<p><strong>ಮಹದೇಶ್ವರ ಬೆಟ್ಟ (ಚಾಮರಾಜನಗರ ಜಿಲ್ಲೆ):</strong> ಇಲ್ಲಿನ ಜೇನುಮಲೆ ಹಾಗೂ ವಜ್ರಮಲೆ ಅತಿಥಿಗೃಹಗಳ ಎದುರಿನ ಖಾಲಿ ಜಾಗದಲ್ಲಿ ಹಾಕಿರುವ ಜರ್ಮನ್ ಟೆಂಟ್ನಲ್ಲಿ ಗುರುವಾರ ಸಚಿವ ಸಂಪುಟ ಸಭೆ ಆರಂಭವಾಗಿದೆ.</p><p>ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಂಪುಟ ಸಹೋದ್ಯೋಗಿಗಳು ಪಾಲ್ಗೊಂಡಿದ್ದಾರೆ.</p><p>ಸಭೆಯ ಆರಂಭದಲ್ಲಿ, ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಗೆ ಬಲಿಯಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.</p><p>ಚಾಮರಾಜನಗರ ಹಾಗೂ ಈ ಭಾಗದ ಜಿಲ್ಲೆಗಳ ಅಭಿವೃದ್ಧಿಗೆ ಯೋಜನೆ ಮತ್ತು ಅನುದಾನ ನಿರೀಕ್ಷಿಸಲಾಗಿದೆ.</p><p><strong>ಜರ್ಮನ್ ಟೆಂಟ್ನಲ್ಲಿ ನಡೆದ ಮೊದಲ ಸಭೆ!</strong></p><p>ಸಚಿವ ಸಂಪುಟ ಸಭೆಯನ್ನು ಇಲ್ಲಿ ಇದೇ ಮೊದಲ ಬಾರಿಗೆ ಜರ್ಮನ್ ಟೆಂಟ್ನಲ್ಲಿ ನಡೆಸುತ್ತಿರುವುದು ವಿಶೇಷವಾಗಿದೆ. ಟೆಂಟ್ ಪ್ರವೇಶ ದ್ವಾರವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು.</p><p><strong>ಮೂರು ಬಾರಿ ಮುಂದೂಡಿಕೆಯಾಗಿತ್ತು:</strong> ಇಲ್ಲಿ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಣಿಸಿಕೊಂಡಿದ್ದ ಮಂಡಿನೋವು ಸೇರಿದಂತೆ ವಿವಿಧ ಕಾರಣದಿಂದಾಗಿ ಮುಂದೂಡಿಕೆ ಮಾಡಲಾಗಿತ್ತು. ನಾಲ್ಕನೇ ಬಾರಿಗೆ ಸಾಕಾರಗೊಂಡಿತು.</p><p>ಮೊದಲಿಗೆ ದೀಪದಗಿರಿಒಡ್ಡಿನಲ್ಲಿ ನಡೆಸಲು ನಿರ್ಧಾರ ಮಾಡಲಾಗಿತ್ತು. ಅಲ್ಲಿ ತಯಾರಿಯನ್ನೂ ಮಾಡಿಕೊಳ್ಳಲಾಗಿತ್ತು. ಆದರೆ, ಎತ್ತರದ ಆ ಪ್ರದೇಶದಲ್ಲಿ ಗಾಳಿಯು ಜೋರಾಗಿ ಬೀಸುವುದರಿಂದ ಟೆಂಟ್ಗೆ ಹಾನಿಯಾಗುವ ಸಾಧ್ಯತೆ ಹಾಗೂ ಮಳೆ ಬಂದರೆ ತೀವ್ರ ತೊಂದರೆ ಆಗುತ್ತದೆಂಬ ಕಾರಣದಿಂದಾಗಿ ಜೇನುಮಲೆ ಹಾಗೂ ವಜ್ರಮಲೆ ಎದುರಿನ ಖಾಲಿ ಜಾಗವನ್ನು ಆಯ್ಕೆ ಮಾಡಿಕೊಳ್ಳಲಾಯಿತು. ಅಲ್ಲಿ ಹಾಕಿರುವ ಜರ್ಮನ್ ಟೆಂಟ್ನಲ್ಲಿ ಸಭೆ ನಡೆಸಲಾಗುತ್ತಿದೆ.</p>.ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ: ವರನಟ ಡಾ.ರಾಜಕುಮಾರ್ಗೆ ಗೌರವ.ಧಾರ್ಮಿಕ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಿದ್ದು ಕಾಂಗ್ರೆಸ್ ಸರ್ಕಾರವಷ್ಟೇ: ಡಿಕೆಶಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹದೇಶ್ವರ ಬೆಟ್ಟ (ಚಾಮರಾಜನಗರ ಜಿಲ್ಲೆ):</strong> ಇಲ್ಲಿನ ಜೇನುಮಲೆ ಹಾಗೂ ವಜ್ರಮಲೆ ಅತಿಥಿಗೃಹಗಳ ಎದುರಿನ ಖಾಲಿ ಜಾಗದಲ್ಲಿ ಹಾಕಿರುವ ಜರ್ಮನ್ ಟೆಂಟ್ನಲ್ಲಿ ಗುರುವಾರ ಸಚಿವ ಸಂಪುಟ ಸಭೆ ಆರಂಭವಾಗಿದೆ.</p><p>ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಂಪುಟ ಸಹೋದ್ಯೋಗಿಗಳು ಪಾಲ್ಗೊಂಡಿದ್ದಾರೆ.</p><p>ಸಭೆಯ ಆರಂಭದಲ್ಲಿ, ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಗೆ ಬಲಿಯಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.</p><p>ಚಾಮರಾಜನಗರ ಹಾಗೂ ಈ ಭಾಗದ ಜಿಲ್ಲೆಗಳ ಅಭಿವೃದ್ಧಿಗೆ ಯೋಜನೆ ಮತ್ತು ಅನುದಾನ ನಿರೀಕ್ಷಿಸಲಾಗಿದೆ.</p><p><strong>ಜರ್ಮನ್ ಟೆಂಟ್ನಲ್ಲಿ ನಡೆದ ಮೊದಲ ಸಭೆ!</strong></p><p>ಸಚಿವ ಸಂಪುಟ ಸಭೆಯನ್ನು ಇಲ್ಲಿ ಇದೇ ಮೊದಲ ಬಾರಿಗೆ ಜರ್ಮನ್ ಟೆಂಟ್ನಲ್ಲಿ ನಡೆಸುತ್ತಿರುವುದು ವಿಶೇಷವಾಗಿದೆ. ಟೆಂಟ್ ಪ್ರವೇಶ ದ್ವಾರವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು.</p><p><strong>ಮೂರು ಬಾರಿ ಮುಂದೂಡಿಕೆಯಾಗಿತ್ತು:</strong> ಇಲ್ಲಿ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಣಿಸಿಕೊಂಡಿದ್ದ ಮಂಡಿನೋವು ಸೇರಿದಂತೆ ವಿವಿಧ ಕಾರಣದಿಂದಾಗಿ ಮುಂದೂಡಿಕೆ ಮಾಡಲಾಗಿತ್ತು. ನಾಲ್ಕನೇ ಬಾರಿಗೆ ಸಾಕಾರಗೊಂಡಿತು.</p><p>ಮೊದಲಿಗೆ ದೀಪದಗಿರಿಒಡ್ಡಿನಲ್ಲಿ ನಡೆಸಲು ನಿರ್ಧಾರ ಮಾಡಲಾಗಿತ್ತು. ಅಲ್ಲಿ ತಯಾರಿಯನ್ನೂ ಮಾಡಿಕೊಳ್ಳಲಾಗಿತ್ತು. ಆದರೆ, ಎತ್ತರದ ಆ ಪ್ರದೇಶದಲ್ಲಿ ಗಾಳಿಯು ಜೋರಾಗಿ ಬೀಸುವುದರಿಂದ ಟೆಂಟ್ಗೆ ಹಾನಿಯಾಗುವ ಸಾಧ್ಯತೆ ಹಾಗೂ ಮಳೆ ಬಂದರೆ ತೀವ್ರ ತೊಂದರೆ ಆಗುತ್ತದೆಂಬ ಕಾರಣದಿಂದಾಗಿ ಜೇನುಮಲೆ ಹಾಗೂ ವಜ್ರಮಲೆ ಎದುರಿನ ಖಾಲಿ ಜಾಗವನ್ನು ಆಯ್ಕೆ ಮಾಡಿಕೊಳ್ಳಲಾಯಿತು. ಅಲ್ಲಿ ಹಾಕಿರುವ ಜರ್ಮನ್ ಟೆಂಟ್ನಲ್ಲಿ ಸಭೆ ನಡೆಸಲಾಗುತ್ತಿದೆ.</p>.ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ: ವರನಟ ಡಾ.ರಾಜಕುಮಾರ್ಗೆ ಗೌರವ.ಧಾರ್ಮಿಕ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಿದ್ದು ಕಾಂಗ್ರೆಸ್ ಸರ್ಕಾರವಷ್ಟೇ: ಡಿಕೆಶಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>