<p><strong>ಬೆಂಗಳೂರು:</strong> ಮನೆ ಮಾಲೀಕರ ಕಣ್ತಪ್ಪಿಸಿ ಆಭರಣಗಳನ್ನು ಕಳ್ಳತನ ಮಾಡಿ ಮಧ್ಯಪ್ರದೇಶಕ್ಕೆ ಪರಾರಿಯಾಗಿದ್ದ ಆರೋಪಿಯನ್ನು ಬೆಳ್ಳಂದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಶಾಹಡೋಲ್ ಜಿಲ್ಲೆಯ ನಿವಾಸಿ ಪಂಕಜ್ ಕುಮಾರ್ ಮಿಶ್ರ (28) ಎಂಬಾತನನ್ನು ಬಂಧಿಸಿ, ₹12 ಲಕ್ಷ ಮೌಲ್ಯದ 141 ಗ್ರಾಂ. ತೂಕದ ಚಿನ್ನಾಭರಣ ಜಪ್ತಿ ಮಾಡಲಾಗಿದೆ.</p>.<p>ಸರ್ಜಾಪುರ ಮುಖ್ಯರಸ್ತೆಯಲ್ಲಿರುವ ಪುಷ್ಕರ ಅವರು <strong>ಎರಡು ವರ್ಷಗಳ ಹಿಂದೆ</strong> ಮನೆ ಕೆಲಸಕ್ಕೆ ಪಂಕಜ್ನನ್ನು ನೇಮಕ ಮಾಡಿಕೊಂಡಿದ್ದರು. ಕೆಲಸದ ನಿಮಿತ್ತ ಹೊರಗೆ ಹೋಗಿದ್ದ ಮಾಲೀಕರು, ವಾಪಸ್ ಬಂದಾಗ ಆರೋಪಿ ಮನೆಯಲ್ಲಿ ಇರಲಿಲ್ಲ. ಅನುಮಾನಗೊಂಡು ಬೀರು ತೆರೆದು ನೋಡಿದಾಗ ಆಭರಣ ನಾಪತ್ತೆಯಾಗಿದ್ದವು. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು.</p>.<p>ಪ್ರಕರಣ ದಾಖಲಿಸಿಕೊಂಡು ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡ ಪೊಲೀಸರಿಗೆ, ಮಧ್ಯಪ್ರದೇಶದಲ್ಲಿ ಆರೋಪಿ ತಲೆಮರೆಸಿಕೊಂಡಿರುವುದು ಗೊತ್ತಾಯಿತು. ಜಯದ್ಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಹೋಟೆಲ್ನಲ್ಲಿ ಕೆಲಸಕ್ಕಿದ್ದ ಆರೋಪಿಯನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿದಾಗ ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದರು.</p>.<p>ಈತ ಪಿಯುಸಿ ಓದಿದ್ದು, ಮನೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಕಳವು ಆಭರಣಗಳನ್ನು ಮಣಪ್ಪುರಂ ಗೋಲ್ಡ್ಗೆ ಮಾರಾಟ ಮಾಡಲಾಗಿತ್ತು. ಆಭರಣಗಳನ್ನು ಜಪ್ತಿ ಮಾಡಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮನೆ ಮಾಲೀಕರ ಕಣ್ತಪ್ಪಿಸಿ ಆಭರಣಗಳನ್ನು ಕಳ್ಳತನ ಮಾಡಿ ಮಧ್ಯಪ್ರದೇಶಕ್ಕೆ ಪರಾರಿಯಾಗಿದ್ದ ಆರೋಪಿಯನ್ನು ಬೆಳ್ಳಂದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಶಾಹಡೋಲ್ ಜಿಲ್ಲೆಯ ನಿವಾಸಿ ಪಂಕಜ್ ಕುಮಾರ್ ಮಿಶ್ರ (28) ಎಂಬಾತನನ್ನು ಬಂಧಿಸಿ, ₹12 ಲಕ್ಷ ಮೌಲ್ಯದ 141 ಗ್ರಾಂ. ತೂಕದ ಚಿನ್ನಾಭರಣ ಜಪ್ತಿ ಮಾಡಲಾಗಿದೆ.</p>.<p>ಸರ್ಜಾಪುರ ಮುಖ್ಯರಸ್ತೆಯಲ್ಲಿರುವ ಪುಷ್ಕರ ಅವರು <strong>ಎರಡು ವರ್ಷಗಳ ಹಿಂದೆ</strong> ಮನೆ ಕೆಲಸಕ್ಕೆ ಪಂಕಜ್ನನ್ನು ನೇಮಕ ಮಾಡಿಕೊಂಡಿದ್ದರು. ಕೆಲಸದ ನಿಮಿತ್ತ ಹೊರಗೆ ಹೋಗಿದ್ದ ಮಾಲೀಕರು, ವಾಪಸ್ ಬಂದಾಗ ಆರೋಪಿ ಮನೆಯಲ್ಲಿ ಇರಲಿಲ್ಲ. ಅನುಮಾನಗೊಂಡು ಬೀರು ತೆರೆದು ನೋಡಿದಾಗ ಆಭರಣ ನಾಪತ್ತೆಯಾಗಿದ್ದವು. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು.</p>.<p>ಪ್ರಕರಣ ದಾಖಲಿಸಿಕೊಂಡು ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡ ಪೊಲೀಸರಿಗೆ, ಮಧ್ಯಪ್ರದೇಶದಲ್ಲಿ ಆರೋಪಿ ತಲೆಮರೆಸಿಕೊಂಡಿರುವುದು ಗೊತ್ತಾಯಿತು. ಜಯದ್ಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಹೋಟೆಲ್ನಲ್ಲಿ ಕೆಲಸಕ್ಕಿದ್ದ ಆರೋಪಿಯನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿದಾಗ ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದರು.</p>.<p>ಈತ ಪಿಯುಸಿ ಓದಿದ್ದು, ಮನೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಕಳವು ಆಭರಣಗಳನ್ನು ಮಣಪ್ಪುರಂ ಗೋಲ್ಡ್ಗೆ ಮಾರಾಟ ಮಾಡಲಾಗಿತ್ತು. ಆಭರಣಗಳನ್ನು ಜಪ್ತಿ ಮಾಡಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>