<p><strong>ಚಿಕ್ಕಬಳ್ಳಾಪುರ</strong>: ರಾಜ್ಯದ ಗಡಿಯಲ್ಲಿರುವ ಮತ್ತು ಅತಿ ಹಿಂದುಳಿದ ಕ್ಷೇತ್ರ ಎನಿಸಿರುವ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರವು ಶೈಕ್ಷಣಿಕ ಸಾಧನೆಯಲ್ಲಿಯೂ ಹಿಂದಿದೆ. </p>.<p>ಇಂತಹ ಕಡೆ ಎಸ್ಎಸ್ಎಲ್ಸಿ ಫಲಿತಾಂಶವನ್ನು ಹೆಚ್ಚಿಸಿದರೆ ಶಿಕ್ಷಕರಿಗೆ ಉಡುಗೊರೆ ನೀಡುವುದಾಗಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಪ್ರಕಟಿಸಿದ್ದಾರೆ. </p>.<p>ಬಾಗೇಪಲ್ಲಿ, ಚೇಳೂರು ಮತ್ತು ಗುಡಿಬಂಡೆ ತಾಲ್ಲೂಕು ಒಳಗೊಂಡು ಈ ವಿಧಾನಸಭಾ ಕ್ಷೇತ್ರವಿದೆ. ಈ ಮೂರು ತಾಲ್ಲೂಕುಗಳ ಸರ್ಕಾರಿ ಪ್ರೌಢಶಾಲೆಗಳು ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆದರೆ ಶಾಲೆಯ ಶಿಕ್ಷಕರಿಗೆ ₹ 1 ಲಕ್ಷ ಉಡುಗೊರೆ ನೀಡಲು ಸುಬ್ಬಾರೆಡ್ಡಿ ಮುಂದಾಗಿದ್ದಾರೆ. </p>.<p>ವಸತಿಯುತ ಪ್ರೌಢಶಾಲೆಗಳನ್ನು ಹೊರತುಪಡಿಸಿ ಬಾಗೇಪಲ್ಲಿ ತಾಲ್ಲೂಕಿನಲ್ಲಿ 15, ಚೇಳೂರು ತಾಲ್ಲೂಕಿನಲ್ಲಿ 6 ಮತ್ತು ಗುಡಿಬಂಡೆ ತಾಲ್ಲೂಕಿನಲ್ಲಿ 12 ಸರ್ಕಾರಿ ಪ್ರೌಢಶಾಲೆಗಳು ಇವೆ. 2023–24ನೇ ಸಾಲಿನಲ್ಲಿ ಬಾಗೇಪಲ್ಲಿ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಗಳು ಶೇ 61.33 ಹಾಗೂ ಗುಡಿಬಂಡೆ ತಾಲ್ಲೂಕಿನಲ್ಲಿ ಶೇ 59.24 ರಷ್ಟು ಫಲಿತಾಂಶ ಪಡೆದಿವೆ. </p>.<p>ಎಸ್ಎಸ್ಎಲ್ಸಿ ಫಲಿತಾಂಶ ಹೆಚ್ಚಳಕ್ಕೆ ಗುಡಿಬಂಡೆ ತಾಲ್ಲೂಕಿಗೆ ‘ಸ್ಫೂರ್ತಿ’ ಮತ್ತು ಬಾಗೇಪಲ್ಲಿ ಮತ್ತು ಚೇಳೂರು ತಾಲ್ಲೂಕಿಗೆ ‘ಪ್ರೇರಣಾ’ ಹೆಸರಿನಲ್ಲಿ ತಾಲ್ಲೂಕು ಶಿಕ್ಷಣ ಇಲಾಖೆ ಮತ್ತು ಶಾಸಕರ ನೇತೃತ್ವದಲ್ಲಿ ಚಟುವಟಿಕೆಗಳು ನಡೆಯುತ್ತಿವೆ.</p>.<p>ಪೋಷಕರು, ಶಿಕ್ಷಕರು ಹಾಗೂ ಇಲಾಖೆಯ ಅಧಿಕಾರಿಗಳ ಜೊತೆ ಶಾಸಕರು ಸಭೆಗಳನ್ನು ನಡೆಸಿದ್ದಾರೆ. ಪ್ರತಿ ಸರ್ಕಾರಿ ಪ್ರೌಢಶಾಲೆಗಳಿಗೂ ಭೇಟಿ ನೀಡಿದ್ದು ಈ ವೇಳೆ ಲಕ್ಷ ಉಡುಗೊರೆಯ ಬಗ್ಗೆ ಶಾಸಕರು ಒತ್ತಿ ಹೇಳಿದ್ದಾರೆ.</p>.<p>ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಗಳ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರನ್ನು ಒಳಗೊಂಡು ಈ ‘ಪ್ರೇರಣಾ’ ಮತ್ತು ‘ಸ್ಫೂರ್ತಿ’ ಕಾರ್ಯಕ್ರಮಗಳನ್ನು ಸಂಘಟಿಸಲಾಗುತ್ತಿದೆ. </p>.<p>ಈ ಕಾರ್ಯಕ್ರಮಗಳ ಮೂಲಕ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಸಹ ಗುರುತಿಸಲಾಗಿದೆ. ಈ ವಿದ್ಯಾರ್ಥಿಗಳನ್ನು ಪ್ರಮುಖವಾಗಿ ದೃಷ್ಟಿಯಲ್ಲಿ ಇಟ್ಟುಕೊಂಡು ಶಿಕ್ಷಕರು ಬೋಧನೆ ಮಾಡುತ್ತಿದ್ದಾರೆ. ವಿಶೇಷ ತರಗತಿಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಅಲ್ಲದೆ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಅನುಕೂಲವಾಗಲಿ ಎಂದು ಕೈಪಿಡಿಗಳನ್ನು ಸಹ ರೂಪಿಸಲಾಗಿದೆ. </p>.<p>ಪ್ರತಿ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಅಲ್ಲಿನ ಕಲಿಕೆಯ ಗುಣಮಟ್ಟವನ್ನು ಸಹ ಶಾಸಕರು ಪರಿಶೀಲಿಸುತ್ತಿದ್ದಾರೆ. </p>.<p><strong>‘ಗರಿಷ್ಠ ಅಂಕ ಪಡೆಯುವ ವಿದ್ಯಾರ್ಥಿಗೂ ಬಹುಮಾನ’</strong></p><p>‘ಎಸ್ಎಸ್ಎಲ್ಸಿ ಫಲಿತಾಂಶ ಹೆಚ್ಚಳವನ್ನು ಶಿಕ್ಷಕರು ಸವಾಲಾಗಿ ಸ್ವೀಕರಿಸಬೇಕು. ಅವರಿಗೆ ಸ್ಫೂರ್ತಿ ಬರಲಿ ಎನ್ನುವ ಕಾರಣಕ್ಕೆ ₹ 1 ಲಕ್ಷ ಉಡುಗೊರೆ ನೀಡಲಾಗುವುದು’ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ‘ಪ್ರಜಾವಾಣಿ’ಗೆ ತಿಳಿಸಿದರು.</p><p>‘ತಾಲ್ಲೂಕಿನಲ್ಲಿ ಗರಿಷ್ಠ ಅಂಕ ಪಡೆಯುವ ವಿದ್ಯಾರ್ಥಿಗೂ ₹ 1 ಲಕ್ಷ ಬಹುಮಾನ ನೀಡಲಾಗುವುದು. ಈಗಾಗಲೇ ಮೂರು ತಾಲ್ಲೂಕಿನ ಎಲ್ಲ ಪ್ರೌಢಶಾಲೆಗೆ ಭೇಟಿ ನೀಡಿದ್ದೇನೆ. ಸರ್ಕಾರಿ ಪ್ರೌಢಶಾಲೆಗಳಲ್ಲಿ 2600 ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಇದ್ದಾರೆ. ಈ ಪೈಕಿ 800 ಮಕ್ಕಳು ಅನುತ್ತೀರ್ಣರಾಗುವ ಸಾಧ್ಯತೆ ಇದೆ ಎಂದು ನಾವು ಮಾಡಿರುವ ಪರೀಕ್ಷೆಯಲ್ಲಿ ಕಂಡು ಬಂದಿದೆ. ಆ ಮಕ್ಕಳನ್ನು ಕೇಂದ್ರೀಕರಿಸಿ ವಿಶೇಷ ತರಗತಿ ನಡೆಸಲಾಗುತ್ತಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ರಾಜ್ಯದ ಗಡಿಯಲ್ಲಿರುವ ಮತ್ತು ಅತಿ ಹಿಂದುಳಿದ ಕ್ಷೇತ್ರ ಎನಿಸಿರುವ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರವು ಶೈಕ್ಷಣಿಕ ಸಾಧನೆಯಲ್ಲಿಯೂ ಹಿಂದಿದೆ. </p>.<p>ಇಂತಹ ಕಡೆ ಎಸ್ಎಸ್ಎಲ್ಸಿ ಫಲಿತಾಂಶವನ್ನು ಹೆಚ್ಚಿಸಿದರೆ ಶಿಕ್ಷಕರಿಗೆ ಉಡುಗೊರೆ ನೀಡುವುದಾಗಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಪ್ರಕಟಿಸಿದ್ದಾರೆ. </p>.<p>ಬಾಗೇಪಲ್ಲಿ, ಚೇಳೂರು ಮತ್ತು ಗುಡಿಬಂಡೆ ತಾಲ್ಲೂಕು ಒಳಗೊಂಡು ಈ ವಿಧಾನಸಭಾ ಕ್ಷೇತ್ರವಿದೆ. ಈ ಮೂರು ತಾಲ್ಲೂಕುಗಳ ಸರ್ಕಾರಿ ಪ್ರೌಢಶಾಲೆಗಳು ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆದರೆ ಶಾಲೆಯ ಶಿಕ್ಷಕರಿಗೆ ₹ 1 ಲಕ್ಷ ಉಡುಗೊರೆ ನೀಡಲು ಸುಬ್ಬಾರೆಡ್ಡಿ ಮುಂದಾಗಿದ್ದಾರೆ. </p>.<p>ವಸತಿಯುತ ಪ್ರೌಢಶಾಲೆಗಳನ್ನು ಹೊರತುಪಡಿಸಿ ಬಾಗೇಪಲ್ಲಿ ತಾಲ್ಲೂಕಿನಲ್ಲಿ 15, ಚೇಳೂರು ತಾಲ್ಲೂಕಿನಲ್ಲಿ 6 ಮತ್ತು ಗುಡಿಬಂಡೆ ತಾಲ್ಲೂಕಿನಲ್ಲಿ 12 ಸರ್ಕಾರಿ ಪ್ರೌಢಶಾಲೆಗಳು ಇವೆ. 2023–24ನೇ ಸಾಲಿನಲ್ಲಿ ಬಾಗೇಪಲ್ಲಿ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಗಳು ಶೇ 61.33 ಹಾಗೂ ಗುಡಿಬಂಡೆ ತಾಲ್ಲೂಕಿನಲ್ಲಿ ಶೇ 59.24 ರಷ್ಟು ಫಲಿತಾಂಶ ಪಡೆದಿವೆ. </p>.<p>ಎಸ್ಎಸ್ಎಲ್ಸಿ ಫಲಿತಾಂಶ ಹೆಚ್ಚಳಕ್ಕೆ ಗುಡಿಬಂಡೆ ತಾಲ್ಲೂಕಿಗೆ ‘ಸ್ಫೂರ್ತಿ’ ಮತ್ತು ಬಾಗೇಪಲ್ಲಿ ಮತ್ತು ಚೇಳೂರು ತಾಲ್ಲೂಕಿಗೆ ‘ಪ್ರೇರಣಾ’ ಹೆಸರಿನಲ್ಲಿ ತಾಲ್ಲೂಕು ಶಿಕ್ಷಣ ಇಲಾಖೆ ಮತ್ತು ಶಾಸಕರ ನೇತೃತ್ವದಲ್ಲಿ ಚಟುವಟಿಕೆಗಳು ನಡೆಯುತ್ತಿವೆ.</p>.<p>ಪೋಷಕರು, ಶಿಕ್ಷಕರು ಹಾಗೂ ಇಲಾಖೆಯ ಅಧಿಕಾರಿಗಳ ಜೊತೆ ಶಾಸಕರು ಸಭೆಗಳನ್ನು ನಡೆಸಿದ್ದಾರೆ. ಪ್ರತಿ ಸರ್ಕಾರಿ ಪ್ರೌಢಶಾಲೆಗಳಿಗೂ ಭೇಟಿ ನೀಡಿದ್ದು ಈ ವೇಳೆ ಲಕ್ಷ ಉಡುಗೊರೆಯ ಬಗ್ಗೆ ಶಾಸಕರು ಒತ್ತಿ ಹೇಳಿದ್ದಾರೆ.</p>.<p>ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಗಳ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರನ್ನು ಒಳಗೊಂಡು ಈ ‘ಪ್ರೇರಣಾ’ ಮತ್ತು ‘ಸ್ಫೂರ್ತಿ’ ಕಾರ್ಯಕ್ರಮಗಳನ್ನು ಸಂಘಟಿಸಲಾಗುತ್ತಿದೆ. </p>.<p>ಈ ಕಾರ್ಯಕ್ರಮಗಳ ಮೂಲಕ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಸಹ ಗುರುತಿಸಲಾಗಿದೆ. ಈ ವಿದ್ಯಾರ್ಥಿಗಳನ್ನು ಪ್ರಮುಖವಾಗಿ ದೃಷ್ಟಿಯಲ್ಲಿ ಇಟ್ಟುಕೊಂಡು ಶಿಕ್ಷಕರು ಬೋಧನೆ ಮಾಡುತ್ತಿದ್ದಾರೆ. ವಿಶೇಷ ತರಗತಿಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಅಲ್ಲದೆ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಅನುಕೂಲವಾಗಲಿ ಎಂದು ಕೈಪಿಡಿಗಳನ್ನು ಸಹ ರೂಪಿಸಲಾಗಿದೆ. </p>.<p>ಪ್ರತಿ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಅಲ್ಲಿನ ಕಲಿಕೆಯ ಗುಣಮಟ್ಟವನ್ನು ಸಹ ಶಾಸಕರು ಪರಿಶೀಲಿಸುತ್ತಿದ್ದಾರೆ. </p>.<p><strong>‘ಗರಿಷ್ಠ ಅಂಕ ಪಡೆಯುವ ವಿದ್ಯಾರ್ಥಿಗೂ ಬಹುಮಾನ’</strong></p><p>‘ಎಸ್ಎಸ್ಎಲ್ಸಿ ಫಲಿತಾಂಶ ಹೆಚ್ಚಳವನ್ನು ಶಿಕ್ಷಕರು ಸವಾಲಾಗಿ ಸ್ವೀಕರಿಸಬೇಕು. ಅವರಿಗೆ ಸ್ಫೂರ್ತಿ ಬರಲಿ ಎನ್ನುವ ಕಾರಣಕ್ಕೆ ₹ 1 ಲಕ್ಷ ಉಡುಗೊರೆ ನೀಡಲಾಗುವುದು’ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ‘ಪ್ರಜಾವಾಣಿ’ಗೆ ತಿಳಿಸಿದರು.</p><p>‘ತಾಲ್ಲೂಕಿನಲ್ಲಿ ಗರಿಷ್ಠ ಅಂಕ ಪಡೆಯುವ ವಿದ್ಯಾರ್ಥಿಗೂ ₹ 1 ಲಕ್ಷ ಬಹುಮಾನ ನೀಡಲಾಗುವುದು. ಈಗಾಗಲೇ ಮೂರು ತಾಲ್ಲೂಕಿನ ಎಲ್ಲ ಪ್ರೌಢಶಾಲೆಗೆ ಭೇಟಿ ನೀಡಿದ್ದೇನೆ. ಸರ್ಕಾರಿ ಪ್ರೌಢಶಾಲೆಗಳಲ್ಲಿ 2600 ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಇದ್ದಾರೆ. ಈ ಪೈಕಿ 800 ಮಕ್ಕಳು ಅನುತ್ತೀರ್ಣರಾಗುವ ಸಾಧ್ಯತೆ ಇದೆ ಎಂದು ನಾವು ಮಾಡಿರುವ ಪರೀಕ್ಷೆಯಲ್ಲಿ ಕಂಡು ಬಂದಿದೆ. ಆ ಮಕ್ಕಳನ್ನು ಕೇಂದ್ರೀಕರಿಸಿ ವಿಶೇಷ ತರಗತಿ ನಡೆಸಲಾಗುತ್ತಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>