<p><strong>ಬೆಂಗಳೂರು:</strong> ಬೆಂಗಳೂರಿನಲ್ಲಿ ಸುಮಾರು 500 ಕಿ.ಮಿ. ರಸ್ತೆಯನ್ನು ₹4 ಸಾವಿರ ಕೋಟಿ ವೆಚ್ಚದಲ್ಲಿ ವೈಟ್ ಟ್ಯಾಪಿಂಗ್ ಮಾಡಲು ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ದಪಡಿಸುತ್ತಿದ್ದು, ಮುಂದಿನ ವಾರ ಅಂತಿಮಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.</p><p>ಗಾಂಧಿ ನಗರ ಕ್ಷೇತ್ರದ ಚಿಕ್ಕಪೇಟೆಯಲ್ಲಿ ವೈಟ್ ಟ್ಯಾಪಿಂಗ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಸಮಾರಂಭದಲ್ಲಿ ಅವರು ಮಾತನಾಡಿದರು.</p><p>ಈಗಾಗಲೇ ₹1800 ಕೋಟಿ ವೆಚ್ಚದಲ್ಲಿ 82 ರಸ್ತೆ ವೈಟ್ ಟ್ಯಾಪಿಂಗ್ ಗೆ ಯೋಜನೆ ಜಾರಿಯಲ್ಲಿದೆ. ಇದರಲ್ಲಿ 104 ಕಿ.ಮಿ. ಹೊಸ ರಸ್ತೆಯೂ ಸೇರಿದೆ. ಇದಲ್ಲದೇ ₹695 ಕೋಟಿ ವೆಚ್ಚದಲ್ಲಿ 350 ಕಿ.ಮಿ. ರಸ್ತೆ ಗುಂಡಿ ಮುಚ್ಚಲಾಗಿದೆ ಎಂದರು.</p><p>ಈಗಾಗಲೇ 10 ಸಾವಿರದಷ್ಟು ರಸ್ತೆ ಗುಂಡಿಗಳನ್ನು ಬೆಂಗಳೂರು ನಗರದಲ್ಲಿ ಮುಚ್ಚಿದ್ದೇವೆ. ಬಿಜೆಪಿ ಸರ್ಕಾರ ಇದ್ದಾಗ 20 ಸಾವಿರ ಗುಂಡಿ ಇದ್ದುದನ್ನು ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದ್ದರು. ನಾವು ಪ್ರಾಮಾಣಿಕವಾಗಿಯೇ ಬೆಂಗಳೂರು ಅಭಿವೃದ್ದಿಗೆ ಒತ್ತು ನೀಡುತ್ತಿದ್ದೇವೆ ಎಂದರು.</p><p>ಬೆಂಗಳೂರು ಅಭಿವೃದ್ದಿಗೆ ಮೋದಿ ಅವರು ಒಂದು ಪೈಸೆ ನೀಡಿಲ್ಲ. ಸಂಸದರೂ ಬೆಂಗಳೂರು ಪ್ರಗತಿ, ತೆರಿಗೆ ಹಂಚಿಕೆ ಅನ್ಯಾಯದ ಬಗ್ಗೆ ಕೇಳುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.</p>.ಬೆಂಗಳೂರು ಮೆಟ್ರೊಗೆ ಶೇ 87ರಷ್ಟು ಹಣ ಕೊಡುವುದು ನಾವೇ: ಮುಖ್ಯಮಂತ್ರಿ ಸಿದ್ದರಾಮಯ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರಿನಲ್ಲಿ ಸುಮಾರು 500 ಕಿ.ಮಿ. ರಸ್ತೆಯನ್ನು ₹4 ಸಾವಿರ ಕೋಟಿ ವೆಚ್ಚದಲ್ಲಿ ವೈಟ್ ಟ್ಯಾಪಿಂಗ್ ಮಾಡಲು ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ದಪಡಿಸುತ್ತಿದ್ದು, ಮುಂದಿನ ವಾರ ಅಂತಿಮಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.</p><p>ಗಾಂಧಿ ನಗರ ಕ್ಷೇತ್ರದ ಚಿಕ್ಕಪೇಟೆಯಲ್ಲಿ ವೈಟ್ ಟ್ಯಾಪಿಂಗ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಸಮಾರಂಭದಲ್ಲಿ ಅವರು ಮಾತನಾಡಿದರು.</p><p>ಈಗಾಗಲೇ ₹1800 ಕೋಟಿ ವೆಚ್ಚದಲ್ಲಿ 82 ರಸ್ತೆ ವೈಟ್ ಟ್ಯಾಪಿಂಗ್ ಗೆ ಯೋಜನೆ ಜಾರಿಯಲ್ಲಿದೆ. ಇದರಲ್ಲಿ 104 ಕಿ.ಮಿ. ಹೊಸ ರಸ್ತೆಯೂ ಸೇರಿದೆ. ಇದಲ್ಲದೇ ₹695 ಕೋಟಿ ವೆಚ್ಚದಲ್ಲಿ 350 ಕಿ.ಮಿ. ರಸ್ತೆ ಗುಂಡಿ ಮುಚ್ಚಲಾಗಿದೆ ಎಂದರು.</p><p>ಈಗಾಗಲೇ 10 ಸಾವಿರದಷ್ಟು ರಸ್ತೆ ಗುಂಡಿಗಳನ್ನು ಬೆಂಗಳೂರು ನಗರದಲ್ಲಿ ಮುಚ್ಚಿದ್ದೇವೆ. ಬಿಜೆಪಿ ಸರ್ಕಾರ ಇದ್ದಾಗ 20 ಸಾವಿರ ಗುಂಡಿ ಇದ್ದುದನ್ನು ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದ್ದರು. ನಾವು ಪ್ರಾಮಾಣಿಕವಾಗಿಯೇ ಬೆಂಗಳೂರು ಅಭಿವೃದ್ದಿಗೆ ಒತ್ತು ನೀಡುತ್ತಿದ್ದೇವೆ ಎಂದರು.</p><p>ಬೆಂಗಳೂರು ಅಭಿವೃದ್ದಿಗೆ ಮೋದಿ ಅವರು ಒಂದು ಪೈಸೆ ನೀಡಿಲ್ಲ. ಸಂಸದರೂ ಬೆಂಗಳೂರು ಪ್ರಗತಿ, ತೆರಿಗೆ ಹಂಚಿಕೆ ಅನ್ಯಾಯದ ಬಗ್ಗೆ ಕೇಳುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.</p>.ಬೆಂಗಳೂರು ಮೆಟ್ರೊಗೆ ಶೇ 87ರಷ್ಟು ಹಣ ಕೊಡುವುದು ನಾವೇ: ಮುಖ್ಯಮಂತ್ರಿ ಸಿದ್ದರಾಮಯ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>