ಚುನಾವಣೆ ಬಹಿಷ್ಕಾರ ಎಚ್ಚರಿಕೆ: ಕನ್ನಡ ಹೋರಾಟಗಾರ ನಿಜಧ್ವನಿ ಗೋವಿಂದರಾಜು ಮಾತನಾಡಿ, ‘ರಾಜಕೀಯ ಪಕ್ಷಗಳು ಸ್ಥಳೀಯರಿಗಲ್ಲದೆ ಹೊರಗಿನವರಿಗೆ ಮಣೆ ಹಾಕಿದರೆ, ಚುನಾವಣೆಯನ್ನು ಬಹಿಷ್ಕರಿಸುವಂತೆ ಕರೆ ನೀಡಲು ಆಂದೋಲನ ರೂಪಿಸಬೇಕಾಗುತ್ತದೆ. ಜಿಲ್ಲೆ, ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಸ್ಥಳೀಯರೇ ಸಂಸದರಾಗಬೇಕು’ ಎಂದು ಒತ್ತಾಯಿಸಿದರು.