<p><strong>ಬೆಂಗಳೂರು:</strong> ಐಡಿಬಿಐ ಬ್ಯಾಂಕ್ನಿಂದ ಪಡೆದಿದ್ದ ಸಾಲ ಮರು ಪಾವತಿ ಮಾಡದಿದ್ದಕ್ಕಾಗಿ ನಿರ್ದೇಶಕ ಎಸ್. ನಾರಾಯಣ ಅವರನ್ನು ಶುಕ್ರವಾರ ಮಧ್ಯಾಹ್ನ ಬಂಧಿಸಿದ್ದ ಬಸವೇಶ್ವರ ನಗರ ಪೊಲೀಸರು, ನ್ಯಾಯಾಲಯದ ಜಾಮೀನು ಮೇರೆಗೆ ಸಂಜೆ ಬಿಡುಗಡೆ ಮಾಡಿದ್ದಾರೆ.</p>.<p>‘ನಾರಾಯಣ್ ಅವರು ಬ್ಯಾಂಕ್ನಿಂದ ₹ 3 ಕೋಟಿ ಸಾಲ ಪಡೆದಿದ್ದರು. ನಿಗದಿತ ಸಮಯಕ್ಕೆ ಮರು ಪಾವತಿ ಮಾಡಿರಲಿಲ್ಲ. ಅಸಲು ಹಾಗೂ ಬಡ್ಡಿ ಸೇರಿ ಸಾಲದ ಮೊತ್ತ ₹ 10 ಕೋಟಿ ಆಗಿತ್ತು. ಬ್ಯಾಂಕ್ನವರು ನೋಟಿಸ್ ನೀಡಿದರೂ ಸಾಲ ಕಟ್ಟಿರಲಿಲ್ಲ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ಬ್ಯಾಂಕ್ ಅಧಿಕಾರಿಗಳು, ಸಾಲ ವಸೂಲಾತಿ ನ್ಯಾಯಾಧೀಕರಣದಲ್ಲಿ ಮೊಕದ್ದಮೆ ಹೂಡಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಧೀಕರಣ, ನಾರಾಯಣ ಅವರ ಬಂಧನಕ್ಕೆ ವಾರಂಟ್ ಜಾರಿ ಮಾಡಿತ್ತು. ಶುಕ್ರವಾರ ಅವರನ್ನು ಬಂಧಿಸಿ ನ್ಯಾಯಾಲಯದ ಎದುರು ಹಾಜರುಪಡಿಸಲಾಯಿತು. ಅಲ್ಲಿಯೇ ಅವರಿಗೆ ಜಾಮೀನು ಸಿಕ್ಕಿತು’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಐಡಿಬಿಐ ಬ್ಯಾಂಕ್ನಿಂದ ಪಡೆದಿದ್ದ ಸಾಲ ಮರು ಪಾವತಿ ಮಾಡದಿದ್ದಕ್ಕಾಗಿ ನಿರ್ದೇಶಕ ಎಸ್. ನಾರಾಯಣ ಅವರನ್ನು ಶುಕ್ರವಾರ ಮಧ್ಯಾಹ್ನ ಬಂಧಿಸಿದ್ದ ಬಸವೇಶ್ವರ ನಗರ ಪೊಲೀಸರು, ನ್ಯಾಯಾಲಯದ ಜಾಮೀನು ಮೇರೆಗೆ ಸಂಜೆ ಬಿಡುಗಡೆ ಮಾಡಿದ್ದಾರೆ.</p>.<p>‘ನಾರಾಯಣ್ ಅವರು ಬ್ಯಾಂಕ್ನಿಂದ ₹ 3 ಕೋಟಿ ಸಾಲ ಪಡೆದಿದ್ದರು. ನಿಗದಿತ ಸಮಯಕ್ಕೆ ಮರು ಪಾವತಿ ಮಾಡಿರಲಿಲ್ಲ. ಅಸಲು ಹಾಗೂ ಬಡ್ಡಿ ಸೇರಿ ಸಾಲದ ಮೊತ್ತ ₹ 10 ಕೋಟಿ ಆಗಿತ್ತು. ಬ್ಯಾಂಕ್ನವರು ನೋಟಿಸ್ ನೀಡಿದರೂ ಸಾಲ ಕಟ್ಟಿರಲಿಲ್ಲ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ಬ್ಯಾಂಕ್ ಅಧಿಕಾರಿಗಳು, ಸಾಲ ವಸೂಲಾತಿ ನ್ಯಾಯಾಧೀಕರಣದಲ್ಲಿ ಮೊಕದ್ದಮೆ ಹೂಡಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಧೀಕರಣ, ನಾರಾಯಣ ಅವರ ಬಂಧನಕ್ಕೆ ವಾರಂಟ್ ಜಾರಿ ಮಾಡಿತ್ತು. ಶುಕ್ರವಾರ ಅವರನ್ನು ಬಂಧಿಸಿ ನ್ಯಾಯಾಲಯದ ಎದುರು ಹಾಜರುಪಡಿಸಲಾಯಿತು. ಅಲ್ಲಿಯೇ ಅವರಿಗೆ ಜಾಮೀನು ಸಿಕ್ಕಿತು’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>