<p><strong>ಚಿಂತಾಮಣಿ</strong>: ಆರ್ಸಿಬಿ ವಿಜಯೋತ್ಸವದ ಸಂದರ್ಭ ಕಾಲ್ತುಳಿತದಲ್ಲಿ ಮೃತಪಟ್ಟಿದ್ದ ತಾಲ್ಲೂಕಿನ ಕುರುಟಹಳ್ಳಿಯ ಕೆ.ಟಿ.ಶ್ರವಣ್ ಹಾಗೂ ಗೋಪಲ್ಲಿ ಗ್ರಾಮದ ಪ್ರಜ್ವಲ್ ಅವರ ಮನೆಗೆ ಭಾನುವಾರ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.</p>.<p>ಕುರುಟಹಳ್ಳಿಯ ಕೆ.ಟಿ.ಶ್ರವಣ್, ಬೆಂಗಳೂರಿನ ಅಂಬೇಡ್ಕರ್ ದಂತ ವೈದ್ಯಕೀಯ ಕಾಲೇಜಿನಲ್ಲಿ ಎರಡನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಭಾನುವಾರ ಕುರುಟಹಳ್ಳಿಯ ಶ್ರವಣ್ ಮನೆಗೆ ಭೇಟಿ ನೀಡಿ ಮೃತನ ತಂದೆ-ತಾಯಿ, ತಾತ ಕೃಷ್ಣಪ್ಪ ಹಾಗೂ ಕುಟುಂಬದವರಿಗೆ ಸಾಂತ್ವನ ಹೇಳಿದರು.</p>.<p>ಶ್ರವಣ್ ಗ್ರಾಮಕ್ಕೆ ಬಂದಾಗ ಕೃಷಿ ಚಟುವಟಿಕೆಗಳಲ್ಲಿ ನಿರತರಾಗುತ್ತಿದ್ದರು. ಅವರಿಗೆ ಕ್ರಿಕೆಟ್ ಅಥವಾ ಯಾವುದೇ ಆಟಗಾರನ ಹುಚ್ಚು ಅಭಿಮಾನ ಇರಲಿಲ್ಲ. ಆಕಸ್ಮಿಕವಾಗಿ ಸಂಭ್ರಮಾಚರಣೆ ವೀಕ್ಷಣೆಗೆ ಹೋಗಿದ್ದಾಗ ನಡೆದಿರುವ ದುರಂತದಿಂದ ದು:ಖವಾಗಿದೆ ಎಂದು ಸಚಿವರು ತಿಳಿಸಿದರು.</p>.<p>ಸರ್ಕಾರದಿಂದ ಸಿಗುವ ಪರಿಹಾರ ಹಾಗೂ ಇತರೆ ಎಲ್ಲ ಸೌಲಭ್ಯ ಒದಗಿಸಿಕೊಡಲು ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು. ಮೃತನ ಅಣ್ಣ ಕೃಷಿ ಪದವೀಧರನಾಗಿದ್ದು ಸರ್ಕಾರಿ ಉದ್ಯೋಗಕ್ಕಾಗಿ ಮನವಿ ಮಾಡಿದರು. ಈ ಬಗ್ಗೆ ಮುಖ್ಯಮಂತ್ರಿಯೊಂದಿಗೆ ಚರ್ಚೆ ನಡೆಸುವುದಾಗಿ ಭರವಸೆ ನೀಡಿದರು.</p>.<p>ಮುರುಗಮಲ್ಲ ಹೋಬಳಿಯ ಗೋಪಲ್ಲಿಯ ಪ್ರಜ್ವಲ್ ಮನೆಗೂ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಪ್ರಜ್ವಲ್ ಎಂಜಿನಿಯರಿಂಗ್ ಪದವೀಧರರಾಗಿದ್ದು ಇತ್ತೀಚೆಗೆ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದರು. ಅವರ ಸಹೋದರಿ ವ್ಯಾಸಂಗ ಮಾಡುತ್ತಿದ್ದು, ವಿದ್ಯಾಭ್ಯಾಸಕ್ಕೆ ಅಗತ್ಯವಿರುವ ನೆರವು ನೀಡುವುದಾಗಿ ಸಚಿವರು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ಆರ್ಸಿಬಿ ವಿಜಯೋತ್ಸವದ ಸಂದರ್ಭ ಕಾಲ್ತುಳಿತದಲ್ಲಿ ಮೃತಪಟ್ಟಿದ್ದ ತಾಲ್ಲೂಕಿನ ಕುರುಟಹಳ್ಳಿಯ ಕೆ.ಟಿ.ಶ್ರವಣ್ ಹಾಗೂ ಗೋಪಲ್ಲಿ ಗ್ರಾಮದ ಪ್ರಜ್ವಲ್ ಅವರ ಮನೆಗೆ ಭಾನುವಾರ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.</p>.<p>ಕುರುಟಹಳ್ಳಿಯ ಕೆ.ಟಿ.ಶ್ರವಣ್, ಬೆಂಗಳೂರಿನ ಅಂಬೇಡ್ಕರ್ ದಂತ ವೈದ್ಯಕೀಯ ಕಾಲೇಜಿನಲ್ಲಿ ಎರಡನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಭಾನುವಾರ ಕುರುಟಹಳ್ಳಿಯ ಶ್ರವಣ್ ಮನೆಗೆ ಭೇಟಿ ನೀಡಿ ಮೃತನ ತಂದೆ-ತಾಯಿ, ತಾತ ಕೃಷ್ಣಪ್ಪ ಹಾಗೂ ಕುಟುಂಬದವರಿಗೆ ಸಾಂತ್ವನ ಹೇಳಿದರು.</p>.<p>ಶ್ರವಣ್ ಗ್ರಾಮಕ್ಕೆ ಬಂದಾಗ ಕೃಷಿ ಚಟುವಟಿಕೆಗಳಲ್ಲಿ ನಿರತರಾಗುತ್ತಿದ್ದರು. ಅವರಿಗೆ ಕ್ರಿಕೆಟ್ ಅಥವಾ ಯಾವುದೇ ಆಟಗಾರನ ಹುಚ್ಚು ಅಭಿಮಾನ ಇರಲಿಲ್ಲ. ಆಕಸ್ಮಿಕವಾಗಿ ಸಂಭ್ರಮಾಚರಣೆ ವೀಕ್ಷಣೆಗೆ ಹೋಗಿದ್ದಾಗ ನಡೆದಿರುವ ದುರಂತದಿಂದ ದು:ಖವಾಗಿದೆ ಎಂದು ಸಚಿವರು ತಿಳಿಸಿದರು.</p>.<p>ಸರ್ಕಾರದಿಂದ ಸಿಗುವ ಪರಿಹಾರ ಹಾಗೂ ಇತರೆ ಎಲ್ಲ ಸೌಲಭ್ಯ ಒದಗಿಸಿಕೊಡಲು ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು. ಮೃತನ ಅಣ್ಣ ಕೃಷಿ ಪದವೀಧರನಾಗಿದ್ದು ಸರ್ಕಾರಿ ಉದ್ಯೋಗಕ್ಕಾಗಿ ಮನವಿ ಮಾಡಿದರು. ಈ ಬಗ್ಗೆ ಮುಖ್ಯಮಂತ್ರಿಯೊಂದಿಗೆ ಚರ್ಚೆ ನಡೆಸುವುದಾಗಿ ಭರವಸೆ ನೀಡಿದರು.</p>.<p>ಮುರುಗಮಲ್ಲ ಹೋಬಳಿಯ ಗೋಪಲ್ಲಿಯ ಪ್ರಜ್ವಲ್ ಮನೆಗೂ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಪ್ರಜ್ವಲ್ ಎಂಜಿನಿಯರಿಂಗ್ ಪದವೀಧರರಾಗಿದ್ದು ಇತ್ತೀಚೆಗೆ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದರು. ಅವರ ಸಹೋದರಿ ವ್ಯಾಸಂಗ ಮಾಡುತ್ತಿದ್ದು, ವಿದ್ಯಾಭ್ಯಾಸಕ್ಕೆ ಅಗತ್ಯವಿರುವ ನೆರವು ನೀಡುವುದಾಗಿ ಸಚಿವರು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>