<p><strong>ಬೆಂಗಳೂರು</strong>: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದ ವಿಚಾರಣಾಧಿಕಾರಿ, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಶುಕ್ರವಾರ ಪ್ರತ್ಯಕ್ಷದರ್ಶಿಗಳು ಹಾಗೂ ಸಾರ್ವಜನಿಕರ ಹೇಳಿಕೆಯನ್ನು ದಾಖಲಿಸಿಕೊಂಡರು.</p>.<p>ಕಾಲ್ತುಳಿತ ಘಟನೆ ನೋಡಿದ್ದ ಕೆಲವರು ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ವಿಶೇಷ ನ್ಯಾಯಾಲಯಕ್ಕೆ ಬಂದು, ಲಿಖಿತ ಹೇಳಿಕೆ ನೀಡಿದರು. ಕ್ರೀಡಾಂಗಣ ಸೇರಿದಂತೆ ವಿವಿಧ ಕಡೆ ಬಂದೋಬಸ್ತ್ ಕೈಗೊಂಡಿದ್ದ ಕಬ್ಬನ್ ಪಾರ್ಕ್ ಟ್ರಾಫಿಕ್ ಇನ್ಸ್ಪೆಕ್ಟರ್ ಬಿ.ರವಿ ಅವರು ಹೇಳಿಕೆ ದಾಖಲಿಸಿದರು.</p>.<p>ಆರ್ಸಿಬಿ ವಿಜಯೋತ್ಸವ ವೇಳೆ ಎಷ್ಟು ಸಿಬ್ಬಂದಿ ನಿಯೋಜಿಸಲಾಗಿತ್ತು? ಯಾವ ವೃತ್ತ, ರಸ್ತೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಲಿದ್ದಾರೆ ಎಂಬ ಬಗ್ಗೆ ಗುರುತಿಸಲಾಗಿತ್ತು? ಎಂದು ಪ್ರಶ್ನಿಸಲಾಯಿತು.</p>.<p>ಜಿಲ್ಲಾಧಿಕಾರಿ ಜಿ.ಜಗದೀಶ್ ಶುಕ್ರವಾರ ಮತ್ತೆ ಡಿಎನ್ಎ ಎಂಟರ್ಟೈನ್ಮೆಂಟ್ ಸಂಸ್ಥೆಯ ಭದ್ರತಾ ವಿಭಾಗದ ವ್ಯವಸ್ಥಾಪಕ ಸತೀಶ್ ಅವರನ್ನು ಒಂದು ತಾಸಿಗೂ ಹೆಚ್ಚು ವಿಚಾರಣೆ ನಡೆಸಿದರು.</p>.<p>‘ಕ್ರೀಡಾಂಗಣದ ಬಳಿ 585 ಡಿಎನ್ಎ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿತ್ತು. ಪೊಲೀಸರು, ಬಂದೋಬಸ್ತ್ ನಡೆಸಿದ್ದ ಕ್ರೀಡಾಂಗಣದ ಹೊರಗಿನ ಗೇಟ್ಗಳಲ್ಲಿ ಘಟನೆ ನಡೆದಿದೆ‘ ಎಂದು ಸತೀಶ್ ಹೇಳಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>‘ಡಿಎನ್ಎ ಕಂಪನಿಯ ಮುಖ್ಯಸ್ಥರು ಹಾಗೂ ಸಿಬ್ಬಂದಿ ವಿಚಾರಣೆ ಬಹುತೇಕ ಮುಗಿದಿದೆ. ಈವರೆಗೆ ತನಿಖಾಧಿಕಾರಿಗಳು ನೀಡಿರುವ ಎಲ್ಲ ನೋಟಿಸ್ಗೆ ಹಾಜರಾಗಿ ಹೇಳಿಕೆ ದಾಖಲಿಸಲಾಗಿದೆ’ ಎಂದು ಡಿಎನ್ಎ ಪರ ವಕೀಲರಾದ ನಿಮಿಷಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದ ವಿಚಾರಣಾಧಿಕಾರಿ, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಶುಕ್ರವಾರ ಪ್ರತ್ಯಕ್ಷದರ್ಶಿಗಳು ಹಾಗೂ ಸಾರ್ವಜನಿಕರ ಹೇಳಿಕೆಯನ್ನು ದಾಖಲಿಸಿಕೊಂಡರು.</p>.<p>ಕಾಲ್ತುಳಿತ ಘಟನೆ ನೋಡಿದ್ದ ಕೆಲವರು ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ವಿಶೇಷ ನ್ಯಾಯಾಲಯಕ್ಕೆ ಬಂದು, ಲಿಖಿತ ಹೇಳಿಕೆ ನೀಡಿದರು. ಕ್ರೀಡಾಂಗಣ ಸೇರಿದಂತೆ ವಿವಿಧ ಕಡೆ ಬಂದೋಬಸ್ತ್ ಕೈಗೊಂಡಿದ್ದ ಕಬ್ಬನ್ ಪಾರ್ಕ್ ಟ್ರಾಫಿಕ್ ಇನ್ಸ್ಪೆಕ್ಟರ್ ಬಿ.ರವಿ ಅವರು ಹೇಳಿಕೆ ದಾಖಲಿಸಿದರು.</p>.<p>ಆರ್ಸಿಬಿ ವಿಜಯೋತ್ಸವ ವೇಳೆ ಎಷ್ಟು ಸಿಬ್ಬಂದಿ ನಿಯೋಜಿಸಲಾಗಿತ್ತು? ಯಾವ ವೃತ್ತ, ರಸ್ತೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಲಿದ್ದಾರೆ ಎಂಬ ಬಗ್ಗೆ ಗುರುತಿಸಲಾಗಿತ್ತು? ಎಂದು ಪ್ರಶ್ನಿಸಲಾಯಿತು.</p>.<p>ಜಿಲ್ಲಾಧಿಕಾರಿ ಜಿ.ಜಗದೀಶ್ ಶುಕ್ರವಾರ ಮತ್ತೆ ಡಿಎನ್ಎ ಎಂಟರ್ಟೈನ್ಮೆಂಟ್ ಸಂಸ್ಥೆಯ ಭದ್ರತಾ ವಿಭಾಗದ ವ್ಯವಸ್ಥಾಪಕ ಸತೀಶ್ ಅವರನ್ನು ಒಂದು ತಾಸಿಗೂ ಹೆಚ್ಚು ವಿಚಾರಣೆ ನಡೆಸಿದರು.</p>.<p>‘ಕ್ರೀಡಾಂಗಣದ ಬಳಿ 585 ಡಿಎನ್ಎ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿತ್ತು. ಪೊಲೀಸರು, ಬಂದೋಬಸ್ತ್ ನಡೆಸಿದ್ದ ಕ್ರೀಡಾಂಗಣದ ಹೊರಗಿನ ಗೇಟ್ಗಳಲ್ಲಿ ಘಟನೆ ನಡೆದಿದೆ‘ ಎಂದು ಸತೀಶ್ ಹೇಳಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>‘ಡಿಎನ್ಎ ಕಂಪನಿಯ ಮುಖ್ಯಸ್ಥರು ಹಾಗೂ ಸಿಬ್ಬಂದಿ ವಿಚಾರಣೆ ಬಹುತೇಕ ಮುಗಿದಿದೆ. ಈವರೆಗೆ ತನಿಖಾಧಿಕಾರಿಗಳು ನೀಡಿರುವ ಎಲ್ಲ ನೋಟಿಸ್ಗೆ ಹಾಜರಾಗಿ ಹೇಳಿಕೆ ದಾಖಲಿಸಲಾಗಿದೆ’ ಎಂದು ಡಿಎನ್ಎ ಪರ ವಕೀಲರಾದ ನಿಮಿಷಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>