<p><strong>ಬೆಂಗಳೂರು:</strong> ಸಂಜಯ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಸ್ ನಿಲ್ದಾಣದ ಬಳಿ ನಿಂತಿದ್ದ ಸಿಬಿಐ ಕಚೇರಿಯ ಹೆಡ್ ಕಾನ್ಸ್ಟೆಬಲ್ ಕೈಯಲ್ಲಿದ್ದ ಮೊಬೈಲ್ ಕಿತ್ತುಕೊಂಡು ಕಳ್ಳರಿಬ್ಬರು ಪರಾರಿಯಾಗಿದ್ದಾರೆ.</p>.<p>ಗಂಗಾ ನಗರ ನಿವಾಸಿ, ಹೆಡ್ಕಾನ್ಸ್ಟೆಬಲ್ ಎನ್.ಕೃಷ್ಣ ಅವರು ನೀಡಿದ ದೂರಿನ ಮೇಲೆ ಅಪರಿಚಿತರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು, ತನಿಖೆ ಕೈಗೊಳ್ಳಲಾಗಿದೆ. <br><br>ಕೆಲಸದ ನಿಮಿತ್ತ ದೆಹಲಿಗೆ ತೆರಳಲು ಎನ್.ಕೃಷ್ಣ ಅವರು ಫೆಬ್ರುವರಿ 16ರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಸಿ.ಬಿ.ಎಸ್ ಬಸ್ ಸ್ಟಾಪ್ ಹತ್ತಿರ ನಿಂತಿದ್ದರು. ಬಸ್ ಬರಲು ತಡವಾದ ಕಾರಣ ಟ್ಯಾಕ್ಸಿ ಬುಕ್ ಮಾಡಲು ಮೊಬೈಲ್ ಹೊರ ತೆಗೆಯುತ್ತಿದ್ದಂತೆ ಬೈಕ್ನಲ್ಲಿ ಬಂದ ಅಪರಿಚಿತರಿಬ್ಬರು ಕೈಯಲ್ಲಿದ್ದ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದರು. </p>.<p>ರಸ್ತೆಯಲ್ಲಿ ಹೋಗುತ್ತಿದ್ದ ಬೇರೆಯವರ ಮೊಬೈಲ್ ಪಡೆದು ಪೊಲೀಸ್ ಸಹಾಯವಾಣಿ 112ಕ್ಕೆ ಕರೆ ಮಾಡಿ ದೂರು ದಾಖಲಿಸಿದ್ದಾರೆ. ದೆಹಲಿಯಿಂದ ವಾಪಸ್ ಬಂದ ಬಳಿಕ ಫೆಬ್ರುವರಿ 19ರಂದು ಠಾಣೆಗೆ ಬಂದು, ಮೊಬೈಲ್ ಕಿತ್ತುಕೊಂಡು ಹೋಗಿರುವ ಅಪರಿಚಿತರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಂಜಯ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಸ್ ನಿಲ್ದಾಣದ ಬಳಿ ನಿಂತಿದ್ದ ಸಿಬಿಐ ಕಚೇರಿಯ ಹೆಡ್ ಕಾನ್ಸ್ಟೆಬಲ್ ಕೈಯಲ್ಲಿದ್ದ ಮೊಬೈಲ್ ಕಿತ್ತುಕೊಂಡು ಕಳ್ಳರಿಬ್ಬರು ಪರಾರಿಯಾಗಿದ್ದಾರೆ.</p>.<p>ಗಂಗಾ ನಗರ ನಿವಾಸಿ, ಹೆಡ್ಕಾನ್ಸ್ಟೆಬಲ್ ಎನ್.ಕೃಷ್ಣ ಅವರು ನೀಡಿದ ದೂರಿನ ಮೇಲೆ ಅಪರಿಚಿತರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು, ತನಿಖೆ ಕೈಗೊಳ್ಳಲಾಗಿದೆ. <br><br>ಕೆಲಸದ ನಿಮಿತ್ತ ದೆಹಲಿಗೆ ತೆರಳಲು ಎನ್.ಕೃಷ್ಣ ಅವರು ಫೆಬ್ರುವರಿ 16ರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಸಿ.ಬಿ.ಎಸ್ ಬಸ್ ಸ್ಟಾಪ್ ಹತ್ತಿರ ನಿಂತಿದ್ದರು. ಬಸ್ ಬರಲು ತಡವಾದ ಕಾರಣ ಟ್ಯಾಕ್ಸಿ ಬುಕ್ ಮಾಡಲು ಮೊಬೈಲ್ ಹೊರ ತೆಗೆಯುತ್ತಿದ್ದಂತೆ ಬೈಕ್ನಲ್ಲಿ ಬಂದ ಅಪರಿಚಿತರಿಬ್ಬರು ಕೈಯಲ್ಲಿದ್ದ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದರು. </p>.<p>ರಸ್ತೆಯಲ್ಲಿ ಹೋಗುತ್ತಿದ್ದ ಬೇರೆಯವರ ಮೊಬೈಲ್ ಪಡೆದು ಪೊಲೀಸ್ ಸಹಾಯವಾಣಿ 112ಕ್ಕೆ ಕರೆ ಮಾಡಿ ದೂರು ದಾಖಲಿಸಿದ್ದಾರೆ. ದೆಹಲಿಯಿಂದ ವಾಪಸ್ ಬಂದ ಬಳಿಕ ಫೆಬ್ರುವರಿ 19ರಂದು ಠಾಣೆಗೆ ಬಂದು, ಮೊಬೈಲ್ ಕಿತ್ತುಕೊಂಡು ಹೋಗಿರುವ ಅಪರಿಚಿತರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>