<p><strong>ಬೆಂಗಳೂರು:</strong> ನಟ ಯಶ್ ಅವರ ಜನ್ಮದಿನಾಚರಣೆಯ ಸಂದರ್ಭದಲ್ಲಿ ಬ್ಯಾನರ್ ಹಾಕಿದ್ದಕ್ಕೆ ಸಂಬಂಧಿಸಿದಂತೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p><p>ಜಿ.ಎಸ್ ಕ್ರಿಯೇಷನ್ಸ್ ಹಾಗೂ ವೇಣು ಗ್ರೂಪ್ಸ್ ವಿರುದ್ಧ ಪ್ರಕರಣ ದಾಖಲಾಗಿದೆ.</p><p>ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಸಂತನಗರ ಉಪ ವಿಭಾಗದ ಸಹಾಯಕ ಎಂಜಿನಿಯರ್ ಪೂಜಾರಪ್ಪ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.</p><p>‘ಚಾಲುಕ್ಯ ವೃತ್ತದಿಂದ ವಿಂಡ್ಸರ್ ಮ್ಯಾನರ್ ವೃತ್ತದ ವರೆಗೆ ಗಾಲ್ಫ್ ಕ್ಲಬ್ ಗೋಡೆಯ ಮೇಲೆ ಜಿಎಸ್ ಕ್ರಿಯೇಷನ್ಸ್ ಹಾಗೂ ವೇಣು ಗ್ರೂಪ್ಸ್ನವರು ನಟ ಯಶ್ ಅವರ ಜನ್ಮದಿನದ ಪ್ರಯುಕ್ತ ಅವರ ಭಾವಚಿತ್ರವುಳ್ಳ ಬಂಟಿಂಗ್ಸ್/ಬ್ಯಾನರ್ಗಳನ್ನು ಅನಧಿಕೃತವಾಗಿ ಅಂಟಿಸಲಾಗಿತ್ತು. ಯಾವುದೇ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆದುಕೊಂಡಿಲ್ಲ. ಅಲ್ಲದೇ ನಗರದ ಸೌಂದರ್ಯವನ್ನು ವಿರೂಪಗೊಳಿಸುವ ಉದ್ದೇಶದಿಂದ ಬ್ಯಾನರ್ ಅಳವಡಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ’ ಎಂಬುದಾಗಿ ಕೋರಿ ನೀಡಿದ ದೂರು ಆಧರಿಸಿ ಎಫ್ಐಆರ್ ದಾಖಲು ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಟ ಯಶ್ ಅವರ ಜನ್ಮದಿನಾಚರಣೆಯ ಸಂದರ್ಭದಲ್ಲಿ ಬ್ಯಾನರ್ ಹಾಕಿದ್ದಕ್ಕೆ ಸಂಬಂಧಿಸಿದಂತೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p><p>ಜಿ.ಎಸ್ ಕ್ರಿಯೇಷನ್ಸ್ ಹಾಗೂ ವೇಣು ಗ್ರೂಪ್ಸ್ ವಿರುದ್ಧ ಪ್ರಕರಣ ದಾಖಲಾಗಿದೆ.</p><p>ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಸಂತನಗರ ಉಪ ವಿಭಾಗದ ಸಹಾಯಕ ಎಂಜಿನಿಯರ್ ಪೂಜಾರಪ್ಪ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.</p><p>‘ಚಾಲುಕ್ಯ ವೃತ್ತದಿಂದ ವಿಂಡ್ಸರ್ ಮ್ಯಾನರ್ ವೃತ್ತದ ವರೆಗೆ ಗಾಲ್ಫ್ ಕ್ಲಬ್ ಗೋಡೆಯ ಮೇಲೆ ಜಿಎಸ್ ಕ್ರಿಯೇಷನ್ಸ್ ಹಾಗೂ ವೇಣು ಗ್ರೂಪ್ಸ್ನವರು ನಟ ಯಶ್ ಅವರ ಜನ್ಮದಿನದ ಪ್ರಯುಕ್ತ ಅವರ ಭಾವಚಿತ್ರವುಳ್ಳ ಬಂಟಿಂಗ್ಸ್/ಬ್ಯಾನರ್ಗಳನ್ನು ಅನಧಿಕೃತವಾಗಿ ಅಂಟಿಸಲಾಗಿತ್ತು. ಯಾವುದೇ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆದುಕೊಂಡಿಲ್ಲ. ಅಲ್ಲದೇ ನಗರದ ಸೌಂದರ್ಯವನ್ನು ವಿರೂಪಗೊಳಿಸುವ ಉದ್ದೇಶದಿಂದ ಬ್ಯಾನರ್ ಅಳವಡಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ’ ಎಂಬುದಾಗಿ ಕೋರಿ ನೀಡಿದ ದೂರು ಆಧರಿಸಿ ಎಫ್ಐಆರ್ ದಾಖಲು ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>