ಪ್ರಾಧಿಕಾರದ ಪತ್ರದಿಂದ ಎಚ್ಚೆತ್ತುಕೊಂಡ ವಿಮಾನ ನಿಲ್ದಾಣದ ಅಧಿಕಾರಿಗಳು ತಮ್ಮ ಲಾಂಛನದಲ್ಲಿ ಕನ್ನಡ ಭಾಷೆಯನ್ನು ಬಳಸಿದ್ದಾರೆ. ಈ ಬಗ್ಗೆ ಪ್ರಾಧಿಕಾರಕ್ಕೆ ಪತ್ರ ಬರೆದಿರುವ ನಿಲ್ದಾಣದ ಅಧಿಕಾರಿ ದಿನೇಶ್ ಕುಮಾರ್, ’ಕನ್ನಡ ಭಾಷೆ ಬೆಳವಣಿಗೆ, ಇಲ್ಲಿನ ಸಂಸ್ಕೃತಿ ಉಳಿವಿಗೆ ನಾವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜತೆ ಕೆಲಸ ಮಾಡಲಿದ್ದೇವೆ. ಮುಂದಿನ ನಮ್ಮ ಯಾವುದೇ ಕಾರ್ಯಕ್ರಮ ಹಾಗೂ ಪತ್ರ ವ್ಯವಹಾರದಲ್ಲಿ ಹೆಚ್ಚಾಗಿ ಕನ್ನಡ ಭಾಷೆಯನ್ನೇ ಬಳಸಲಾಗುವುದು. ಅಲ್ಲದೆ, ನಿಲ್ದಾಣದ ಪ್ರತಿ ಸೂಚನಾ ಫಲಕಗಳನ್ನು ಕನ್ನಡದಲ್ಲಿ ಬರೆಸಲಾಗುವುದು, ಸಾಮಾಜಿಕ ಜಾಲತಾಣದಲ್ಲಿಯೂ ಕನ್ನಡವನ್ನು ಬಳಕೆ ಮಾಡುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.