ಸಂಚಾರ ಎಂದಿನಂತೆ ಇದೆ.