<p><strong>ಬೀದರ್</strong>: ಮೃತ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಅವರಿಗೆ ಸೇರಿದ ಭಾಲ್ಕಿ ತಾಲ್ಲೂಕಿನ ಕಟ್ಟಿತೂಗಾಂವ್ ಗ್ರಾಮಕ್ಕೆ ಸಿಐಡಿ ಡಿಐಜಿಪಿ ಶಾಂತನು ಸಿನ್ಹಾ ಅವರು ಮಂಗಳವಾರ ಭೇಟಿ ನೀಡಿದರು.</p>.<p>ಸಚಿನ್ ಆತ್ಮಹತ್ಯೆಗೂ ಮುನ್ನ ಬರೆದ ಡೆತ್ನೋಟ್, ಪೊಲೀಸರಿಗೆ ದೂರು ಕೊಡಲು ಹೋದಾಗ ನಡೆದುಕೊಂಡ ರೀತಿಯನ್ನು ವಿಚಾರಿಸಿ ಮಾಹಿತಿ ಪಡೆದರು. ಸುಮಾರು 30 ನಿಮಿಷಕ್ಕೂ ಹೆಚ್ಚು ಕಾಲ ಕುಟುಂಬದವರನ್ನು ವಿಚಾರಿಸಿದರು ಎಂದು ಗೊತ್ತಾಗಿದೆ.</p><p>ಇದಕ್ಕೂ ಮುನ್ನ ಅವರು ಸಚಿನ್ ಆತ್ಮಹತ್ಯೆ ಮಾಡಿಕೊಂಡ ಬೀದರ್–ಹೈದರಾಬಾದ್ ಮಾರ್ಗದ ರೈಲು ಹಳಿಗೆ ಭೇಟಿ ಕೊಟ್ಟು ಪರಿಶೀಲಿಸಿದರು. ಆನಂತರ ರೈಲ್ವೆ ಪೊಲೀಸರು ಹಾಗೂ ಸಿಐಡಿ ಡಿವೈಎಸ್ಪಿ ಸುಲೇಮಾನ್ ತಹಶೀಲ್ದಾರ್ ಅವರ ಘಟನೆ ಸಂಬಂಧ ಸಂಪೂರ್ಣ ಮಾಹಿತಿ ಪಡೆದರು.</p><p>ತನಿಖೆ ಹೇಗೆ ನಡೆಯುತ್ತಿದೆ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ, ತನಿಖೆ ಪ್ರಗತಿಯಲ್ಲಿದೆ. ಇದರ ಬಗ್ಗೆ ನಾನೇನೂ ಮಾತನಾಡಲಾರೆ ಎಂದು ಹೇಳಿ ಮಾಹಿತಿ ಹಂಚಿಕೊಳ್ಳಲು ನಿರಾಕರಿಸಿದರು.</p><p>ತನಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿ ಸಚಿನ್ ಅವರು ಡೆತ್ನೋಟ್ ಬರೆದಿಟ್ಟು ಡಿ. 26ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಒಂಬತ್ತು ಜನರ ವಿರುದ್ಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಮೃತ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಅವರಿಗೆ ಸೇರಿದ ಭಾಲ್ಕಿ ತಾಲ್ಲೂಕಿನ ಕಟ್ಟಿತೂಗಾಂವ್ ಗ್ರಾಮಕ್ಕೆ ಸಿಐಡಿ ಡಿಐಜಿಪಿ ಶಾಂತನು ಸಿನ್ಹಾ ಅವರು ಮಂಗಳವಾರ ಭೇಟಿ ನೀಡಿದರು.</p>.<p>ಸಚಿನ್ ಆತ್ಮಹತ್ಯೆಗೂ ಮುನ್ನ ಬರೆದ ಡೆತ್ನೋಟ್, ಪೊಲೀಸರಿಗೆ ದೂರು ಕೊಡಲು ಹೋದಾಗ ನಡೆದುಕೊಂಡ ರೀತಿಯನ್ನು ವಿಚಾರಿಸಿ ಮಾಹಿತಿ ಪಡೆದರು. ಸುಮಾರು 30 ನಿಮಿಷಕ್ಕೂ ಹೆಚ್ಚು ಕಾಲ ಕುಟುಂಬದವರನ್ನು ವಿಚಾರಿಸಿದರು ಎಂದು ಗೊತ್ತಾಗಿದೆ.</p><p>ಇದಕ್ಕೂ ಮುನ್ನ ಅವರು ಸಚಿನ್ ಆತ್ಮಹತ್ಯೆ ಮಾಡಿಕೊಂಡ ಬೀದರ್–ಹೈದರಾಬಾದ್ ಮಾರ್ಗದ ರೈಲು ಹಳಿಗೆ ಭೇಟಿ ಕೊಟ್ಟು ಪರಿಶೀಲಿಸಿದರು. ಆನಂತರ ರೈಲ್ವೆ ಪೊಲೀಸರು ಹಾಗೂ ಸಿಐಡಿ ಡಿವೈಎಸ್ಪಿ ಸುಲೇಮಾನ್ ತಹಶೀಲ್ದಾರ್ ಅವರ ಘಟನೆ ಸಂಬಂಧ ಸಂಪೂರ್ಣ ಮಾಹಿತಿ ಪಡೆದರು.</p><p>ತನಿಖೆ ಹೇಗೆ ನಡೆಯುತ್ತಿದೆ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ, ತನಿಖೆ ಪ್ರಗತಿಯಲ್ಲಿದೆ. ಇದರ ಬಗ್ಗೆ ನಾನೇನೂ ಮಾತನಾಡಲಾರೆ ಎಂದು ಹೇಳಿ ಮಾಹಿತಿ ಹಂಚಿಕೊಳ್ಳಲು ನಿರಾಕರಿಸಿದರು.</p><p>ತನಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿ ಸಚಿನ್ ಅವರು ಡೆತ್ನೋಟ್ ಬರೆದಿಟ್ಟು ಡಿ. 26ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಒಂಬತ್ತು ಜನರ ವಿರುದ್ಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>