<p><strong>ಬೆಂಗಳೂರು</strong>: ರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ವ್ಹೀಲಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಆರೋಪಿಗಳನ್ನು ಪೂರ್ವ ವಿಭಾಗದ ಪೊಲೀಸರು ಬಂಧಿಸಿದ್ದಾರೆ.</p>.<p>ನಯೀಂ ಪಾಷಾ, ಅರಾಫತ್, ಸಾಹಿಲ್ ಹುಸೇನ್, ನಜ್ಮತ್, ಅದ್ನಾನ್ ಪಾಷಾ, ನಿಯಾಮತ್ ಉಲ್ಲಾ ಸೇರಿದಂತೆ 11 ಆರೋಪಿಗಳನ್ನು ಬಂಧಿಸಿ, ಏಳು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೂರ್ವ ವಿಭಾಗದ ಡಿಸಿಪಿ ಡಿ.ದೇವರಾಜ್ ತಿಳಿಸಿದ್ದಾರೆ.</p>.<p>ಆರೋಪಿಗಳು ಫೆಬ್ರುವರಿ 13ರಂದು ರೀಲ್ಸ್ಗಾಗಿ ಮಾರಕಾಸ್ತ್ರ ಹಿಡಿದು, ತ್ರಿಬಲ್ ರೈಡ್, ವ್ಹೀಲಿ ಮಾಡುತ್ತಾ ಕೆ.ಜಿ ಹಳ್ಳಿಯಿಂದ, ಡಿ.ಜೆ ಹಳ್ಳಿ, ರಾಮಮೂರ್ತಿ ನಗರ ಮಾರ್ಗವಾಗಿ ಹೊಸಕೋಟೆ ಟೋಲ್ವರೆಗೂ ಹೋಗಿದ್ದರು. ಅದೇ ರೀತಿ ಕೆ.ಜಿ ಹಳ್ಳಿಗೆ ವಾಪಸ್ ಆಗಿದ್ದರು.</p>.<p>ಆರೋಪಿಗಳ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಡಿ.ಜೆ.ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ. ಅವರ ಹೆಸರನ್ನು ರೌಡಿಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ನಡುರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ವ್ಹೀಲಿ ಮಾಡಿರುವ ವಿಡಿಯೊವನ್ನು ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.</p>.<div><blockquote>ಕೆಲವು ಪುಂಡರು ಲಾಂಗ್ ಹಿಡಿದುಕೊಂಡು ಬೈಕ್ ವ್ಹೀಲಿ ನಡೆಸುವುದನ್ನು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದೇನೆ.</blockquote><span class="attribution">–ಜಿ.ಪರಮೇಶ್ವರ, ಗೃಹ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ವ್ಹೀಲಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಆರೋಪಿಗಳನ್ನು ಪೂರ್ವ ವಿಭಾಗದ ಪೊಲೀಸರು ಬಂಧಿಸಿದ್ದಾರೆ.</p>.<p>ನಯೀಂ ಪಾಷಾ, ಅರಾಫತ್, ಸಾಹಿಲ್ ಹುಸೇನ್, ನಜ್ಮತ್, ಅದ್ನಾನ್ ಪಾಷಾ, ನಿಯಾಮತ್ ಉಲ್ಲಾ ಸೇರಿದಂತೆ 11 ಆರೋಪಿಗಳನ್ನು ಬಂಧಿಸಿ, ಏಳು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೂರ್ವ ವಿಭಾಗದ ಡಿಸಿಪಿ ಡಿ.ದೇವರಾಜ್ ತಿಳಿಸಿದ್ದಾರೆ.</p>.<p>ಆರೋಪಿಗಳು ಫೆಬ್ರುವರಿ 13ರಂದು ರೀಲ್ಸ್ಗಾಗಿ ಮಾರಕಾಸ್ತ್ರ ಹಿಡಿದು, ತ್ರಿಬಲ್ ರೈಡ್, ವ್ಹೀಲಿ ಮಾಡುತ್ತಾ ಕೆ.ಜಿ ಹಳ್ಳಿಯಿಂದ, ಡಿ.ಜೆ ಹಳ್ಳಿ, ರಾಮಮೂರ್ತಿ ನಗರ ಮಾರ್ಗವಾಗಿ ಹೊಸಕೋಟೆ ಟೋಲ್ವರೆಗೂ ಹೋಗಿದ್ದರು. ಅದೇ ರೀತಿ ಕೆ.ಜಿ ಹಳ್ಳಿಗೆ ವಾಪಸ್ ಆಗಿದ್ದರು.</p>.<p>ಆರೋಪಿಗಳ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಡಿ.ಜೆ.ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ. ಅವರ ಹೆಸರನ್ನು ರೌಡಿಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ನಡುರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ವ್ಹೀಲಿ ಮಾಡಿರುವ ವಿಡಿಯೊವನ್ನು ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.</p>.<div><blockquote>ಕೆಲವು ಪುಂಡರು ಲಾಂಗ್ ಹಿಡಿದುಕೊಂಡು ಬೈಕ್ ವ್ಹೀಲಿ ನಡೆಸುವುದನ್ನು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದೇನೆ.</blockquote><span class="attribution">–ಜಿ.ಪರಮೇಶ್ವರ, ಗೃಹ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>