<p><strong>ದೇವನಹಳ್ಳಿ:</strong> ದೆಹಲಿಯ ಕೆಂಪು ಕೋಟೆ ಬಳಿ ಸ್ಫೋಟದ ಬಳಿಕ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಎರಡೂ ಟರ್ಮಿನಲ್ನಲ್ಲಿ ಭಾರಿ ಕಟ್ಟೆಚ್ಚರ ವಹಿಸಲಾಗಿದೆ.</p>.<p>ವಿಮಾನ ನಿಲ್ದಾಣದ ಭದ್ರತಾ ಹೊಣೆ ಹೊತ್ತಿರುವ ಕೇಂದ್ರ ಕೈಗಾರಿಕ ಭದ್ರತಾ ಪಡೆಯ(ಸಿಐಎಸ್ಎಫ್) ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.</p>.<p>ರಾಜ್ಯ ಪೊಲೀಸರು ವಿಮಾನ ನಿಲ್ದಾಣದ ಸುತ್ತಮುತ್ತ ಅಹಿತಕರ ಘಟನೆ ನಡೆಯದಂತೆ ಕಣ್ಣಿಟ್ಟಿದ್ದಾರೆ. ಪ್ರತಿ ಅರ್ಧ ತಾಸಿಗೊಮ್ಮೆ ಶ್ವಾನದಳದಿಂದ ಯಾವ ಮೂಲೆ ಬಿಡದಂತೆ ತಪಾಸಣೆ ಮಾಡಲಾಗುತ್ತಿದೆ.</p>.<p>ಟರ್ಮಿನಲ್ಗಳಲ್ಲಿ ಅನಾಮಧೇಯ ವಸ್ತುಗಳು ಕಂಡು ಬಂದರೆ ಕೂಡಲೇ ಬಾಂಬ್ ನಿಷ್ಕ್ರೀಯ ದಳದಿಂದ ತಪಾಸಣೆ ಮಾಡಲಾಗುತ್ತಿದೆ. ಚೆಕ್ ಪೋಸ್ಟ್ಗಳ ಸಂಖ್ಯೆ ಹೆಚ್ಚಿಸಲಾಗಿದೆ.</p>.<p>ಸಿಸಿಟಿವಿ ಕ್ಯಾಮೆರಾ ಮೂಲಕ ನಿರಂತರ ನಿಗಾ ವಹಿಸಲು ಕಂಟ್ರೋಲ್ ರೂಂ ಸಿಬ್ಬಂದಿಯನ್ನು ಹೆಚ್ಚಿಸಲಾಗಿದೆ. ಪ್ರಯಾಣಿಕರನ್ನು ಬೀಳ್ಕೊಡಲು ಬರುವ, ಇಲ್ಲವೇ ಸ್ವಾಗತಿಸಲು ಬರುವವರನ್ನು ಹೆಚ್ಚು ಹೊತ್ತು ಟರ್ಮಿನಲ್ಗಳಲ್ಲಿ ನಿಲ್ಲದಂತೆ ಭದ್ರತಾ ಸಿಬ್ಬಂದಿ ಎಚ್ಚರಿಕೆ ನೀಡುತ್ತಿದ್ದಾರೆ.</p>.<p>ಪ್ರಯಾಣಿಕರನ್ನು ಬಿಡಲು ಇಲ್ಲವೇ ಕರೆದೊಯ್ಯಲು ಬರುವ ಟ್ಯಾಕ್ಸಿ ಹಾಗೂ ಖಾಸಗಿ ವಾಹನಗಳನ್ನು ನಿಲುಗಡೆ ಸ್ಥಳದಲ್ಲಿ ಐದು ನಿಮಿಷಕ್ಕೂ ಹೆಚ್ಚು ನಿಲ್ಲಲು ಅವಕಾಶ ನೀಡುತ್ತಿಲ್ಲ. </p>.<p>ಬಸ್ ನಿಲ್ದಾಣ, ವಾಹನ ನಿಲ್ದಾಣಗಳಲ್ಲಿ ಶಸ್ತ್ರಸಜ್ಜಿತ ಭದ್ರತಾ ಸಿಬ್ಬಂದಿ 24 ಗಂಟೆಯೂ ಗಸ್ತು ತಿರುಗುತ್ತಿದ್ದಾರೆ. ಅನುಮಾನಾಸ್ಪದ ವ್ಯಕ್ತಿಗಳ ಚಲನವಲನಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong> ದೆಹಲಿಯ ಕೆಂಪು ಕೋಟೆ ಬಳಿ ಸ್ಫೋಟದ ಬಳಿಕ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಎರಡೂ ಟರ್ಮಿನಲ್ನಲ್ಲಿ ಭಾರಿ ಕಟ್ಟೆಚ್ಚರ ವಹಿಸಲಾಗಿದೆ.</p>.<p>ವಿಮಾನ ನಿಲ್ದಾಣದ ಭದ್ರತಾ ಹೊಣೆ ಹೊತ್ತಿರುವ ಕೇಂದ್ರ ಕೈಗಾರಿಕ ಭದ್ರತಾ ಪಡೆಯ(ಸಿಐಎಸ್ಎಫ್) ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.</p>.<p>ರಾಜ್ಯ ಪೊಲೀಸರು ವಿಮಾನ ನಿಲ್ದಾಣದ ಸುತ್ತಮುತ್ತ ಅಹಿತಕರ ಘಟನೆ ನಡೆಯದಂತೆ ಕಣ್ಣಿಟ್ಟಿದ್ದಾರೆ. ಪ್ರತಿ ಅರ್ಧ ತಾಸಿಗೊಮ್ಮೆ ಶ್ವಾನದಳದಿಂದ ಯಾವ ಮೂಲೆ ಬಿಡದಂತೆ ತಪಾಸಣೆ ಮಾಡಲಾಗುತ್ತಿದೆ.</p>.<p>ಟರ್ಮಿನಲ್ಗಳಲ್ಲಿ ಅನಾಮಧೇಯ ವಸ್ತುಗಳು ಕಂಡು ಬಂದರೆ ಕೂಡಲೇ ಬಾಂಬ್ ನಿಷ್ಕ್ರೀಯ ದಳದಿಂದ ತಪಾಸಣೆ ಮಾಡಲಾಗುತ್ತಿದೆ. ಚೆಕ್ ಪೋಸ್ಟ್ಗಳ ಸಂಖ್ಯೆ ಹೆಚ್ಚಿಸಲಾಗಿದೆ.</p>.<p>ಸಿಸಿಟಿವಿ ಕ್ಯಾಮೆರಾ ಮೂಲಕ ನಿರಂತರ ನಿಗಾ ವಹಿಸಲು ಕಂಟ್ರೋಲ್ ರೂಂ ಸಿಬ್ಬಂದಿಯನ್ನು ಹೆಚ್ಚಿಸಲಾಗಿದೆ. ಪ್ರಯಾಣಿಕರನ್ನು ಬೀಳ್ಕೊಡಲು ಬರುವ, ಇಲ್ಲವೇ ಸ್ವಾಗತಿಸಲು ಬರುವವರನ್ನು ಹೆಚ್ಚು ಹೊತ್ತು ಟರ್ಮಿನಲ್ಗಳಲ್ಲಿ ನಿಲ್ಲದಂತೆ ಭದ್ರತಾ ಸಿಬ್ಬಂದಿ ಎಚ್ಚರಿಕೆ ನೀಡುತ್ತಿದ್ದಾರೆ.</p>.<p>ಪ್ರಯಾಣಿಕರನ್ನು ಬಿಡಲು ಇಲ್ಲವೇ ಕರೆದೊಯ್ಯಲು ಬರುವ ಟ್ಯಾಕ್ಸಿ ಹಾಗೂ ಖಾಸಗಿ ವಾಹನಗಳನ್ನು ನಿಲುಗಡೆ ಸ್ಥಳದಲ್ಲಿ ಐದು ನಿಮಿಷಕ್ಕೂ ಹೆಚ್ಚು ನಿಲ್ಲಲು ಅವಕಾಶ ನೀಡುತ್ತಿಲ್ಲ. </p>.<p>ಬಸ್ ನಿಲ್ದಾಣ, ವಾಹನ ನಿಲ್ದಾಣಗಳಲ್ಲಿ ಶಸ್ತ್ರಸಜ್ಜಿತ ಭದ್ರತಾ ಸಿಬ್ಬಂದಿ 24 ಗಂಟೆಯೂ ಗಸ್ತು ತಿರುಗುತ್ತಿದ್ದಾರೆ. ಅನುಮಾನಾಸ್ಪದ ವ್ಯಕ್ತಿಗಳ ಚಲನವಲನಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>