ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡ್ಲುಪೇಟೆ: ಬಿಸಿಲಿನ ಝಳಕ್ಕೆ ನೀರಿಗಿಳಿದ ಹುಲಿ

Published 14 ಮಾರ್ಚ್ 2024, 15:39 IST
Last Updated 14 ಮಾರ್ಚ್ 2024, 15:39 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಹುಲಿಯೊಂದು ಬಿಸಿಲಿನ ಝಳ ತಾಳಲಾರದೆ ಕೆರೆಗೆ ಇಳಿದು ಮೈ ತಣಿಸಿಕೊಂಡಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಹರಿದಾಡುತ್ತಿದೆ.

ಬೇಸಿಗೆ ಹಿನ್ನೆಲೆಯಲ್ಲಿ ಬಂಡೀಪುರ ರಾಷ್ಟ್ರೀಯ ಅಭಯಾರಣ್ಯವು ಸಂಪೂರ್ಣ ಒಣಗಿ ಬೋಳಾಗಿ ನಿಂತಿದೆ. ತಾಪಮಾನ ಹೆಚ್ಚಿರುವ ಕಾರಣ ಬಿಸಿಲು ನೆತ್ತಿ ಸುಡುತ್ತಿದ್ದು, ಬಂಡೀಪುರದ ಹಲವು ಕೆರೆ-ಕಟ್ಟೆಗಳಲ್ಲಿ ನೀರು ಕಡಿಮೆಯಾಗುತ್ತ ಬಂದಿದೆ. ಈ ಮಧ್ಯೆ, ಹುಲಿರಾಯ ಬೇಸಿಗೆಯ ಬಿಸಿಲಿನಿಂದ ಪಾರಾಗಲು ಕೆರೆಗೆ ಇಳಿದಿತ್ತು.

ಈ ದೃಶ್ಯವನ್ನು ಬಂಡೀಪುರಕ್ಕೆ ಸಫಾರಿಗೆ ತೆರಳಿದ್ದ ಪ್ರವಾಸಿಗರೊಬ್ಬರು ಸೆರೆ ಹಿಡಿದು ಸಾಮಾಜಿಕ ತಾಣದಲ್ಲಿ ಹರಿಬಿಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT