<p><strong>ಬೆಂಗಳೂರು</strong>: ಕೆ.ಆರ್. ಪುರ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ವೃದ್ಧೆಯೊಬ್ಬರನ್ನು ಹತ್ಯೆ ಮಾಡಲಾಗಿದ್ದು, ಮೃತದೇಹವನ್ನು ತುಂಡರಿಸಿ ಡ್ರಮ್ನಲ್ಲಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ.</p>.<p>‘ನಿಸರ್ಗ ಲೇಔಟ್ನ ಸರೋಜಮ್ಮ (78) ಮೃತರು. ಇವರು ವಾಸವಿದ್ದ ಮನೆಯಿಂದ ಭಾನುವಾರ ದುರ್ವಾಸನೆ ಬರುತ್ತಿತ್ತು. ಅನುಮಾನಗೊಂಡ ಸ್ಥಳೀಯರು ಠಾಣೆಗೆ ಮಾಹಿತಿ ನೀಡಿದ್ದರು. ಮನೆಗೆ ಹೋಗಿ ಪರಿಶೀಲಿಸಿದಾಗ, ಡ್ರಮ್ನಲ್ಲಿ ಮೃತದೇಹ ಪತ್ತೆಯಾಗಿದೆ’ ಎಂದು ವೈಟ್ಫೀಲ್ಡ್ ವಿಭಾಗದ ಡಿಸಿಪಿ ಶಿವಕುಮಾರ್ ಗುಣಾರೆ ‘ಪ್ರಜಾವಾಣಿ‘ಗೆ ತಿಳಿಸಿದರು.</p>.<p>ಮೃತದೇಹ ತುಂಡರಿಸಿರುವ ಆರೋಪಿಗಳು: ‘ಸರೋಜಮ್ಮ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಮಗ, ಪ್ರತ್ಯೇಕವಾಗಿ ವಾಸವಿದ್ದಾರೆ. ಮಗಳ ಜೊತೆ ಸರೋಜಮ್ಮ ನೆಲೆಸಿದ್ದರು. ಇವರ ಕೊಲೆಗೆ ಕಾರಣವೇನು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ’ ಎಂದು ಪೊಲೀಸರು ಹೇಳಿದರು.</p>.<p>‘ಸರೋಜಮ್ಮ ಅವರನ್ನು ಎರಡು ದಿನಗಳ ಹಿಂದೆಯೇ ಕೊಲೆ ಮಾಡಿರುವ ಸಂಶಯವಿದೆ. ಕೊಲೆ ನಂತರ, ಮೃತದೇಹವನ್ನು ತುಂಡರಿಸಿ ಡ್ರಮ್ನಲ್ಲಿ ತುಂಬಿಟ್ಟಿರುವ ಅನುಮಾನವಿದೆ. ಪರಿಚಯಸ್ಥರೇ ಕೃತ್ಯ ಎಸಗಿರುವ ಮಾಹಿತಿ ಇದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ’ ಎಂದು ತಿಳಿಸಿದರು.</p>.<p>ಡ್ರಮ್ ಸಮೇತ ಆಸ್ಪತ್ರೆಗೆ ಸಾಗಣೆ: ‘ಮೃತದೇಹವನ್ನು ಹಲವು ಭಾಗಗಳಾಗಿ ತುಂಡರಿಸಿ ಡ್ರಮ್ನಲ್ಲಿಡಲಾಗಿದೆ. ಹೀಗಾಗಿ, ಡ್ರಮ್ ಸಮೇತ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ವರದಿ ಬಂದ ನಂತರ ಸಾವಿನ ಬಗ್ಗೆ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ’ ಎಂದರು.</p>.<p>‘ಆಸ್ತಿ ಹಾಗೂ ಕೌಟುಂಬಿಕ ವಿಚಾರಕ್ಕೆ ಕೊಲೆ ನಡೆದಿರುವ ಬಗ್ಗೆ ಸಂಶಯವಿದೆ. ಮಗಳು ಹಾಗೂ ಮಗನನ್ನೂ ವಿಚಾರಣೆಗೆ ಒಳಪಡಿಸಬೇಕಿದೆ’ ಎಂದು ಹೇಳಿದರು.</p>.<p>ಜನರಿಗೆ ಆತಂಕ: ವೃದ್ಧೆಯ ಮೃತದೇಹವನ್ನು ತುಂಡರಿಸಿ ಡ್ರಮ್ನಲ್ಲಿಟ್ಟಿದ್ದ ಮಾಹಿತಿ ತಿಳಿದ ಹತ್ತಿರದ ನಿವಾಸಿಗಳು ಮನೆ ಎದುರು ಜಮಾಯಿಸಿದ್ದರು.</p>.<p>‘ವೃದ್ಧೆಯನ್ನು ಅಮನುಷವಾಗಿ ಕೊಲೆ ಮಾಡಲಾಗಿದೆ. ಇದರಿಂದ ನಾವೆಲ್ಲರೂ ಆತಂಕಗೊಂಡಿದ್ದೇವೆ. ಆರೋಪಿಗಳನ್ನು ಪೊಲೀಸರು ತ್ವರಿತವಾಗಿ ಬಂಧಿಸಬೇಕು’ ಎಂದು ಅವರು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೆ.ಆರ್. ಪುರ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ವೃದ್ಧೆಯೊಬ್ಬರನ್ನು ಹತ್ಯೆ ಮಾಡಲಾಗಿದ್ದು, ಮೃತದೇಹವನ್ನು ತುಂಡರಿಸಿ ಡ್ರಮ್ನಲ್ಲಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ.</p>.<p>‘ನಿಸರ್ಗ ಲೇಔಟ್ನ ಸರೋಜಮ್ಮ (78) ಮೃತರು. ಇವರು ವಾಸವಿದ್ದ ಮನೆಯಿಂದ ಭಾನುವಾರ ದುರ್ವಾಸನೆ ಬರುತ್ತಿತ್ತು. ಅನುಮಾನಗೊಂಡ ಸ್ಥಳೀಯರು ಠಾಣೆಗೆ ಮಾಹಿತಿ ನೀಡಿದ್ದರು. ಮನೆಗೆ ಹೋಗಿ ಪರಿಶೀಲಿಸಿದಾಗ, ಡ್ರಮ್ನಲ್ಲಿ ಮೃತದೇಹ ಪತ್ತೆಯಾಗಿದೆ’ ಎಂದು ವೈಟ್ಫೀಲ್ಡ್ ವಿಭಾಗದ ಡಿಸಿಪಿ ಶಿವಕುಮಾರ್ ಗುಣಾರೆ ‘ಪ್ರಜಾವಾಣಿ‘ಗೆ ತಿಳಿಸಿದರು.</p>.<p>ಮೃತದೇಹ ತುಂಡರಿಸಿರುವ ಆರೋಪಿಗಳು: ‘ಸರೋಜಮ್ಮ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಮಗ, ಪ್ರತ್ಯೇಕವಾಗಿ ವಾಸವಿದ್ದಾರೆ. ಮಗಳ ಜೊತೆ ಸರೋಜಮ್ಮ ನೆಲೆಸಿದ್ದರು. ಇವರ ಕೊಲೆಗೆ ಕಾರಣವೇನು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ’ ಎಂದು ಪೊಲೀಸರು ಹೇಳಿದರು.</p>.<p>‘ಸರೋಜಮ್ಮ ಅವರನ್ನು ಎರಡು ದಿನಗಳ ಹಿಂದೆಯೇ ಕೊಲೆ ಮಾಡಿರುವ ಸಂಶಯವಿದೆ. ಕೊಲೆ ನಂತರ, ಮೃತದೇಹವನ್ನು ತುಂಡರಿಸಿ ಡ್ರಮ್ನಲ್ಲಿ ತುಂಬಿಟ್ಟಿರುವ ಅನುಮಾನವಿದೆ. ಪರಿಚಯಸ್ಥರೇ ಕೃತ್ಯ ಎಸಗಿರುವ ಮಾಹಿತಿ ಇದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ’ ಎಂದು ತಿಳಿಸಿದರು.</p>.<p>ಡ್ರಮ್ ಸಮೇತ ಆಸ್ಪತ್ರೆಗೆ ಸಾಗಣೆ: ‘ಮೃತದೇಹವನ್ನು ಹಲವು ಭಾಗಗಳಾಗಿ ತುಂಡರಿಸಿ ಡ್ರಮ್ನಲ್ಲಿಡಲಾಗಿದೆ. ಹೀಗಾಗಿ, ಡ್ರಮ್ ಸಮೇತ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ವರದಿ ಬಂದ ನಂತರ ಸಾವಿನ ಬಗ್ಗೆ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ’ ಎಂದರು.</p>.<p>‘ಆಸ್ತಿ ಹಾಗೂ ಕೌಟುಂಬಿಕ ವಿಚಾರಕ್ಕೆ ಕೊಲೆ ನಡೆದಿರುವ ಬಗ್ಗೆ ಸಂಶಯವಿದೆ. ಮಗಳು ಹಾಗೂ ಮಗನನ್ನೂ ವಿಚಾರಣೆಗೆ ಒಳಪಡಿಸಬೇಕಿದೆ’ ಎಂದು ಹೇಳಿದರು.</p>.<p>ಜನರಿಗೆ ಆತಂಕ: ವೃದ್ಧೆಯ ಮೃತದೇಹವನ್ನು ತುಂಡರಿಸಿ ಡ್ರಮ್ನಲ್ಲಿಟ್ಟಿದ್ದ ಮಾಹಿತಿ ತಿಳಿದ ಹತ್ತಿರದ ನಿವಾಸಿಗಳು ಮನೆ ಎದುರು ಜಮಾಯಿಸಿದ್ದರು.</p>.<p>‘ವೃದ್ಧೆಯನ್ನು ಅಮನುಷವಾಗಿ ಕೊಲೆ ಮಾಡಲಾಗಿದೆ. ಇದರಿಂದ ನಾವೆಲ್ಲರೂ ಆತಂಕಗೊಂಡಿದ್ದೇವೆ. ಆರೋಪಿಗಳನ್ನು ಪೊಲೀಸರು ತ್ವರಿತವಾಗಿ ಬಂಧಿಸಬೇಕು’ ಎಂದು ಅವರು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>